![1-assam](https://www.udayavani.com/wp-content/uploads/2024/07/1-assam-415x233.jpg)
ಮೋದಿ ವಿದೇಶದಲ್ಲಿ ವಾಚಾಳಿ, ಸ್ವದೇಶದಲ್ಲಿ ಮೌನಿ ಬಾಬಾ: ಉದ್ಧವ್
Team Udayavani, Apr 21, 2018, 10:41 AM IST
![Modi-Uddhav-700.jpg](https://www.udayavani.com/wp-content/uploads/2018/04/21/Modi-Uddhav-700-620x348.jpg)
ಮುಂಬಯಿ : ಪ್ರಧಾನಿ ನರೇಂದ್ರ ಮೋದಿ ವಿದೇಶಗಳಲ್ಲಿ ಹೆಚ್ಚು ಮಾತನಾಡುತ್ತಾರೆ; ಆದರೆ ಸ್ವದೇಶದಲ್ಲಿ ಮೌನಿ ಬಾಬಾ ಆಗಿರುತ್ತಾರೆ ಎಂದು ಶಿವಸೇನೆ ಲೇವಡಿ ಮಾಡಿದೆ.
ಸಹಸ್ರಾರು ಕೋಟಿ ಬ್ಯಾಂಕ್ ಸಾಲವನ್ನು ಸುಸ್ತಿ ಮಾಡಿ ಭಾರತದಿಂದ ಪಲಾಯನ ಮಾಡಿರುವ ಉದ್ಯಮಿ ವಿಜಯ್ ಮಲ್ಯ ಲಂಡನ್ನಲ್ಲಿ ಆಸರೆ ಪಡೆದಿರುವ ಹೊರತಾಗಿಯೂ ಅಲ್ಲಿ ಚೆನ್ನಾಗಿ ಭಾಷಣ ಬಿಗಿದಿರುವ ಮೋದಿ ಅವರು ಅಲ್ಲಿಂದ ಈಗಿನ್ನು ಬರಿಗೈಯಲ್ಲಿ ಮರಳಲಿದ್ದಾರೆ ಎಂದು ಶಿವಸೇನೆಯ ಮುಖ್ಯಸ್ಥ ಉದ್ಧವ ಠಾಕ್ರೆ ಕಟಕಿಯಾಡಿದ್ದಾರೆ.
ಪ್ರಧಾನಿ ಮೋದಿ ಅವರಿಗೆ ಕಾಂಗ್ರೆಸ್ ಮತ್ತು ಗಾಂಧಿ ಕುಟುಂಬದ ಬಗ್ಗೆ ತೀವ್ರವಾದ ಅಸಮಾಧಾನ ಇರಬಹುದು; ಆದರೆ ಅವರು ವಿದೇಶೀ ನೆಲದಲ್ಲಿ ಭಾರತದ ಆಂತರಿಕ ವಿಷಯಗಳನ್ನು ಮಾತನಾಡುವುದು ಸರಿಯಲ್ಲ; ಹಾಗೆ ಮಾಡುವುದು ಅವರ ಹುದ್ದೆಯ ಘನತೆಗೂ ತಕ್ಕುದಾದುದಲ್ಲ ಎಂದು ಉದ್ಧವ್ ಹೇಳಿದರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನರೇಂದ್ರ ಮೋದಿ ಅವರಿಗೆ “ನೀವು ಹೆಚ್ಚು ಮಾತನಾಡಬೇಕು, ಮತು ಸರಿಯಾದ ಹೊತ್ತಿನಲ್ಲಿ ಸರಿಯಾದುದನ್ನು ಮಾತನಾಡಬೇಕು ಎಂದು ಸಲಹೆ ನೀಡಿದ್ದರು. ಹಿಂದೆ ಇದೇ ಸಲಹೆಯನ್ನು ಮೋದಿ ಅವರು ಆಗಿನ ಪ್ರಧಾನಿ ಸಿಂಗ್ಗೆ ನೀಡಿದ್ದರು. ಈಗ ಈ ಸಲಹೆ ಮೋದಿ ಅವರಿಗೆ ಅನ್ವಯವಾಗುತ್ತದೆ ಎಂದು ಸಿಂಗ್ ಹೇಳಿದ್ದಾರೆ’ ಎಂಬುದಾಗಿ ಉದ್ಧವ್ ಠಾಕ್ರೆ ಅವರು ತಮ್ಮ ಪಕ್ಷದ “ಸಾಮ್ನಾ’ ಮುಖವಾಣಿಯ ಸಂಪಾದಕೀಯದಲ್ಲಿ ಬರೆದಿದ್ದಾರೆ.
ಟಾಪ್ ನ್ಯೂಸ್
![1-assam](https://www.udayavani.com/wp-content/uploads/2024/07/1-assam-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
![1-tatoo](https://www.udayavani.com/wp-content/uploads/2024/07/1-tatoo-150x84.jpg)
Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!
MUST WATCH
ಹೊಸ ಸೇರ್ಪಡೆ
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.