ಕೆವಾಡಿಯಾ ಏಕತಾ ಪ್ರತಿಮೆಗೆ ಸಂಪರ್ಕ ಕಲ್ಪಿಸುವ ಎಂಟು ರೈಲುಗಳಿಗೆ ಪ್ರಧಾನಿ ಚಾಲನೆ
Team Udayavani, Jan 17, 2021, 2:15 PM IST
ಹೊಸದಿಲ್ಲಿ: ಗುಜರಾತ್ ರಾಜ್ಯದ ಕೆವಾಡಿಯಾದಲ್ಲಿನ ಸರ್ದಾರ್ ವಲ್ಲಭಾಭಾಯಿ ಅವರ ಪ್ರತಿಮೆಗೆ ದೇಶದ ವಿವಿಧೆಡೆಯಿಂದ ಸಂಪರ್ಕ ಕಲ್ಪಿಸುವ ಎಂಟು ರೈಲುಗಳಿಗೆ ಪ್ರಧಾನಿ ಮೋದಿ ಇಂದು ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, “ಕೆವಾಡಿಯಾ ಬುಡಕಟ್ಟು ಸಮುದಾಯದ ಜೀವನವನ್ನು ಬದಲಿಸಲು ಸಹ ಇದು ಸಹಾಯ ಮಾಡುತ್ತದೆ” ಎಂದು ಹೇಳಿದರು.
ಕೆವಾಡಿಯಾ-ವಾರಣಾಸಿ ಮಹಾಮನ ಎಕ್ ಪ್ರೆಸ್ (ವಾರದಲ್ಲಿ ಒಂದು ದಿನ), ದಾದರ್-ಕೆವಾಡಿಯಾ ಎಕ್ ಪ್ರೆಸ್ (ಪ್ರತಿದಿನ), ಅಹಮದಾಬಾದ್-ಕೆವಾಡಿಯಾ ಜನಶತಾಬ್ದಿ ಎಕ್ ಪ್ರೆಸ್ (ಪ್ರತಿದಿನ) ನಿಜಾಮುದ್ದೀನ್ – ಕೆವಾಡಿಯಾ ಎಕ್ ಪ್ರೆಸ್ (ವಾರಕ್ಕೆ 2 ಬಾರಿ) ಕೆವಾಡಿಯಾ – ರೇವಾ ಎಕ್ ಪ್ರೆಸ್ (ವಾರದಲ್ಲಿ ಒಂದು ದಿನ), ಚೆನ್ನೈ – ಕೆವಾಡಿಯಾ ಎಕ್ ಪ್ರೆಸ್ (ವಾರದಲ್ಲಿ ಒಂದು ದಿನ), ಪ್ರತಾಪನಗರ-ಕೆವಾಡಿಯಾ ಎಂಇಎಂಯು ರೈಲು (ಪ್ರತಿದಿನ) ಮತ್ತು ಕೆವಾಡಿಯಾ-ಪ್ರತಾಪನಗರ ಎಂಇಎಂಯು ರೈಲು (ಪ್ರತಿದಿನ) ಗಳಿಗೆ ಮೋದಿಯವರು ಚಾಲನೆ ನೀಡಿದ್ದಾರೆ.
ಇದನ್ನೂ ಓದಿ:ಏಪ್ರಿಲ್ ಬಳಿಕ ಯಡಿಯೂರಪ್ಪರನ್ನು ಅಧಿಕಾರದಿಂದ ತೆಗೆಯುತ್ತಾರೆ: ಸಿದ್ದರಾಮಯ್ಯ
ರೈಲ್ವೆ ಸಚಿವ ಪಿಯೂಷ್ ಗೋಯಲ್, ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮತ್ತು ಅವರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ವರ್ಚುವಲ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ