ಡ್ರೋನ್‌ಗೆ ಇನ್ನು ಕೀಟನಾಶಕ ಸಿಂಪಡಣೆ ಹೊಣೆ

100 ಕಿಸಾನ್‌ ಡ್ರೋನ್‌ಗಳಿಗೆ ಪ್ರಧಾನಿ ಮೋದಿ ಚಾಲನೆ; ಕೃಷಿ ಕ್ಷೇತ್ರದಲ್ಲಿ ಮಹತ್ವದ ಮೈಲುಗಲ್ಲು ಎಂದು ಬಣ್ಣನೆ

Team Udayavani, Feb 20, 2022, 7:15 AM IST

ಡ್ರೋನ್‌ಗೆ ಇನ್ನು ಕೀಟನಾಶಕ ಸಿಂಪಡಣೆ ಹೊಣೆ

ನವದೆಹಲಿ: ದೇಶದ ಹೊಲಗಳಲ್ಲಿ ಇನ್ನು ಮುಂದೆ ಕೀಟನಾಶಕಗಳು, ಪೋಷಕಾಂಶಗಳ ಸಿಂಪಡಣೆಯ ಕೆಲಸವನ್ನು ಡ್ರೋನ್‌ಗಳೇ ಮಾಡಲಿವೆ. ಈ ನಿಟ್ಟಿನಲ್ಲಿ ಮೊದಲ ಹೆಜ್ಜೆ ಎಂಬಂತೆ, ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ದೇಶಾದ್ಯಂತ 100 “ಮೇಡ್‌ ಇನ್‌ ಇಂಡಿಯಾ ಕಿಸಾನ್‌ ಡ್ರೋನ್‌’ಗಳಿಗೆ ಚಾಲನೆ ನೀಡಿದ್ದಾರೆ. ಭಾರತೀಯ ಕೃಷಿ ಕ್ಷೇತ್ರದಲ್ಲಿ ಇದೊಂದು ಮಹತ್ವದ ಮೈಲುಗಲ್ಲು ಎಂದೂ ಅವರು ಬಣ್ಣಿಸಿದ್ದಾರೆ.

ವರ್ಚುವಲ್‌ ಆಗಿ ಕಿಸಾನ್‌ ಡ್ರೋನ್‌ಗಳಿಗೆ ಚಾಲನೆ ನೀಡಿದ ಬಳಿಕ ಹರ್ಯಾಣದ ಮನೇಸಾರ್‌ನಲ್ಲಿ ರೈತರ ಸಮೂಹದೊಂದಿಗೆ ಸಂವಾದವನ್ನೂ ನಡೆಸಿದ್ದಾರೆ. ಅಲ್ಲದೇ, “ಡ್ರೋನ್‌ ಕಿಸಾನ್‌ ಯಾತ್ರೆ’ಗೂ ಹಸಿರು ನಿಶಾನೆ ತೋರಿದ್ದಾರೆ.

ಈ ವೇಳೆ ಮಾತನಾಡಿದ ಮೋದಿ, “ಕಿಸಾನ್‌ ಡ್ರೋನ್‌ಗಳು ಹೊಸ ಕ್ರಾಂತಿಗೆ ಮುನ್ನುಡಿ ಬರೆದಿದೆ. ಮುಂಬರುವ ದಿನಗಳಲ್ಲಿ ರೈತರು ಅಧಿಕ-ಸಾಮರ್ಥ್ಯದ ಡ್ರೋನ್‌ಗಳನ್ನು ಬಳಸಿಕೊಂಡೇ ಅತ್ಯಂತ ಕನಿಷ್ಠ ಸಮಯದಲ್ಲಿ ಹಣ್ಣು, ತರಕಾರಿ, ಹೂವು ಮತ್ತಿತರ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಾಟ ಮಾಡಬಹುದು. ಇದರಿಂದ ರೈತರ ಆದಾಯವೂ ಹೆಚ್ಚಳವಾಗಲಿದೆ’ ಎಂದಿದ್ದಾರೆ.

ದೇಶದಲ್ಲೀಗ ಡ್ರೋನ್‌ ಮಾರುಕಟ್ಟೆಗೆ ಹಾಗೂ ಹೊಸ ಆವಿಷ್ಕಾರಗಳಿಗೆ ಹೆಚ್ಚಿನ ಉತ್ತೇಜನ ನೀಡಲಾಗುತ್ತಿದೆ. ಈಗಾಗಲೇ ಗರುಡ ಏರೋಸ್ಪೇಸ್‌ ಸಂಸ್ಥೆಯು ಮುಂದಿನ 2 ವರ್ಷಗಳಲ್ಲಿ 1 ಲಕ್ಷ ಮೇಡ್‌-ಇನ್‌-ಇಂಡಿಯಾ ಡ್ರೋನ್‌ಗಳನ್ನು ತಯಾರಿಸುವ ಗುರಿ ಹಾಕಿಕೊಂಡಿದೆ. ಇದರಿಂದ ಯುವಜನರಿಗೆ ಹೊಸ ಅವಕಾಶಗಳು ಸೃಷ್ಟಿಯಾಗಲಿವೆ. ಈಗ 200ರಷ್ಟಿರುವ ಡ್ರೋನ್‌ಗಳ ಸಂಖ್ಯೆ ಸದ್ಯದಲ್ಲೇ ಸಾವಿರ ದಾಟಲಿದೆ ಎಂದೂ ಮೋದಿ ಹೇಳಿದ್ದಾರೆ.

ಕಿಸಾನ್‌ ಡ್ರೋನ್‌ನ ಅಂದಾಜು ಬೆಲೆ – 5-10 ಲಕ್ಷ ರೂ.
ಕಾರ್ಯನಿರ್ವಹಣೆ – ಇಂಟರ್ನೆಂಟ್‌ ಆಧಾರಿತ ಸ್ಮಾರ್ಟ್‌ ತಂತ್ರಜ್ಞಾನದ ಮೂಲಕ ಕಾರ್ಯನಿರ್ವಹಣೆ
ಡ್ರೋನ್‌ನ ಕೆಲಸ – ಕ್ರಿಮಿನಾಶಕ ಸಿಂಪಡಣೆ, ಬೆಳೆಗಳ ಪರಿಶೀಲನೆ, ಪೋಷಕಾಂಶ ಸಿಂಪಡಣೆ ಇತ್ಯಾದಿ

ಅನುಕೂಲತೆಗಳೇನು?
– ಬೆಳೆ ಮೌಲ್ಯಮಾಪನ, ಭೂದಾಖಲೆಗಳ ಡಿಜಿಟಲೀಕರಣ, ಕೀಟನಾಶಕಗಳು ಮತ್ತು ಪೋಷಕಾಂಶಗಳ ಸಿಂಪಡಣೆಗೆ ಬಳಕೆ.
– ದೇಶಾದ್ಯಂತ “ರಾಸಾಯನಿಕಮುಕ್ತ ರಾಷ್ಟ್ರೀಯ ಕೃಷಿ’ಗೆ ಉತ್ತೇಜನ ನೀಡುವ ಉದ್ದೇಶ
– ಮುಂದಿನ ದಿನಗಳಲ್ಲಿ ಹೂವು, ಹಣ್ಣು, ತರಕಾರಿಗಳನ್ನು ಹೊಲಗಳಿಂದ ನೇರವಾಗಿ ಮಾರುಕಟ್ಟೆಗೆ ಒಯ್ಯಲು ಅಧಿಕ ಸಾಮರ್ಥ್ಯದ ಡ್ರೋನ್‌ಗಳ ಬಳಕೆ.
– ಇದರಿಂದ ಉತ್ಪನ್ನಗಳಿಗೆ ಹಾನಿ ಆಗುವುದನ್ನು ತಪ್ಪಿಸಬಹುದು, ಸಮಯವೂ ಉಳಿತಾಯವಾಗುತ್ತದೆ, ರೈತರು ಮತ್ತು ಮೀನುಗಾರರ ಆದಾಯವೂ ಹೆಚ್ಚುತ್ತದೆ
– ಡ್ರೋನ್‌ ಮಾರುಕಟ್ಟೆ ಅಭಿವೃದ್ಧಿಯಿಂದ ಯುವಜನರಿಗೆ ಉದ್ಯೋಗ ಮತ್ತು ಹೊಸ ಅವಕಾಶಗಳ ಸೃಷ್ಟಿ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.