BJP Manifesto ಬಿಡುಗಡೆ ಮಾಡಿದ ಮೋದಿ; ಬಿಜೆಪಿ ಸಂಕಲ್ಪ ಪತ್ರದಲ್ಲಿ ಏನಿದೆ?
Team Udayavani, Apr 14, 2024, 11:22 AM IST
ಹೊಸದಿಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರವಿವಾರ 2024ರ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಇದಕ್ಕೆ ಮೋದಿ ಗ್ಯಾರಂಟಿ 2024 ಎಂದು ಹೆಸರಿಡಲಾಗಿದೆ. ಅಲ್ಲದೆ ಇದಕ್ಕೆ ಸಂಕಲ್ಪ ಪತ್ರ ಎಂದೂ ಕರೆಯಲಾಗಿದ್ದು, ಮಹಿಳಾ ಸಬಲೀಕರಣ, ಯುವಕರ ಮತ್ತು ಬಡವರ ಉನ್ನತಿಯ ಬಗ್ಗೆ ಬೆಳಕು ಚೆಲ್ಲಲಾಗಿದೆ.
ಪ್ರಣಾಳಿಕೆಯು ಬಡವರು, ಯುವಕರು, ರೈತರು ಮತ್ತು ಮಹಿಳೆಯರ ಯೋಜನೆಗಳನ್ನು ಗುರಿಯಾಗಿಸಿದೆ. ಇದು ಭಾರತವನ್ನು ಸಮೃದ್ಧಗೊಳಿಸುವುದು, ಅಂತಾರಾಷ್ಟ್ರೀಯ ಸಂಬಂಧಗಳನ್ನು ಬಲಪಡಿಸುವುದು ಮತ್ತು ದೇಶದ ಪರಂಪರೆಯ ಅಭಿವೃದ್ಧಿಯನ್ನು ಉತ್ತೇಜಿಸುವತ್ತ ಗಮನಹರಿಸುತ್ತದೆ.
ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಪ್ರಧಾನಿ ಮೋದಿ, ಬಿಜೆಪಿಯ ಸಂಕಲ್ಪ ಪತ್ರವು ಸುಧಾರಿತ ಭಾರತದ ನಾಲ್ಕು ಬಲಿಷ್ಠ ಕಂಬಗಳಾದ ಯುವ, ಮಹಿಳೆ, ಬಡವರು ಮತ್ತು ರೈತರ ಶ್ರೇಯೋಭಿವೃದ್ದಿಯನ್ನು ಒಳಗೊಂಡಿದೆ ಎಂದಿದ್ದಾರೆ.
ಪ್ರಣಾಳಿಕೆಯ ಪ್ರಮುಖ ಅಂಶಗಳು
1 ಹಿರಿಯ ನಾಗರಿಕರು (70 ವರ್ಷಕ್ಕಿಂತ ಹೆಚ್ಚಿನ) ಮತ್ತು ತೃತೀಯ ಲಿಂಗಿ ಸಮಾಜವನ್ನು ಆಯುಷ್ಮಾನ್ ಭಾರತ ಯೋಜನೆಯಡಿಗೆ ತರಲಾಗುವುದು. ಹಿರಿಯ ನಾಗರಿಕರಿಗೆ 5 ಲಕ್ಷ ರೂ ವೆಚ್ಚದ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
2 ಉಚಿತ ಪಡಿತರ ಯೋಜನೆಯನ್ನು ಮುಂದಿನ ಐದು ವರ್ಷಗಳ ಕಾಲ ಮುಂದುವರಿಸಲಾಗುವುದು ಮತ್ತು ಆಯುಷ್ಮಾನ್ ಭಾರತ್ ಯೋಜನೆಯಡಿ ಕಡಿಮೆ ಬೆಲೆಯ ಔಷಧಿಗಳು ಲಭ್ಯವಿರಲಿದೆ.
3 ಬಿಜೆಪಿ ಪ್ರಣಾಳಿಕೆಯು 3 ಕೋಟಿ ಮನೆಗಳನ್ನು ನಿರ್ಮಿಸುವುದು, ಎಲ್ಲಾ ಮನೆಗಳಿಗೆ ಅಗ್ಗದ ಪೈಪ್ಲೈನ್ ಗ್ಯಾಸ್ ಲಭ್ಯತೆಗಾಗಿ ಕೆಲಸ ಮಾಡುವುದು ಮತ್ತು ವಿದ್ಯುತ್ ಬಿಲ್ಗಳನ್ನು ಶೂನ್ಯಕ್ಕೆ ಕಡಿತಗೊಳಿಸುವುದಾಗಿ ಹೇಳಿದೆ.
4 ಏಕರೂಪ ನಾಗರಿಕ ಸಂಹಿತೆ ಮತ್ತು ಒಂದು ರಾಷ್ಟ್ರ ಒಂದು ಚುನಾವಣೆಯನ್ನು ಜಾರಿಗೊಳಿಸಲಾಗುವುದು ಎಂದು ಬಿಜೆಪಿ ಪ್ರಣಾಳಿಕೆ ಹೇಳಿದೆ.
5 ಮೂರು ಕೋಟಿ ಮಹಿಳೆಯರನ್ನು ಲಕ್ಷಾಧಿಪತಿ ದೀದಿಗಳನ್ನಾಗಿ ಮಾಡುವುದಾಗಿ ಪ್ರಣಾಳಿಕೆ ಭರವಸೆ ನೀಡಿದೆ.
6 ಪಿಎಂ ಹೌಸಿಂಗ್ ಸ್ಕೀಮ್ ನಲ್ಲಿ ವಿಶೇಷ ಚೇತನ ಜನರಿಗೆ ಆದ್ಯತೆ ನೀಡಲಾಗುವುದು. ಅಲ್ಲದೆ ಅವರ ಅನುಕೂಲಕ್ಕೆ ತಕ್ಕ ಹಾಗೆ ಮನೆಗಳನ್ನು ನಿರ್ಮಾಣ ಮಾಡಲು ಒತ್ತು ನೀಡಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್
ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ
Kollywood: ಕಮಲ್ ಹಾಸನ್ ʼಥಗ್ ಲೈಫ್ʼ ಅಖಾಡಕ್ಕೆ ಬಾಲಿವುಡ್ನ ಖ್ಯಾತ ನಟರು ಎಂಟ್ರಿ?
ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ