ಇಂಡೋ-ಪಾಕ್ ಗಡಿಯಲ್ಲಿ ಯೋಧರ ಜತೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ
Team Udayavani, Oct 27, 2019, 10:45 PM IST
ನವದೆಹಲಿ:ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ ಒಸಿ)ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಯೋಧರ ಜತೆ ದೀಪಾವಳಿ ಸಂಭ್ರವನ್ನು ಆಚರಿಸಿದ್ದು ಈ ಬಾರಿಯ ವಿಶೇಷತೆಯಾಗಿದೆ. ಗಡಿ ರೇಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧರಿಗೆ ಸಿಹಿ ಹಂಚುವ ಮೂಲಕ ಪ್ರಧಾನಿ ಮೋದಿ ದೀಪಾವಳಿ ಆಚರಿಸಿದರು.
ದೇಶಾದ್ಯಂತ ಎಲ್ಲರೂ ಹಬ್ಬವನ್ನೂ ಆಚರಿಸುತ್ತಿರುವ ನಡುವೆಯೂ ದೇಶದ ಗಡಿಭಾಗದಲ್ಲಿ ಬಿಗಿ ಭದ್ರತೆಯಲ್ಲಿ ತೊಡಗಿರುವ ಯೋಧರ ಕಾರ್ಯದಕ್ಷತೆಯನ್ನು ಪ್ರಧಾನಿ ಮೋದಿ ಶ್ಲಾಘಿಸಿದರು.
ದೀಪಾವಳಿ ಸಂದರ್ಭದಲ್ಲಿ ಜನರು ತಮ್ಮ ಕುಟುಂಬದ ಜತೆ ಬೆಳಕಿನ ಹಬ್ಬವನ್ನು ಆಚರಿಸುವುದು ಸಂಪ್ರದಾಯವಾಗಿದೆ. ಈ ಹಿನ್ನೆಲೆಯಲ್ಲಿ ನಾನೂ ಕೂಡಾ ನನ್ನ ಕುಟುಂಬ(ಯೋಧರ) ಜತೆ ದೀಪಾವಳಿ ಆಚರಿಸಲು ನಿರ್ಧರಿಸಿರುವುದಾಗಿ ಈ ಸಂದರ್ಭದಲ್ಲಿ ಹೇಳೀದರು.
ಹೀಗಾಗಿ ದೀಪಾವಳಿ ಹಬ್ಬವನ್ನು ನಿಮ್ಮ ಜತೆ ಆಚರಿಸುವ ನಿಟ್ಟಿನಲ್ಲಿ ಇಲ್ಲಿಗೆ ಆಗಮಿಸಿದ್ದೇನೆ. ನೀವು ನಮ್ಮ ಕುಟುಂಬ ಎಂದು ನೆರೆದಿದ್ದ ದೇಶದ ಯೋಧರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.
ಎಲ್ಲಾ ಜನಸಾಮಾನ್ಯರು ತಮ್ಮ ಕುಟುಂಬವೇ ಮೊದಲು ಎಂದು ಆಲೋಚಿಸುತ್ತಾರೆ. ಆದರೆ ದೇಶದ ಸೈನಿಕರಿಗೆ ಭಾರತವೇ ತಾಯಿ ಎಂದು ಭಾವಿಸುತ್ತಾರೆ. ಅಲ್ಲದೇ ದೇಶದ 130 ಕೋಟಿ ಜನರಿಗೆ ರಕ್ಷಣೆಯನ್ನು ನೀಡುತ್ತಿದ್ದಾರೆ. ನಮ್ಮ ದೇಶ ಮತ್ತು ನಮ್ಮ ಕರ್ತವ್ಯ ಮೊದಲು ಎಂಬುದು ನಿಮ್ಮ ಆದ್ಯತೆಯಾಗಿದೆ. ಮಿಕ್ಕಿದ್ದೆಲ್ಲವೂ ನಂತರ ಸ್ಥಾನ ಪಡೆಯಲಿದೆ. ಆದರೆ ಈ ಹಬ್ಬದ ಸಂದರ್ಭದಲ್ಲಿ ಕುಟುಂಬದ ಸದಸ್ಯರು ದೀಪಾವಳಿಯನ್ನು ಒಟ್ಟಿಗೆ ಆಚರಿಸಬೇಕೆಂದು ಬಯಸುತ್ತಾರೆ. ಆದರೆ ನೀವು ಗಡಿಯಲ್ಲಿ ರಕ್ಷಣೆಯಲ್ಲಿ ತೊಡಗಿರುತ್ತೀರಿ ಎಂದು ಈ ಸಂದರ್ಭದಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?