ಭೀಮ್ ಆಧಾರ್ app ಬಿಡುಗಡೆ, ಅಂಬೇಡ್ಕರ್ ಈಶ್ವರ ಇದ್ದಂತೆ; ಮೋದಿ
Team Udayavani, Apr 14, 2017, 3:08 PM IST
ಮಹಾರಾಷ್ಟ್ರ:ಡಿಜಿಟಲ್ ಇಂಡಿಯಾಗೆ ಹೆಚ್ಚಿನ ಒತ್ತು ನೀಡಿದ್ದೇವೆ. ನಗದು ರಹಿತ ವಹಿವಾಟಿಗೆ ಈಗ ಸೂಕ್ತ ಕಾಲ ಬಂದಿದೆ. ಡಿಜಿಟಲ್ ಇಂಡಿಯಾದಿಂದ ಬಡವರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಮಹಾರಾಷ್ಟ್ರದ ನಾಗ್ಪುರದಲ್ಲಿ ಶುಕ್ರವಾರ ಡಿಜಿ ಧನ್ ಜನ್ ಮೇಳಕ್ಕೆ ಚಾಲನೆ ನೀಡಿದ ಅವರು ಅಂಬೇಡ್ಕರ್ ಅವರ 126ನೇ ಜನ್ಮ ಜಯಂತಿ ಹಿನ್ನೆಲೆಯಲ್ಲಿ ಭೀಮ್ ಆಧಾರ್ ಪೇ ಆಪ್ ಬಿಡುಗಡೆ ಮಾಡಿ ಮಾತನಾಡಿದರು.
ಅಂಬೇಡ್ಕರ್ ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಅಂಬೇಡ್ಕರ್ ಅವರು ಈಶ್ವರ ಇದ್ದಂತೆ, ತಾನು ವಿಷ ಕುಡಿದು ಬೇರೆಯವರಿಗೆ ಅಮೃತ ನೀಡಿದ ಮಹಾನ್ ವ್ಯಕ್ತಿ. ದೇಶದಲ್ಲಿ ಅಸ್ಪ್ರಶ್ಯತೆ ಹೋಗಲಾಡಿಸಿದ ವ್ಯಕ್ತಿ ಅವರು ಎಂದು ಹೇಳಿದರು.
ಭೀಮ್ ಆಪ್ ಬಡವರು ಸೇರಿದಂತೆ ಪ್ರತಿಯೊಬ್ಬರಿಗೂ ಹೆಚ್ಚಿನ ಅನುಕೂಲ ಒದಗಿಸಲಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ನಿಮ್ಮ ಮೊಬೈಲ್ ಫೋನ್ ನಿಮ್ಮ ಎಟಿಎಂ ಆಗಲಿದೆ ಎಂದು ತಿಳಿಸಿದರು.
ಭೀಮ್ ಆಪ್ ನ ಯಶಸ್ಸಿನ ಬಗ್ಗೆ ಇಡೀ ಜಗತ್ತೇ ಅಧ್ಯಯನ ನಡೆಸಲಿದೆ. ಈ ಡಿಜಿಧನ್ ಯೋಜನೆ ಸ್ವಚ್ಛತೆಯ ಅಭಿಯಾನವಾಗಿದೆ. ಭ್ರಷ್ಟಾಚಾರ ವಿರುದ್ಧದ ಹೋರಾಟಕ್ಕೂ ಇದು ದಾರಿಯಾಗಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್