ಶ್ರೇಷ್ಠ ಯುಗಾರಂಭ; ಅಮೃತಕಾಲವನ್ನು ಕರ್ತವ್ಯಕಾಲವಾಗಿ ರೂಪಿಸಿ

ಬಿಜೆಪಿ ಪದಾಧಿಕಾರಿಗಳಿಗೆ ಪ್ರಧಾನಿ ಮೋದಿ ಕರೆ

Team Udayavani, Jan 17, 2023, 9:44 PM IST

ಶ್ರೇಷ್ಠ ಯುಗಾರಂಭ; ಅಮೃತಕಾಲವನ್ನು ಕರ್ತವ್ಯಕಾಲವಾಗಿ ರೂಪಿಸಿ

ನವದೆಹಲಿ:“ಭಾರತದ ಶ್ರೇಷ್ಠ ಯುಗವು ಸಮೀಪಿಸುತ್ತಿದೆ. ನಮ್ಮ ಇಡೀ ಪಕ್ಷವು ದೇಶದ ಅಭಿವೃದ್ಧಿಗೆ ತನ್ನನ್ನು ತಾನು ಅರ್ಪಿಸಿಕೊಂಡು, “ಅಮೃತ ಕಾಲ’ವನ್ನು (2047ರವರೆಗಿನ 25 ವರ್ಷಗಳ ಅವಧಿ) “ಕರ್ತವ್ಯ ಕಾಲ’ವಾಗಿ ರೂಪಿಸಬೇಕು.’

ಇದು ದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ನೀಡಿದ ಕರೆ.

2024ರ ಲೋಕಸಭೆ ಚುನಾವಣೆಗೆ ಇನ್ನು ನಮಗೆ ಉಳಿದಿರುವುದು 400 ದಿನಗಳು ಮಾತ್ರ. ಪಕ್ಷದ ಪದಾಧಿಕಾರಿಗಳೆಲ್ಲರೂ ಚುನಾವಣೆಯ ಲಾಭ-ನಷ್ಟದ ಲೆಕ್ಕಾಚಾರವನ್ನು ಬದಿಗಿಟ್ಟು ಬೋಹ್ರಾಗಳು, ಪಸ್ಮಂದಾ, ಸಿಖ್‌ಗಳು ಮುಂತಾದ ಅಲ್ಪಸಂಖ್ಯಾತರೂ ಸೇರಿದಂತೆ ಸಮಾಜದ ಪ್ರತಿಯೊಂದು ವರ್ಗವನ್ನೂ ತಲುಪಬೇಕು. ತಮ್ಮನ್ನು ತಾವು ಅರ್ಪಿಸಿಕೊಂಡು ಎಲ್ಲರನ್ನೂ ತಲುಪುವಂತಾಗಬೇಕು ಎಂದು ಮೋದಿ ಹೇಳಿದರು.

ಮೋದಿಯವರ ಈ ಭಾಷಣವು ಕೇಸರಿ ಪಕ್ಷವನ್ನು ಮತ್ತಷ್ಟು ವಿಸ್ತರಣೆ ಮಾಡುವ ನಿಟ್ಟಿನಲ್ಲಿ ಅವರಿಗಿರುವ ದೂರದೃಷ್ಟಿಯನ್ನು ತೋರಿಸಿತು ಎಂದು ಕಾರ್ಯಕಾರಿಣಿಯಲ್ಲಿ ಭಾಗಿಯಾಗಿದ್ದ ಅನೇಕರು ಅಭಿಪ್ರಾಯಪಟ್ಟರು. ಜತೆಗೆ, ತಮ್ಮ ಭಾಷಣದುದ್ದಕ್ಕೂ ಮೋದಿ ಅವರು “ಸೂಫಿ ತತ್ವ’ದ ಬಗ್ಗೆ ಅತಿ ಹೆಚ್ಚು ಪ್ರಸ್ತಾಪಿಸಿದರು ಎಂದೂ ಹಲವು ಹೇಳಿದರು. ಅಲ್ಲದೇ, ಬೇರೆ ಬೇರೆ ವಲಯಗಳಿಗೆ ಸೇರಿದ ವೃತ್ತಿಪರರನ್ನು ಸಂಪರ್ಕಿಸಿ, ವಿಶ್ವವಿದ್ಯಾಲಯಗಳು, ಚರ್ಚುಗಳೊಂದಿಗೂ ಸಂಪರ್ಕ ಸಾಧಿಸಿ ಎಂದೂ ಕರೆ ನೀಡಿದ್ದಾಗಿಯೂ ತಿಳಿಸಿದರು.

ಇದೇ ವೇಳೆ, ಅತಿಯಾದ ಆತ್ಮವಿಶ್ವಾಸ ಬೇಡ ಎಂಬುದನ್ನೂ ಒತ್ತಿ ಹೇಳಿದ ಮೋದಿ, ಇದಕ್ಕೆ 1998ರ ಮಧ್ಯಪ್ರದೇಶ ಚುನಾವಣೆಯಲ್ಲಿ ಬಿಜೆಪಿಯ ಸೋಲನ್ನು ಉದಾಹರಣೆಯಾಗಿ ನೀಡಿದರು.

ಮೋದಿ ಸಲಹೆಗಳೇನು?
– ದೇಶದ ಅಭಿವೃದ್ಧಿಗೆ ಪಣತೊಟ್ಟು “ಅಮೃತ ಕಾಲ’ವನ್ನು “ಕರ್ತವ್ಯ ಕಾಲ’ವಾಗಿ ರೂಪಿಸಿ.
– ಸಮಾಜದ ಪ್ರತಿಯೊಂದು ವರ್ಗವನ್ನೂ ತಲುಪಿ. ಆದರೆ ಅತಿಯಾದ ಆತ್ಮವಿಶ್ವಾಸ ಬೇಡ.
– ಬಿಜೆಪಿ ಈಗ ಕೇವಲ ರಾಜಕೀಯ ಚಳವಳಿಯಲ್ಲ, ಅದೊಂದು ಸಾಮಾಜಿಕ ಚಳವಳಿ
– 18-25ರ ವಯೋಮಾನದವರಿಗೆ ಹಿಂದಿನ ಸರ್ಕಾರಗಳ ಭ್ರಷ್ಟಾಚಾರ, ದುರಾಡಳಿತದ ಬಗ್ಗೆ ಗೊತ್ತಿಲ್ಲ
– ಅವರಿಗೆ ಈ ಕುರಿತು ಮಾಹಿತಿ ನೀಡುವ, ಜಾಗೃತಿ ಮೂಡಿಸುವ ಕೆಲಸವಾಗಬೇಕು
– ಗಡಿ ಗ್ರಾಮಗಳಲ್ಲಿ ಪಕ್ಷದ ವಿವಿಧ ಮೋರ್ಚಾಗಳು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡು ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ನೀಡಬೇಕು

ಮೋದಿ ನಾಯಕತ್ವಕ್ಕೆ ಬಹುಪರಾಕ್‌
ಭಾರತವನ್ನು ಜಗತ್ತಿನ 5ನೇ ಅತಿದೊಡ್ಡ ಆರ್ಥಿಕತೆಯಾಗಿ ಬದಲಾಯಿಸುವಲ್ಲಿ ಪ್ರಧಾನಿ ಮೋದಿ ಅವರ ನಾಯಕತ್ವದ ಪಾತ್ರವನ್ನು ಶ್ಲಾ ಸಿ ಸಾಮಾಜಿಕ-ಆರ್ಥಿಕ ನಿರ್ಣಯವನ್ನು ಬಿಜೆಪಿ ಕಾರ್ಯಕಾರಿಣಿ ಕೈಗೊಂಡಿದೆ. ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳು ಜನರ ಆಕಾಂಕ್ಷೆಗಳನ್ನು ಈಡೇರಿಸುತ್ತಿವೆ ಎಂದೂ ನಿರ್ಣಯದಲ್ಲಿ ಉಲ್ಲೇಖೀಸಲಾಗಿದೆ.

ಪ್ರಧಾನಿ ಮೋದಿ ಅವರ ನೇತೃತ್ವದ ಸರ್ಕಾರದ ಅವಧಿಯಲ್ಲಿ ಅಂದರೆ ಕಳೆದ 9 ವರ್ಷಗಳಲ್ಲಿ ಜಾಗತಿಕವಾಗಿ ಭಾರತದ ವರ್ಚಸ್ಸು ವೃದ್ಧಿಸಿದೆ. ಹಿಂದೆಲ್ಲ ಬಿಕ್ಕಟ್ಟು ಎದುರಾದಾಗ ಭಾರತ ಬೇರೆ ದೇಶಗಳನ್ನು ಅವಲಂಬಿಸಬೇಕಾಗಿತ್ತು. ಈಗ ಎಲ್ಲ ಸವಾಲುಗಳನ್ನೂ ಎದುರಿಸಿ, ಇತರರಿಗೂ ನೆರವಾಗುತ್ತಿದೆ.
– ಎಸ್‌.ಜೈಶಂಕರ್‌, ವಿದೇಶಾಂಗ ಸಚಿವ

ಟಾಪ್ ನ್ಯೂಸ್

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.