ಶಿರಸಿ ಹುಡುಗನ ಹೌಡಿ ಮೋದಿ ಸೆಲ್ಫಿ

ಟ್ರಂಪ್‌, ಮೋದಿ ಜತೆಗೆ ಶಿರಸಿಯ ಸಾತ್ವಿಕ್‌ ಸೆಲ್ಫಿ

Team Udayavani, Sep 23, 2019, 11:10 PM IST

Ms

ಉಭಯ ದೇಶಗಳ ನಾಯಕರ ಮಧ್ಯೆ ಸೆಲ್ಫಿ ತೆಗೆಸಿಕೊಂಡ ಕನ್ನಡಿಗ.

ಶಿರಸಿ/ಹೂಸ್ಟನ್‌: ಪ್ರಪಂಚದಾದ್ಯಂತ ಕುತೂಹಲ ಮೂಡಿಸಿದ್ದ “ಹೌಡಿ ಮೋದಿ’ ಸಮಾರಂಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಟ್ರಂಪ್‌ ಜತೆ ಶಿರಸಿ ಮೂಲದ ಬಾಲಕನೊಬ್ಬ ಸೆಲ್ಫಿ ತೆಗೆಸಿಕೊಂಡ ಫೋಟೊ ವೈರಲ್‌ ಆಗಿದೆ.

ಭಾರತೀಯ ಕಾಲಮಾನದ ಪ್ರಕಾರ ಹ್ಯೂಸ್ಟನ್‌ನಲ್ಲಿ ಭಾನುವಾರ ರಾತ್ರಿ ನಡೆದ ಹೌಡಿ ಮೋದಿ ಕಾರ್ಯಕ್ರಮದಲ್ಲಿ ಯೋಗ ಪ್ರದರ್ಶನ ನೀಡಲು ತೆರಳಿದ್ದ ಶಿರಸಿ ಮೂಲದ ಸಾತ್ವಿಕ್‌ ಹೆಗಡೆ, ಅಮೆರಿಕದ ಟೆಕ್ಸಾಸ್‌ನ ಲೂಯಿಸ್‌ ಡಿ ಬ್ರಾಂಡಿಸ್‌ ಸ್ಕೂಲ್‌ನಲ್ಲಿ 9ನೇ ತರಗತಿ ಓದುತ್ತಿದ್ದಾನೆ.

ಸಾತ್ವಿಕ್‌ ಶಿರಸಿ ತಾಲೂಕಿನ ತೋಳಗಾರಗದ್ದೆ ಪ್ರಭಾಕರ ಹೆಗಡೆ ಹಾಗೂ ಸಿದ್ದಾಪುರ ತಾಲೂಕಿನ ಕರ್ಕಿಸವಲಿನ ಮೇಧಾ ಹೆಗಡೆ ದಂಪತಿ ಪುತ್ರ. ಅಲ್ಲಿನ ಸಮಾರಂಭದ ಸಭಾಂಗಣದಲ್ಲಿ ನಡೆದು ಬರುತ್ತಿದ್ದ ಉಭಯ ನಾಯಕರಲ್ಲಿ ಫೋಟೋಕ್ಕಾಗಿ ವಿನಂತಿಸಿಕೊಂಡು ಕಿಸೆಯಿಂದ ಮೊಬೈಲ್‌ ತೆಗೆದಾಗ ಇಬ್ಬರೂ ಸಮ್ಮತಿಸಿ ನಗುತ್ತಲೇ ಪೋಸ್‌ ನೀಡಿದ್ದಾರೆ. ಈ ವೇಳೆ ತೆಗೆದ ಸೆಲ್ಫಿ ಈಗ ವೈರಲ್‌ ಆಗಿದೆ. ಇದೇ ವೇಳೆ ಮೋದಿ ಹುಡುಗನ ಬೆನ್ನು ತಟ್ಟಿದ ವಿಡಿಯೋ ಕೂಡ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್‌ ಆಗಿದೆ.

ಮೋದಿ ಮೆಚ್ಚುಗೆ
ಹೌಡಿ ಮೋದಿ ಕಾರ್ಯಕ್ರಮದ ವೇದಿಕೆಗೆ ಮೋದಿ ಮತ್ತು ಟ್ರಂಪ್‌ ಆಗಮಿಸುವುದಕ್ಕೂ ಮುನ್ನ ಸುಮಾರು ಒಂದೂವರೆ ಗಂಟೆ ಸಾಂಸ್ಕೃತಿಕ ಕಾರ್ಯಕ್ರಮ ನಡೆದಿತ್ತು. ಇದರಲ್ಲಿ ಹಲವು ಮಕ್ಕಳೂ ಭಾಗವಹಿಸಿದ್ದರು. ಮೋದಿ ಹಾಗೂ ಟ್ರಂಪ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಇಬ್ಬರೂ ನಾಯಕರು, ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೆಲವು ಮಕ್ಕಳನ್ನು ಭೇಟಿ ಮಾಡಿದರು. ಈ ವೇಳೆ ಸಾಲಾಗಿ ನಿಂತ ಮಕ್ಕಳ ಒಂದು ಅಂಚಿನಲ್ಲಿ ಸಾತ್ವಿಕ್‌ ಕೂಡ ನಿಂತಿದ್ದ. ಇಬ್ಬರೂ ನಾಯಕರು ತನ್ನ ಬಳಿ ಬಂದಾಗ, ಟ್ರಂಪ್‌ ಬಳಿ ಒಂದು ಸೆಲ್ಫಿ ತೆಗೆಯಬಹುದೇ ಎಂದು ಸಾತ್ವಿಕ್‌ ವಿನಂತಿಸಿದ. ತಕ್ಷಣ ಟ್ರಂಪ್‌ ಒಪ್ಪಿಕೊಂಡರು. ಅಷ್ಟೇ ಅಲ್ಲ, ಎರಡು ಹೆಜ್ಜೆ ಮುಂದೆ ನಡೆದಿದ್ದ ಮೋದಿಯನ್ನೂ ಕರೆದು ಸಾತ್ವಿಕ್‌ ಜೊತೆಗೆ ಸೆಲ್ಫಿಗೆ ಪೋಸು ನೀಡಿದರು. ಸೆಲ್ಫಿ ತೆಗೆದುಕೊಂಡ ನಂತರ ಸಾತ್ವಿಕ್‌ ಬೆನ್ನು ತಟ್ಟಿ ಮೋದಿ ಮೆಚ್ಚುಗೆ ಸೂಚಿಸಿದರು.

ಮರೆಯಲಾಗದ ಸೆಲ್ಫಿ
ಈ ಸೆಲ್ಫಿ ಈಗ ಟ್ವಿಟರ್‌ ಹಾಗೂ ಫೇಸ್‌ಬುಕ್‌ ಸೇರಿದಂತೆ ಸೋಷಿಯಲ್‌ ಮೀಡಿಯಾದಲ್ಲಿ ಸೆನ್ಸೇಶನ್‌ ಸೃಷ್ಟಿಸಿದೆ. ಈ 9 ವರ್ಷದ ಬಾಲಕನ ಜೀವನದಲ್ಲಿ ಮರೆಯಲಾಗದ ಸೆಲ್ಫಿ ಇದು ಎಂದು ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ. ಈ ಬಾಲಕನ ಧೈರ್ಯಕ್ಕೆ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ. ಅಲ್ಲದೆ, ಈ ಸೆಲ್ಫಿ ಮತ್ತು ವೀಡಿಯೋ ಪವರ್‌ಫ‌ುಲ್‌ ಸೆಲ್ಫಿ ಎಂಬ ಹೆಸರಿನಲ್ಲಿ ಟ್ರೆಂಡ್‌ ಆಗಿದೆ. ಲಕ್ಷಾಂತರ ಜನರು ಈ ವೀಡಿಯೋವನ್ನು ವೀಕ್ಷಿಸಿದ್ದಾರೆ.

ಅಷ್ಟೇ ಅಲ್ಲ, ಈ ವಿಡಿಯೋವನ್ನು ಪ್ರಧಾನಿ ಮೋದಿ ಕೂಡ ಟ್ವಿಟರ್‌ನಲ್ಲಿ ಶೇರ್‌ ಮಾಡಿ, ಹೌಡಿ ಮೋದಿ ಕಾರ್ಯಕ್ರಮದ ನೆನಪಿಡಬಹುದಾದ ಘಳಿಗೆ ಎಂದು ಅವರು ಶೀರ್ಷಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.