ವಾಹನ ಸ್ಕ್ರಾಪೇಜ್ ಪಾಲಿಸಿ : ದೇಶದ ಅಭಿವೃದ್ಧಿಯ ಹಾದಿಯಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ : ಮೋದಿ
Team Udayavani, Aug 13, 2021, 12:25 PM IST
ನವ ದೆಹಲಿ : ವಾಹನ ಸ್ಕ್ರಾಪೇಜ್ ಪಾಲಿಸಿಯನ್ನು ಇಂದು(ಶುಕ್ರವಾರ, ಆಗಸ್ಟ್ 13) ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಾರಂಭಿಸಿದರು.
ವಾಹನ ಸ್ಕ್ರಾಪೇಜ್ ಪಾಲಿಸಿಯನ್ನು ಆರಂಭಿಸಿ ಮಾತನಾಡಿದ ಪ್ರಧಾನಿ, “ಈ ನೀತಿಯು ದೇಶದ ನಗರಗಳಲ್ಲಿ ಮಾಲಿನ್ಯವನ್ನು ತಗ್ಗಿಸಲು, ಪರಿಸರವನ್ನು ರಕ್ಷಿಸಲು ಮತ್ತು ಅಭಿವೃದ್ಧಿಯ ವೇಗವನ್ನು ಹೊಂದಲು ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ”. ನೀತಿಯು ಭಾರತದ ಅಭಿವೃದ್ಧಿ ಪಯಣದಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಎಂದಿದ್ದಾರೆ.
ಇದನ್ನೂ ಓದಿ : ಚಮೋಲಿ ಜಿಲ್ಲೆಯ ಮೋಟಾರ್ ವೇ ಬಳಿ ಭಾರಿ ಗುಡ್ಡ ಕುಸಿತ : ಸಂಚಾರ ಅಸ್ತವ್ಯಸ್ಥ
ಈ ಬಗ್ಗೆ ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡ ಪ್ರಧಾನಿ ಮೋದಿ, ಯುವಕರು ಮತ್ತು ಸ್ಟಾರ್ಟ್ ಅಪ್ ಗಳಿಗೆ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಕೋರಿದ್ದಾರೆ.
ಪರಿಸರ ಸ್ನೇಹಿ ಯೋಜನೆಯ ಭಾಗವಾಗಿ ಈ ಪಾಲಿಸಿಯನ್ನು ಜಾರಿಗೊಳಿಸಲಾಗಿದೆ. ಕಾರ್ಯಸಾಧ್ಯವಾದ ಸರ್ಕ್ಯುಲರ್ ಎಕಾನಮಿಯನ್ನು ರಚಿಸುವುದು ಇದರ ಪ್ರಧಾನ ಉದ್ದೇಶ. ಪರಿಸರದ ಬಗ್ಗೆ ಎಲ್ಲಾ ಸ್ಟೇಕ್ ಹೋಲ್ಡರ್ಸ್ ಜವಾಬ್ದಾರಿಯಿಂದ ಈ ಪಾಲಿಸಿಯೊಂದಿಗೆ ಕೈ ಜೋಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ವಾಹನ ವಾಹನ ಸ್ಕ್ರಾಪೇಜ್ ಪಾಲಿಸಿ ಪರಿಸರವನ್ನು ಸಂರಕ್ಷಿಸುವ ಪ್ರಮುಖ ಉದ್ದೇಶವನ್ನು ಹೊಂದಿದೆ. ಸ್ಕ್ರ್ಯಾಪಿಂಗ್ ಮೂಲ ಸೌಕರ್ಯವನ್ನು ಸ್ಥಾಪಿಸುವ ಉದ್ದೇಶವನ್ನು ಹೊಂದಿದೆ. ಜಾಗತಿಕವಾಗಿಯೂ ಈ ಪಾಲಿಸಿ ದೊಡ್ಡ ಜವಾಬ್ದಾರಿಯನ್ನು ಹೊಂದಿದೆ ಎಂದಿದ್ದಾರೆ.
ಇದನ್ನೂ ಓದಿ : ಟ್ವೀಟರ್ ಬ್ಲಾಕ್ ಪ್ರಕರಣ : ಇದು ಪ್ರಜಾಪ್ರಭುತ್ವದ ಮೇಲೆ ವ್ಯವಸ್ಥಿತ ದಾಳಿ: ರಾಹುಲ್ ಸಿಡಿಮಿಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ