ಪಿಎಂ ಮೋದಿಗೆ ವಿಶ್ವಸಂಸ್ಥೆ ಪರಿ ಸರ ಪ್ರಶಸ್ತಿ ಪ್ರದಾನ
Team Udayavani, Oct 4, 2018, 7:55 AM IST
ಹೊಸದಿಲ್ಲಿ: ವಿಶ್ವಸಂಸ್ಥೆಯ ಅತ್ಯುನ್ನತ ಗೌರವವಾದ ಚಾಂಪಿಯನ್ಸ್ ಆಫ್ ದಿ ಅರ್ಥ್ ಪುರಸ್ಕಾರವನ್ನು ಪ್ರಧಾನಿ ನರೇಂದ್ರ ಮೋದಿಗೆ ಹೊಸದಿಲ್ಲಿಯಲ್ಲಿ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟೆರಸ್ ಪ್ರದಾನ ಮಾಡಿದ್ದಾರೆ. ಪ್ರಧಾನಿ ಮೋದಿ ಹಾಗೂ ಫ್ರಾನ್ಸ್ ಅಧ್ಯಕ್ಷ ಎಮಾನ್ಯುಎಲ್ ಮ್ಯಾಕ್ರನ್ಗೆ ಜಂಟಿಯಾಗಿ ಈ ಪುರಸ್ಕಾರ ನೀಡಲಾಗಿದೆ. ಅಂತಾರಾಷ್ಟ್ರೀಯ ಸೌರ ಒಕ್ಕೂಟವನ್ನು ರಚಿಸಿದ್ದಕ್ಕಾಗಿ ಹಾಗೂ ಪರಿಸರ ರಕ್ಷಣೆಯ ನಿಟ್ಟಿನಲ್ಲಿ ಸಹಕಾರಕ್ಕೆ ಹೊಸ ಅವಕಾಶವನ್ನು ಒದಗಿಸಿದ್ದಕ್ಕೆ ಪ್ರಧಾನಿ ಮೋದಿಗೆ ಈ ಪುರಸ್ಕಾರ ನೀಡಲಾಗಿದೆ ಎಂದು ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮ ಪ್ರಕಟಿಸಿದ ಹೇಳಿಕೆಯಲ್ಲಿ ವಿವರಿಸಿದೆ.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮೋದಿ, ನಿಸರ್ಗ ಮತ್ತು ವಿಪತ್ತುಗಳೆರಡೂ ಸಂಸ್ಕೃತಿಯೊಂದಿಗೆ ಸಂಬಂಧ ಹೊಂದಿವೆ. ಪರಿಸರದ ಬಗೆಗಿನ ಕಾಳಜಿಯು ಸಂಸ್ಕೃತಿಯ ಭಾಗವಾಗದ ಹೊರತು ವಿಪತ್ತನ್ನು ನಾವು ದೂರವಿಡಲಾಗದು ಎಂದಿದ್ದಾರೆ. ಕೃಷಿ, ಔದ್ಯಮಿಕ ನೀತಿಗಳು, ಮನೆ ನಿರ್ಮಾಣ ಹಾಗೂ ಶೌಚಾಲಯ ನಿರ್ಮಾಣ ಸೇರಿದಂತೆ ಪ್ರತಿ ಹಂತದಲ್ಲೂ ನಮ್ಮ ಸರಕಾರವು ಪರಿಸರ ಸ್ನೇಹಿ ಕ್ರಮಗಳಿಗೆ ಒತ್ತು ನೀಡಿದೆ.
ಏನಿದು ಚಾಂಪಿಯನ್ಸ್ ಆಫ್ ದಿ ಅರ್ಥ್ ಅವಾರ್ಡ್?
ಇದು ವಿಶ್ವಸಂಸ್ಥೆಯ ಅತ್ಯುನ್ನತ ಗೌರವ. ತಮ್ಮ ಕ್ರಮಗಳಿಂದಾಗಿ ಪರಿಸರದ ಮೇಲೆ ಗಮನಾರ್ಹ ಪರಿಣಾಮ ಬೀರುವ ವ್ಯಕ್ತಿಗಳಿಗೆ ಈ ಪುರಸ್ಕಾರ ನೀಡಲಾಗುತ್ತದೆ. 2005ರಲ್ಲಿ ಆರಂಭಿಸಿದ ಈ ಪುರಸ್ಕಾರವನ್ನು ವಿಶ್ವದ ವಿವಿಧ ಗಣ್ಯರಿಗೆ ನೀಡಲಾಗಿದೆ. ಈ ಹಿಂದೆ ಯುನಿಲಿವರ್ ಸಿಇಒ ಪಾಲ್ ಪಾಲ್ಮನ್, ರವಾಂಡಾ ಅಧ್ಯಕ್ಷ ಪಾಲ್ ಕಗಾಮೆ, ಪರಿಸರ ಪ್ರೇಮಿ ಸಿಲ್ವಿಯಾ ಅರ್ಲೆ ಸೇರಿದಂತೆ ಹಲವರಿಗೆ ನೀಡಲಾಗಿದೆ.
ಮೋದಿಗೆ ಪ್ರಶಸ್ತಿ ನೀಡಿದ್ದು ಯಾಕೆ?
– 121 ದೇಶಗಳನ್ನು ಒಳಗೊಂಡ ಅಂತಾರಾಷ್ಟ್ರೀಯ ಸೌರ ಒಕ್ಕೂಟ (ಐಎಸ್ಎ) ರಚನೆ ಮಾಡಿರುವುದು.
– ಪ್ಲಾಸ್ಟಿಕ್ ಬಳಕೆಯನ್ನು 2022ರ ವೇಳೆಗೆ ದೇಶದಿಂದ ನಿರ್ಮೂಲನೆ ಮಾಡುವ ಗುರಿ ಹಾಕಿಕೊಂಡಿರುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ