ಒಮಿಕ್ರಾನ್ ನಮ್ಮ ಮನೆಬಾಗಿಲು ತಟ್ಟಿದೆ ಎಂದು ನೆನಪಿನಲ್ಲಿರಲಿ: ಪ್ರಧಾನಿ ಮೋದಿ
Team Udayavani, Dec 26, 2021, 12:44 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ (ಡಿಸೆಂಬರ್ 26, 2021) ತಮ್ಮ ಮಾಸಿಕ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣದಲ್ಲಿ, “ನಮ್ಮ ದೇಶದ ತನ್ನ ಲಸಿಕೆ ಡೇಟಾವನ್ನು ಪ್ರಪಂಚದಾದ್ಯಂತ ಇರುವವರೊಂದಿಗೆ ಹೋಲಿಸಿದರೆ ಅಭೂತಪೂರ್ವ ಸಾಧನೆ ಮಾಡಿದೆ” ಎಂದು ಪ್ರಧಾನಿ ಹೇಳಿದರು.
ಈ ‘ಮನ್ ಕಿ ಬಾತ್’ ಕಾರ್ಯಕ್ರಮದ 84ನೇ ಸಂಚಿಕೆ ಮತ್ತು ವರ್ಷದ ಕೊನೆಯ ಆವೃತ್ತಿಯಾಗಿತ್ತು. ಒಮಿಕ್ರಾನ್ ವಿರುದ್ಧ ಹೋರಾಡಲು ಸ್ವಯಂ-ಅರಿವು ಮತ್ತು ಸ್ವಯಂ-ಶಿಸ್ತಿನ ಶಕ್ತಿಯನ್ನು ಪ್ರಧಾನಿ ಮೋದಿ ಒತ್ತಿ ಹೇಳಿದರು.
“ಕೋವಿಡ್ 19 ಒಮಿಕ್ರಾನ್ ನ ಹೊಸ ರೂಪಾಂತರವು ನಮ್ಮ ಬಾಗಿಲುಗಳನ್ನು ತಟ್ಟಿದೆ ಎಂಬುದನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು. ಈ ಜಾಗತಿಕ ಸಾಂಕ್ರಾಮಿಕವನ್ನು ಸೋಲಿಸಲು ನಾಗರಿಕರಾಗಿ ನಮ್ಮ ಪ್ರಯತ್ನವು ಮುಖ್ಯವಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದರು.
ಇದನ್ನೂ ಓದಿ:ಸಂಕ್ರಾತಿ ಬಳಿಕ ಸಂಪುಟ ಸಂಕ್ರಮಣ: ವಿಸ್ತರಣೆಯೋ, ಪುನರಚನೆಯೋ ?
ಕೋವಿಡ್-19 ಸಾಂಕ್ರಾಮಿಕದ ಮಧ್ಯೆ ಭಾರತವು ಕುಟುಂಬವಾಗಿ ಒಟ್ಟಿಗೆ ನಿಂತಿರುವುದಕ್ಕೆ ಪ್ರಧಾನಮಂತ್ರಿಯವರು ಶ್ಲಾಘಿಸಿದರು. “ಸಾಂಕ್ರಾಮಿಕತೆಯ ನಡುವೆ ಭಾರತವು ಕುಟುಂಬವಾಗಿ ಒಟ್ಟಿಗೆ ನಿಂತಿದೆ” ಎಂದು ಪ್ರಧಾನಿ ಮೋದಿ ಹೇಳಿದರು.
ದೇಶದ ವಿಜ್ಞಾನಿಗಳು ಹೊಸ ಒಮಿಕ್ರಾನ್ ರೂಪಾಂತರವನ್ನು ನಿರಂತರವಾಗಿ ಅಧ್ಯಯನ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು. “ಪ್ರತಿದಿನ ಅವರು ಹೊಸ ಡೇಟಾವನ್ನು ಪಡೆಯುತ್ತಿದ್ದಾರೆ, ಅವರ ಸಲಹೆಗಳಿಂದ ಕೆಲಸ ಮಾಡಲಾಗುತ್ತಿದೆ” ಎಂದು ಮೋದಿ ಹೇಳಿದರು.
“ಅಂತಹ ಸಂದರ್ಭದಲ್ಲಿ, ಸ್ವಯಂ-ಅರಿವು ಮತ್ತು ಸ್ವಯಂ-ಶಿಸ್ತು ಕೋವಿಡ್ ವಿರುದ್ಧದ ಶಕ್ತಿಯಾಗಿದೆ. ನಮ್ಮ ಸಾಮೂಹಿಕ ಶಕ್ತಿ ಮಾತ್ರ ಕೋವಿಡ್ ಸೋಂಕನ್ನು ಸೋಲಿಸುತ್ತದೆ. ಈ ಜವಾಬ್ದಾರಿಯ ಪ್ರಜ್ಞೆಯೊಂದಿಗೆ ನಾವು 2022 ಕ್ಕೆ ಪ್ರವೇಶಿಸಬೇಕಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ