ಪಾಕ್ ರಾಷ್ಟ್ರೀಯ ದಿನಾಚರಣೆಗೆ ಸ್ಯಾಮ್ ಪಿತ್ರೋಡ ಚಾಲನೆ: ಮೋದಿ ಟೀಕೆ
Team Udayavani, Mar 22, 2019, 10:30 AM IST
ಹೊಸದಿಲ್ಲಿ : ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ನಿಕಟವರ್ತಿಯಾಗಿರುವ ಸ್ಯಾಮ್ ಪಿತ್ರೋಡ ಅವರು ಪಾಕ್ ಪರ ನಿರ್ಲಜ್ಜ ಹೇಳಿಕೆಗಳನ್ನು ನೀಡುವ, ಮೂಲಕ ಕಾಂಗ್ರೆಸ್ ಪರವಾಗಿ, ಪಾಕಿಸ್ಥಾನ ರಾಷ್ಟ್ರೀಯ ದಿನಾಚರಣೆಗೆ ಚಾಲನೆ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಕಟುವಾಗಿ ಟೀಕಿಸಿದ್ದಾರೆ.
“ಭಾರತೀಯ ಸಶಸ್ತ್ರ ಪಡೆಯನ್ನು ಕೀಳಾಗಿ ಕಾಣುವ ಮೂಲಕ ಕಾಂಗ್ರೆಸ್ ಪಕ್ಷದ ಅತ್ಯಂತ ವಿಶ್ವಸನೀಯ ಸಲಹೆಗಾರ ಮತ್ತು ಮಾರ್ಗದರ್ಶಕ (ಸ್ಯಾಮ್ ಪಿತ್ರೋಡ) ಇಂದು ಪಾಕ್ ರಾಷ್ಟ್ರೀಯ ದಿನಾಚರಣೆಗೆ ಚಾಲನೆ ನೀಡಿದ್ದಾರೆ, ಶೇಮ್ ‘ ಎಂದು ಪ್ರಧಾನಿ ಮೋದಿ ಟ್ವಿಟರ್ನಲ್ಲಿ ಬರೆದಿದ್ದಾರೆ.
“ಪುಲ್ವಾಮಾ ರೀತಿಯ ಉಗ್ರ ದಾಳಿಗಳು ಎಲ್ಲ ಕಾಲದಲ್ಲೂ ನಡೆಯುತ್ತವೆ. ಅದಕ್ಕಾಗಿ ಪಾಕಿಸ್ಥಾನವನ್ನು ದೂರುವುದು ಸರಿಯಲ್ಲ. ಹಾಗೆಯೇ ಪಾಕಿಸ್ಥಾನದ ಒಳನುಗ್ಗಿ ಅಲ್ಲಿನ ಉಗ್ರ ತರಬೇತಿ ಶಿಬಿರಗಳ ಮೇಲೆ ಭಾರತೀಯ ವಾಯು ಪಡೆ ಬಾಂಬ್ ದಾಳಿ ನಡೆಸಿರುವುದು ಕೂಡ ಸರಿಯಲ್ಲ’ ಎಂದು ಸ್ಯಾಮ್ ಪಿತ್ರೋಡ ಇಂದಷ್ಟೇ ತಮ್ಮ ಅಭಿಪ್ರಾಯ, ನಿಲುವು ಪ್ರಕಟಿಸಿದ್ದರು. ಮಾತ್ರವಲ್ಲದೆ ಐಎಎಫ್ ವಾಯುದಾಳಿಯಲ್ಲಿ ಸತ್ತಿರುವ ಉಗ್ರರ ಸಂಖ್ಯೆ ಎಷ್ಟು ? ಎಂದು ಪ್ರಧಾನಿಯನ್ನು ಪ್ರಶ್ನಿಸಿದ್ದರು.
“ವಿಪಕ್ಷಗಳು ನಮ್ಮ ಸಶಸ್ತ್ರ ಪಡೆಗಳನ್ನು ಪದೇ ಪದೇ ಅವಮಾನಿಸುತ್ತಿವೆ; ದೇಶ ಬಾಂಧವರಲ್ಲಿ ನನ್ನ ಕೋರಿಕೆ ಏನೆಂದರೆ ಈ ರೀತಿಯ ನಾಚಿಕೆಗೇಡಿನ ಹೇಳಿಕೆಯನ್ನು ನೀಡುತ್ತಿರುವ ವಿಪಕ್ಷ ನಾಯಕರನ್ನು ನೀವು ಪ್ರಶ್ನಿಸಬೇಕು; ನೀವು ಅವರಿಗೆ ಹೇಳಬೇಕು : 130 ಕೋಟಿ ಭಾರತೀಯರು ಎಂದೂ ನಿಮ್ಮನ್ನು ನಿಮ್ಮ ಈ ರೀತಿಯ ನಾಚಿಕೆಗೇಡಿನ ಹೇಳಿಕೆಗೆ ಕ್ಷಮಿಸುವುದಿಲ್ಲ. ಇಡಿಯ ದೇಶ ನಮ್ಮ ಭದ್ರತಾ ಪಡೆಗಳ ಬೆಂಬಲಕ್ಕೆ ದೃಢವಾಗಿ ನಿಂತಿದೆ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ