ಆಕ್ಸಿಜನ್ ಕೊರತೆ, ಸರಬರಾಜು ಕುರಿತು ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ಮೋದಿ
ದೇಶದ ಸುಮಾರು 20 ರಾಜ್ಯಗಳು ಪ್ರತಿದಿನ 6,785 ಮೆಟ್ರಿಕ್ ಟನ್ ಗಳಷ್ಟು ಮೆಡಿಕಲ್ ಆಕ್ಸಿಜನ್ ಬೇಡಿಕೆ ಇಟ್ಟಿದೆ.
Team Udayavani, Apr 22, 2021, 4:34 PM IST
ನವದೆಹಲಿ:ದೇಶಾದ್ಯಂತ ಮಾರಣಾಂತಿಕ ಕೋವಿಡ್ ಎರಡನೇ ಅಲೆ ಹೆಚ್ಚಳವಾಗುತ್ತಿರುವ ನಡುವೆಯೇ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ(ಏಪ್ರಿಲ್ 22)ಉನ್ನತ ಮಟ್ಟದ ಸಭೆಯನ್ನು ಕರೆದಿರುವುದಾಗಿ ವರದಿ ತಿಳಿಸಿದೆ.
ಕಳೆದ ಕೆಲವು ವಾರಗಳಲ್ಲಿ ಆಕ್ಸಿಜನ್ ಸರಬರಾಜು ಮಾಡಲು ತೆಗೆದುಕೊಂಡ ಕ್ರಮದ ಬಗ್ಗೆ ಅಧಿಕಾರಿಗಳು ಪ್ರಧಾನಿ ಮೋದಿ ಅವರಿಗೆ ಸಭೆಯಲ್ಲಿ ಮಾಹಿತಿ ನೀಡಲಿದ್ದಾರೆ ಎಂದು ಪ್ರಧಾನಿ ಕಚೇರಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.
ಈ ತುರ್ತು ಸಭೆಯಲ್ಲಿ ಪ್ರಧಾನಿ ಮೋದಿ ಅವರು ಆಕ್ಸಿಜನ್ ಉತ್ಪಾದನೆಯನ್ನು ಹೆಚ್ಚಳ ಮಾಡುವ ಮೂಲಕ ವಿವಿಧ ಆಯಾಮಗಳಲ್ಲಿ ಶೀಘ್ರವಾಗಿ ಕಾರ್ಯನಿರ್ವಹಿಸಬೇಕಾದ ಅಗತ್ಯವಿದೆ ಎಂಬ ಬಗ್ಗೆ ತಿಳಿಸಲಿದ್ದಾರೆ ಎಂದು ವರದಿ ವಿವರಿಸಿದೆ.
ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಬಲ ನೀಡಲು ಸಕಾಲಕ್ಕೆ ಆಕ್ಸಿಜನ್ ಸರಬರಾಜು ಮಾಡಬೇಕಾಗಿದೆ. ಅಲ್ಲದೇ ಆಕ್ಸಿಜನ್ ವಿತರಣೆಯನ್ನು ತ್ವರಿತಗೊಳಿಸಬೇಕು ಎಂದು ಪ್ರಧಾನಿ ಮೋದಿ ಅವರು ಸಭೆಯಲ್ಲಿ ವಿವರಿಸಲಿದ್ದಾರೆ ಎಂದು ವರದಿ ತಿಳಿಸಿದೆ.
ಸಭೆಯಲ್ಲಿ ವಿವಿಧ ರಾಜ್ಯಗಳ ಬೇಡಿಕೆಯಂತೆ ಆಕ್ಸಿಜನ್ ಪೂರೈಕೆಗೆ ಬಳಸಬಹುದಾದ ಮಾರ್ಗೋಪಾಯದ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗುವುದು. ಜನರ ಜೀವ ಉಳಿಸಲು ಅಗತ್ಯವಾಗಿರುವ ಆಕ್ಸಿಜನ್ ಅನ್ನು ರಾಜ್ಯಗಳಿಗೆ ತ್ವರಿತವಾಗಿ ಸರಬರಾಜು ಮಾಡಬೇಕಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ದೇಶದ ಸುಮಾರು 20 ರಾಜ್ಯಗಳು ಪ್ರತಿದಿನ 6,785 ಮೆಟ್ರಿಕ್ ಟನ್ ಗಳಷ್ಟು ಮೆಡಿಕಲ್ ಆಕ್ಸಿಜನ್ ಬೇಡಿಕೆ ಇಟ್ಟಿದ್ದು, ಇದರ ಹೊರತಾಗಿಯೂ ಕೇಂದ್ರ ಸರ್ಕಾರ ಏಪ್ರಿಲ್ 21ರಿಂದ ಈ ರಾಜ್ಯಗಳಿಗೆ 6,822 ಮೆಟ್ರಿಕ್ ಟನ್ ನಷ್ಟು ಆಕ್ಸಿಜನ್ ನಿಗದಿಪಡಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಕೆಲವು ದಿನಗಳಿಂದ ಖಾಸಗಿ, ಸ್ಟೀಲ್ ಪ್ಲ್ಯಾಂಟ್, ಇಂಡಸ್ಟ್ರೀಸ್, ಆಕ್ಸಿಜನ್ ಉತ್ಪಾದಕರ ಸಹಕಾರದೊಂದಿಗೆ ಪ್ರತಿದಿನ ವೈದ್ಯಕೀಯ ಆಕ್ಸಿಜನ್ ಅನ್ನು 3,300 ಮೆಟ್ರಿಕ್ ಟನ್ ಗಳಷ್ಟು ಹೆಚ್ಚಿಸಲಾಗಿದೆ. ಇದರಲ್ಲಿ ತುರ್ತು ಅಗತ್ಯವಿಲ್ಲದ ಕೈಗಾರಿಕೆಗಳಿಗೆ ಆಕ್ಸಿಜನ್ ಸರಬರಾಜನ್ನು ನಿಲ್ಲಿಸಲಾಗಿದೆ ಎಂದು ವರದಿ ತಿಳಿಸಿದೆ.
ಪಶ್ಚಿಮಬಂಗಾಳ ಭೇಟಿ ರದ್ದು, ನಾಳೆ ಉನ್ನತ ಮಟ್ಟದ ಸಭೆ
ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮಬಂಗಾಳದ ಶುಕ್ರವಾರ(ಏ.23)ದ ಭೇಟಿಯನ್ನು ರದ್ದುಗೊಳಿಸಿದ್ದು, ಏತನ್ಮಧ್ಯೆ ಕೋವಿಡ್ 19 ಸೋಂಕಿಗೆ ಸಂಬಂಧಿಸಿದಂತೆ ನಾಳೆ ಉನ್ನತ ಮಟ್ಟದ ಸಭೆಯನ್ನು ಕರೆದಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!