ಕೋವಿಡ್ ಲಸಿಕೆ ಕೇಂದ್ರಕ್ಕೆ ಭೇಟಿ: ವಿಜ್ಞಾನಿಗಳನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಕೋವಿಡ್ 19 ಸೋಂಕಿನ ಲಸಿಕೆಯ ಮೊದಲ ಹಂತದ ಕ್ಲಿನಿಕಲ್ ಪ್ರಯೋಗ ಮುಕ್ತಾಯಗೊಂಡಿದೆ
Team Udayavani, Nov 28, 2020, 3:54 PM IST
ನವದೆಹಲಿ/ಹೈದರಾಬಾದ್: ಕೋವಿಡ್ 19 ಸೋಂಕನ್ನು ಗುಣಪಡಿಸಬಲ್ಲ ಲಸಿಕೆಯನ್ನು ತಯಾರಿಸುತ್ತಿರುವ ಮೂರು ಕೇಂದ್ರಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ(ನವೆಂಬರ್ 28, 2020) ಭೇಟಿ ನೀಡಿ ವಿಜ್ಞಾನಿಗಳ ಜತೆ ಸಮಾಲೋಚನೆ ನಡೆಸಿದರು.
ಆರಂಭಿಕವಾಗಿ ಪ್ರಧಾನಿ ಮೋದಿ ಬೆಳಗ್ಗೆ ಅಹಮದಾಬಾದ್ ನ ಜೈಡಸ್ ಕಂಪನಿಗೆ, ನಂತರ ಹೈದರಾಬಾದ್ ನ ಭಾರತ್ ಬಯೋಟೆಕ್ ಸಂಸ್ಥೆಗೆ ಭೇಟಿ ನೀಡಿದ್ದರು. ಅಹಮದಾಬಾದ್ ನ ಜೈಡಸ್ ಕಂಪನಿಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ, ಲಸಿಕೆ ಅಭಿವೃದ್ಧಿ ಕುರಿತು ಮಾಹಿತಿ ಪಡೆದರು.
ಅಹಮದಾಬಾದ್ ನಿಂದ 20 ಕಿಲೋ ಮೀಟರ್ ದೂರದಲ್ಲಿರುವ ಚಾಂಗೋದಾರ್ ಕೈಗಾರಿಕಾ ಪ್ರದೇಶದಲ್ಲಿನ ಜೈಡಸ್ ಕ್ಯಾಡಿಲಾ ಸಂಶೋಧನಾ ಕೇಂದ್ರಕ್ಕೆ ಪ್ರಧಾನಿ ಪಿಪಿಇ ಕಿಟ್ ಧರಿಸಿ ಭೇಟಿ ನೀಡಿದ್ದರು. ಈ ಮೂಲಕ ಮೊದಲ ಹಂತದ ಲಸಿಕೆ ತಯಾರಿಕೆ ಪ್ರಕ್ರಿಯೆಯ ಮಾಹಿತಿ ಪಡೆದಲ್ಲಿ ಜನರಿಗೆ ಲಸಿಕೆ ನೀಡಲು ಎದುರಿಸಬಹುದಾದ ಸಮಸ್ಯೆಗಳನ್ನು ಅರಿತು ಅದಕ್ಕೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಪ್ರಧಾನಿ ಸಚಿವಾಲಯ ಭೇಟಿಗೂ ಮುನ್ನ ನೀಡಿರುವ ಪ್ರಕಟಣೆಯಲ್ಲಿ ತಿಳಿಸಿತ್ತು.
#WATCH Prime Minister Narendra Modi visits Zydus Biotech Park in Ahmedabad, reviews the development of #COVID19 vaccine candidate ZyCOV-D pic.twitter.com/vEhtNMf1YE
— ANI (@ANI) November 28, 2020
ಕೋವಿಡ್ 19 ಸೋಂಕಿನ ಲಸಿಕೆಯ ಮೊದಲ ಹಂತದ ಕ್ಲಿನಿಕಲ್ ಪ್ರಯೋಗ ಮುಕ್ತಾಯಗೊಂಡಿದ್ದು, ಎರಡನೇ ಹಂತದ ಕ್ಲಿನಿಕಲ್ ಪ್ರಯೋಗ ಆಗಸ್ಟ್ ನಲ್ಲಿ ನಡೆಯಲಿದೆ ಎಂದು ಜೈಡಸ್ ಘೋಷಿಸಿದೆ.
ಇದನ್ನೂ ಓದಿ:ಕಮೆಂಟರಿ ವೇಳೆ ಎಡವಟ್ಟು ಮಾಡಿದ ಆಸೀಸ್ ಲೆಜೆಂಡ್: ಕ್ಷಮೆ ಕೇಳಿದ ಗಿಲ್ಕ್ರಿಸ್ಟ್
ಹೈದರಾಬಾದ್ ನ ಭಾರತ್ ಬಯೋಟೆಕ್ ಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಕೋವಿಡ್ 19 ದೇಶಿ ಲಸಿಕೆ ಕುರಿತು ಮಾಹಿತಿ ಪಡೆದರು. ಅಲ್ಲದೇ ಈವರೆಗೆ ನಡೆದ ಬೆಳವಣಿಗೆ ಕುರಿತಂತೆ ವಿಜ್ಞಾನಿಗಳನ್ನು ಅಭಿನಂದಿಸಿದರು. ಐಸಿಎಂಆರ್ ಜತೆ ಕೈಜೋಡಿಸುವ ಮೂಲಕ ಲಸಿಕೆ ಶೀಘ್ರವಾಗಿ ಅಭಿವೃದ್ಧಿಪಡಿಸಲು ಮುಂದಾಗಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
SS Rajamouli: ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್ನಲ್ಲಿ ಸುಳಿವು ಕೊಟ್ಟ ರಾಜಮೌಳಿ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!