ವಾರಣಾಸಿಯ ಹೆದ್ದಾರಿ ಪರಿಶೀಲಿಸಿದ ಪ್ರಧಾನಿ… ಇಂದು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ


Team Udayavani, Feb 23, 2024, 9:19 AM IST

ವಾರಣಾಸಿಯ ಹೆದ್ದಾರಿ ಪರಿಶೀಲಿಸಿದ ಪ್ರಧಾನಿ… ಇಂದು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ತಡರಾತ್ರಿ ವಾರಾಣಸಿಗೆ ಆಗಮಿಸಿದ್ದು ಇಲ್ಲಿನ ಹೆದ್ದಾರಿಯ ಪರಿಶೀಲನೆ ನಡೆಸಿದರು. ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಕಾಶಿಗೆ ಬಂದಿಳಿದ ಪ್ರಧಾನಿ ಮೋದಿ ಇತ್ತೀಚಿಗೆ ಉದ್ಘಾಟನೆಗೊಂಡಿದ್ದ ಶಿವಪುರ-ಫುಲ್ವಾರಿಯಾ-ಲಹರ್ತಾರಾ ಹೆದ್ದಾರಿಯನ್ನು ಪರಿಶೀಲಿಸಿದರು.

ಬಳಿಕ ಈ ಕುರಿತು ತಮ್ಮ X ಖಾತೆಯಲ್ಲಿ ಭೇಟಿ ನೀಡಿದ ವಿಚಾರವನ್ನು ಹಂಚಿಕೊಂಡಿದ್ದಾರೆ ಪ್ರಧಾನಿ ಜೊತೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೊತೆಗಿದ್ದರು.

ಇಂದು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ:
ಎರಡು ದಿನಗಳ ಭೇಟಿಗಾಗಿ ವಾರಣಾಸಿಗೆ ಬಂದಿರುವ ಪ್ರಧಾನಿ ಅವರು ಇಂದು 13,202 ಕೋಟಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಜಿಲ್ಲಾಡಳಿತದ ಹಿರಿಯ ಅಧಿಕಾರಿ, ಇಂದು ಪ್ರಧಾನಿಯವರು 11,972 ಕೋಟಿ ಮೌಲ್ಯದ 24 ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಜೊತೆಗೆ 2,195 ಕೋಟಿ ಮೌಲ್ಯದ 12 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಇದಾದ ಬಳಿಕ ಪ್ರಧಾನಮಂತ್ರಿಯವರು ಬಿಎಚ್‌ಯುನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ, ಅಲ್ಲಿ ಅವರು ಕಾಶಿ ಸಂಸದ್ ಜ್ಞಾನ ಪ್ರತಿಯೋಗಿತಾ, ಕಾಶಿ ಸಂಸದ್ ಛಾಯಾಗ್ರಹಣ ಪ್ರತಿಯೋಗಿತಾ ಮತ್ತು ಕಾಶಿ ಸಂಸದ್ ಸಂಸ್ಕೃತ ಪ್ರತಿಯೋಗಿತಾ ವಿಜೇತರಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

ವಾರಣಾಸಿಯ ಸಂಸ್ಕೃತ ವಿದ್ಯಾರ್ಥಿಗಳಿಗೆ ಪುಸ್ತಕಗಳು, ಸಮವಸ್ತ್ರದ ಸೆಟ್‌ಗಳು, ಸಂಗೀತ ವಾದ್ಯಗಳು ಮತ್ತು ಮೆರಿಟ್ ವಿದ್ಯಾರ್ಥಿವೇತನವನ್ನು ವಿತರಿಸುತ್ತಾರೆ ಮತ್ತು ಭಾಗವಹಿಸುವವರ ಜೊತೆ ‘ಸನ್ವರ್ತಿ ಕಾಶಿ’ ವಿಷಯದ ಕುರಿತು ತಮ್ಮ ಛಾಯಾಚಿತ್ರ ವಿಚಾರದ ಬಗ್ಗೆಯೂ ಸಂವಾದ ನಡೆಸುತ್ತಾರೆ.

“ಪ್ರಧಾನಿ ಮೋದಿ ಅವರು ಸೀರ್ಗೋವರ್ಧನ್‌ನಲ್ಲಿರುವ ಸಂತ ರವಿದಾಸ್ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ, ಬಳಿಕ ಸಂತ ರವಿದಾಸ್ ಜನ್ಮಸ್ಥಳದ ಸುತ್ತಮುತ್ತ ಸುಮಾರು 32 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಸಂತ ರವಿದಾಸ್ ಪ್ರತಿಮೆ ಅನಾವರಣ, ವಸ್ತುಸಂಗ್ರಹಾಲಯದ ಶಂಕುಸ್ಥಾಪನೆ ಮತ್ತು ಸುಮಾರು 62 ಕೋಟಿ ವೆಚ್ಚದ ಉದ್ಯಾನವನ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಅವರು ಉದ್ಘಾಟಿಸಲಿದ್ದಾರೆ ಎಂದು ಕಾಶಿ ಪ್ರದೇಶ ಬಿಜೆಪಿ ಅಧ್ಯಕ್ಷ ದಿಲೀಪ್ ಪಟೇಲ್ ತಿಳಿಸಿದರು.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.