ದೀದಿ-ಪಿಣರಾಯಿ ವಿಜಯನ್ ಅವರಿಗೆ ಪ್ರಧಾನಿ ಮೋದಿ ಅಭಿನಂದನೆ
Team Udayavani, May 2, 2021, 8:39 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರಣಿ ಟ್ವೀಟ್ ಮಾಡಿ ಇಂದು ಪ್ರಕಟಗೊಂಡ ಪಂಚರಾಜ್ಯ ಚುನಾವಣೆಯಲ್ಲಿ ಗೆಲುವು ಪಡೆದ ಪಕ್ಷಗಳ ಮುಖಂಡರಿಗೆ ಅಭಿನಂದನೆ ತಿಳಿಸಿದ್ದಾರೆ.
ಮೊದಲಿಗೆ ಮಮತಾ ಬ್ಯಾನರ್ಜಿ ಅವರಿಗೆ ಅಭಿನಂದಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ತೃಣಮೂಲ ಕಾಂಗ್ರೆಸ್ನ ಗೆಲುವಿಗಾಗಿ ಮಮತಾ ಬ್ಯಾನರ್ಜಿ ನಿಮಗೆ ಅಭಿನಂದನೆಗಳು. ಕೇಂದ್ರ ಸರ್ಕಾರವು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಎಲ್ಲ ರೀತಿಯ ಸಹಕಾರವನ್ನು ಮುಂದುವರಿಸುತ್ತದೆ. ಜನರ ಆಶೋತ್ತರಗಳನ್ನು ಈಡೇರಿಸಲು ಮತ್ತು ಕೋವಿಡ್-19 ಪಿಡುಗಿನಿಂದ ರಾಜ್ಯವನ್ನು ಹೊರತರಲು ನೆರವಾಗುತ್ತದೆ’ ಎಂದು ಭರವಸೆ ನೀಡಿದ್ದಾರೆ.
‘ಈ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಮ್ಮ ಪಕ್ಷಕ್ಕೆ ಅಸ್ತಿತ್ವವೇ ಇರಲಿಲ್ಲ. ಆದರೆ ಈ ಬಾರಿ ಪಶ್ಚಿಮ ಬಂಗಾಳದ ಸೋದರ, ಸೋದರಿಯರು ನಮ್ಮ ಪಕ್ಷವನ್ನು ಆಶೀರ್ವದಿಸಿದ್ದಾರೆ. ಅಲ್ಲಿ ಬಿಜೆಪಿಯ ಅಸ್ತಿತ್ವವೂ ಗಣನೀಯ ಪ್ರಮಾಣದಲ್ಲಿ ವೃದ್ಧಿಸಿದೆ. ಬಿಜೆಪಿಯು ಜನರ ಸೇವೆಯನ್ನು ಮುಂದುವರಿಸುತ್ತದೆ. ನಮ್ಮ ಎಲ್ಲ ಕಾರ್ಯಕರ್ತರ ಪರಿಶ್ರಮವನ್ನು ನಾನು ಗೌರವಿಸುತ್ತೇನೆ’ ಎಂದು ಮೋದಿ ಭರವಸೆ ನೀಡಿದ್ದಾರೆ.
ಕೇರಳದಲ್ಲಿ ವಿಜಯ ಸಾಧಿಸಿರುವ ಪಿಣರಾಯಿ ವಿಜಯನ್ ಅವರನ್ನೂ ಅಭಿನಂದಿಸಿರುವ ಮೋದಿ, ‘ನಾವು ಹಲವು ವಿಚಾರಗಳಲ್ಲಿ ಜತೆಗೂಡಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ. ಕೋವಿಡ್-19 ಪಿಡುಗಿನಿಂದ ಭಾರತ ಹೊರಬರುವಂತೆ ಮಾಡಲು ಶ್ರಮಿಸುತ್ತೇವೆ’ ಎಂದು ಮೋದಿ ಭರವಸೆ ನೀಡಿದ್ದಾರೆ.
ಕೇರಳದಲ್ಲಿಯೂ ಬಿಜೆಪಿಗೆ ಮತ ಹಾಕಿರುವರನ್ನು ಮೋದಿ ಅಭಿನಂದಿಸಿದ್ದಾರೆ. ಪಕ್ಷವನ್ನು ತಳಮಟ್ಟದಿಂದ ಭದ್ರಪಡಿಸಲು ಶ್ರಮಿಸುತ್ತಿರುವ ಕಾರ್ಯಕರ್ತರ ಪರಿಶ್ರಮವನ್ನು ನಾನು ಗೌರವಿಸುತ್ತೇನೆ. ಕೇರಳ ಜನರ ಸೇವೆಯನ್ನು ನಮ್ಮ ಪಕ್ಷ ಮತ್ತು ಕಾರ್ಯಕರ್ತರು ನಿರಂತರ ಮಾಡಲಿದ್ದಾರೆ ಎಂದು ಮೋದಿ ಹೇಳಿದ್ದಾರೆ.
ತಮಿಳುನಾಡಿನಲ್ಲಿ ನಿಚ್ಚಳ ಜಯ ಸಾಧಿಸಿರುವ ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್ ಅವರನ್ನೂ ಮೋದಿ ಅಭಿನಂದಿಸಿದ್ದಾರೆ. ‘ದೇಶದ ಪ್ರಗತಿಗಾಗಿ ನಾವು ಒಗ್ಗೂಡಿ ಕೆಲಸ ಮಾಡೋಣ. ಪ್ರಾದೇಶಿಕ ಆಶೋತ್ತರಗಳನ್ನು ಈಡೇರಿಸಲು ಮತ್ತು ಕೋವಿಡ್-19 ಪಿಡುಗಿನ್ನು ಸೋಲಿಸಲು ಶ್ರಮಿಸೋಣ ಎಂದು ಕರೆ ನೀಡಿದ್ದಾರೆ.
ಎನ್ಡಿಎ ಮೈತ್ರಿಕೂಟಕ್ಕೆ ಆಶೀರ್ವದಿಸಿದ ತಮಿಳುನಾಡಿನ ಜನರಿಗೆ ನಾನು ಕೃತಜ್ಞ. ರಾಜ್ಯದ ಕಲ್ಯಾಣಕ್ಕೆ ಮತ್ತು ತಮಿಳು ಸಂಸ್ಕೃತಿಯ ಶ್ರೇಷ್ಠತೆಯನ್ನು ಸಾರಿಹೇಳುವ ವಿಚಾರದಲ್ಲಿ ನಾವು ಬದ್ಧರಾಗಿದ್ದೇವೆ. ನಮ್ಮ ಕಾರ್ಯಕರ್ತರ ಕಠಿಣ ಪರಿಶ್ರಮವನ್ನು ನಾನು ಗೌರವಿಸುತ್ತೇನೆ ಎಂದು ಮೋದಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು