ಕಾಂಗ್ರೆಸಿಗರಿಗಾಲಿ,ಕಮ್ಯುನಿಷ್ಟರಿಗಾಗಲಿ ಮಹಿಳಾ ಸಬಲೀಕರಣ ಬೇಕಿಲ್ಲ
Team Udayavani, Jan 27, 2019, 12:37 PM IST
ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ದೇವರ ನಾಡು ಕೇರಳದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾದರು.ವಿಪಕ್ಷಗಳ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ್ದಾರೆ.
ತ್ರಿಶೂರ್ನಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಕೇರಳದ ಕಮ್ಯೂನಿಷ್ಟ್ ಸರ್ಕಾರ ಸಂಸ್ಕೃತಿಯ ಎಲ್ಲಾ ಅಂಶಗಳನ್ನು ಅಗೌರವಗೊಳಿಸುತ್ತಿದೆ. ದೇಶದ ಜನ ಸರ್ಕಾರದ ವರ್ತನೆಯನ್ನು ಗಮನಿಸುತ್ತಿದ್ದಾರೆ. ದೇವಾಲಯದ ವಿಚಾರ ಇಡೀ ದೇಶದ ಗಮನ ಸೆಳೆದಿದೆ ಎಂದರು.
ಮಹಿಳಾ ಸಬಲೀಕರಣದ ಕುರಿತು ಕಾಂಗ್ರೆಸಿಗರಿಗಾಗಲಿ ,ಕಮ್ಯುನಿಷ್ಟ್ರಿಗಾಗಲಿ ಯಾವುದೇ ಕಾಳಜಿ ಇಲ್ಲ. ಅವರಿಗೆ ಕಾಳಜಿ ಇದ್ದಿದ್ದರೆ, ಅವರು ಎನ್ಡಿಎ ಸರ್ಕಾರದ ತ್ರಿವಳಿ ತಲಾಖ್ ಕಾನೂನನ್ನು ವಿರೋಧಿಸುತ್ತಿರಲಿಲ್ಲ ಎಂದು ಕಿಡಿ ಕಾರಿದರು. ಭಾರತದಲ್ಲಿ ಹಲವು ಮಹಿಳೆಯರು ಮುಖ್ಯಮಂತ್ರಿಗಳಾಗಿದ್ದಾರೆ, ಆದರೆ ಅವರಲ್ಲಿ ಯಾರೊಬ್ಬರಾದರೂ ಕಮ್ಯುನಿಷ್ಟ್ ಪಕ್ಷದ ಮಹಿಳೆಯಿದ್ದಾರಾ ಎಂದು ಪ್ರಶ್ನಿಸಿದರು.
ಬಿಪಿಸಿಎಲ್ ನ ಕೊಚ್ಚಿ ಸಂಸ್ಕರಣಾಗಾರ ರಾಷ್ಟ್ರಕ್ಕೆ ಸಮರ್ಪಣೆ
ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (ಬಿಪಿಸಿಎಲ್) ನ ಕೊಚ್ಚಿ ಸಂಸ್ಕರಣಾಗಾರದ ಸಮಗ್ರ ಸಂಸ್ಕರಣಾ ವಿಸ್ತರಣಾ ಸಂಕೀರ್ಣವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.
ಮೇ 2016 ರಿಂದ ಇಲ್ಲಿಯವರೆಗೆ ಗೀವ್ ಅಪ್ ಅಭಿಯಾನದಲ್ಲಿ ಒಂದು ಕೋಟಿ ಗ್ರಾಹಕರು ಎಲ್ಪಿಡಿ ಸಬ್ಸಿಡಿಯನ್ನು ಬಿಟ್ಟು ಬಿಟ್ಟಿದ್ದಾರೆ ಎಂದರು.
ನಮ್ಮ ಸರ್ಕಾರ ಕಚ್ಚಾ ತೈಲದ ಆಮದನ್ನು ಶೇಕಡ 10 ರಷ್ಟು ಕಡಿಮೆಗೊಳಿಸಲು ಮತ್ತು ಅಮೂಲ್ಯವಾದ ವಿದೇಶಿ ವಿನಿಮಯವನ್ನು ಉಳಿಸುವ ಕಡೆಗೆ ನಿರ್ಣಾಯಕ ಕ್ರಮಗಳನ್ನು ಕೈಗೊಂಡಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ