ಪ್ರಧಾನಿ ಮೋದಿ ಆಧುನಿಕ ಭಾರತದ ಸ್ವಾಮಿ ವಿವೇಕಾನಂದ: ಬಂಗಾಳ ಸಂಸದ
Team Udayavani, Jan 12, 2023, 8:02 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು “ಸ್ವಾಮಿ ವಿವೇಕಾನಂದರ ಇಂದಿನ ಅವತಾರ” ಎಂದು ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಸೌಮಿತ್ರಾ ಖಾನ್ ಬಣ್ಣಿಸಿದ್ದಾರೆ.
ವಿವೇಕಾನಂದರಂತೆ ಪ್ರಧಾನಿ ಮೋದಿಯವರು ತಮ್ಮ ಕೆಲಸದ ಮೂಲಕ ತಾಯ್ನಾಡಿಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ ಎಂದು ಸೌಮಿತ್ರಾ ಪ್ರತಿಪಾದಿಸಿದ್ದಾರೆ.
ಗುರುವಾರ, ಸ್ವಾಮಿ ವಿವೇಕಾನಂದರ 161 ನೇ ಜನ್ಮ ವಾರ್ಷಿಕೋತ್ಸವ, ಪಶ್ಚಿಮ ಬಂಗಾಳದಾದ್ಯಂತ ವರ್ಣರಂಜಿತ ಕಾರ್ಯಕ್ರಮಗಳು ನಡೆದವು.
ಪ್ರಧಾನಿ ನರೇಂದ್ರ ಮೋದಿ ಹೊಸ ರೂಪದಲ್ಲಿ ಸ್ವಾಮಿ ವಿವೇಕಾನಂದರ ಪುನರ್ಜನ್ಮ. ಸ್ವಾಮಿ ವಿವೇಕಾನಂದರು ನಮಗೆ ದೇವರಂತಹ ವ್ಯಕ್ತಿ. ಪ್ರಧಾನಿ ಮೋದಿಯವರು ದೇಶ ಮತ್ತು ಜನತೆಗೆ ಸೇವೆ ಸಲ್ಲಿಸುತ್ತಿರುವ ರೀತಿ ನೋಡಿದರೆ ಅವರು ಆಧುನಿಕ ಭಾರತದ ಸ್ವಾಮಿ ವಿವೇಕಾನಂದರು ಎಂದು ಹೇಳಬಹುದು ಎಂದಿದ್ದಾರೆ. ಈ ಹೇಳಿಕೆ ವಿರುದ್ಧ ಬಂಗಾಳದ ಆಡಳಿತಾರೂಢ ಟಿಎಂಸಿ ತೀವ್ರ ಆಕ್ರೋಶ ಹೊರ ಹಾಕಿದೆ.
Bankura, WB | PM Narendra Modi is the reincarnation of Swami Vivekananda in a new form. Swami Vivekananda is a god-like figure for us. Seeing the way PM Modi is serving the country & its people, it can be said that he is the Swami Vivekananda of modern India: BJP MP Saumitra Khan pic.twitter.com/YuojSZjfqc
— ANI (@ANI) January 12, 2023
ಫೇಸ್ಬುಕ್ನಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಹಾ ಸನ್ಯಾಸಿಗೆ ನಮನ ಸಲ್ಲಿಸಿದ್ದು, ವಿವೇಕಾನಂದರ ಉಲ್ಲೇಖಗಳಲ್ಲಿ ಒಂದನ್ನು ಬಂಗಾಳಿ ಭಾಷೆಯಲ್ಲಿ ಶ್ರದ್ಧಾಂಜಲಿಯಾಗಿ ಬರೆದು ಅವರ ಚಿತ್ರವನ್ನು ಪೋಸ್ಟ್ ಮಾಡಿ “ಮನುಷ್ಯತ್ವವನ್ನು ಸೇವಿಸುವವರಲ್ಲಿ ದೇವರನ್ನು ಕಾಣಬಹುದು, ನಮ್ಮ ಮುಂದೆ ವಿಭಿನ್ನ ರೂಪದಲ್ಲಿ ಪ್ರಕಟವಾಗುತ್ತದೆ.” ಎಂದು ಬಣ್ಣಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?