ದೀದಿ, ಇದನ್ನು ಕೇಳಿ.. ಟಿ ಎಮ್ ಸಿ ಪ್ರಚಾರ ಗೀತೆಗೆ ಪ್ರಧಾನಿ ಅವರ ಪ್ರತಿಕ್ರಿಯೆ..!
Team Udayavani, Mar 7, 2021, 5:20 PM IST
ನವ ದೆಹಲಿ : ಬಂಗಾಳ ಚುನಾವಣೆಗೆ ಮುನ್ನ ತೃಣಮೂಲ ಕಾಂಗ್ರೆಸ್ ಮತ ಪ್ರಚಾರದ ಘೋಷಣಾ ಗೀತೆ ಮಮತಾ ಬ್ಯಾನರ್ಜಿ ಅವರ “ಖೇಲಾ ಹೋಬ್ (ಗೇಮ್ ಆನ್)” ಇಂದು ಕೋಲ್ಕತ್ತಾದಲ್ಲಿ ನಡೆದ ಮೆಗಾ ಪ್ರಚಾರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ತೀವ್ರ ಖಂಡನೆಗೆ ಒಳಗಾಗಿದೆ.
ಮಮತಾ ಬ್ಯಾನರ್ಜಿ ಅವರ ಆಡಳಿತವನ್ನು “ಭ್ರಷ್ಟಾಚಾರ ಮತ್ತು ಲೂಟ್ ತಂತ್ರ (ಲೂಟಿ)” ಎಂದು ಗುರಿಯಾಗಿಸಿಕೊಂಡ ಪ್ರಧಾನಿ ಮೋದಿ, “ಏನೂ ಮರೆಮಾಡಲಾಗಿಲ್ಲ. ಬಂಗಾಳಕ್ಕೆ ಎಲ್ಲವೂ ತಿಳಿದಿದೆ. ಆದರೆ ಈ ಖೇಲ್ (ಆಟ) ಮುಂದುವರಿಯುವುದಿಲ್ಲ. ಖೇಲ್ ಖತಮ್ ಹೊನಾ ಚಾಹಿಯೆ ( ಈ ಆಟ ನಿಲ್ಲಬೇಕು). ” ಎಂದು ಪ್ರಧಾನಿ ಬ್ಯಾನರ್ಜಿ ವಿರುದ್ಧ ಕಿಡಿ ಕಾರಿದರು.
ಓದಿ : ಬಿಜೆಪಿ ಕುಟುಂಬ ಸೀಮಿತ ಪಕ್ಷವಲ್ಲ, ಅದು ಸರ್ವವ್ಯಾಪಿ: ಸಚಿವ ಅರವಿಂದ್ ಲಿಂಬಾವಳಿ
ಇನ್ನು ಈ ಮೆಗಾ ಮತ ಪ್ರಚಾರ ಸಭೆಯಲ್ಲಿ ಪ್ರಧಾನಿ, ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ನೇರ ಸವಾಲು ಎಸೆದರು. “ದೀದಿ, ಇದನ್ನು ಕೇಳಿ.. ಟಿ ಎಮ್ ಸಿ ಕಾ ಖೇಲಾ ಶೆಶ್, ಖೇಲ್ ಖತಮ್, ವಿಕಾಸ್ ಶುರು (ಟಿ ಎಮ್ ಸಿಯ ಆಟ ಮುಗಿದಿದೆ. ಆಟ ಮುಗಿಯುತ್ತದೆ, ಅಭಿವೃದ್ಧಿ ಪ್ರಾರಂಭವಾಗುತ್ತದೆ) ಎಂದು ಹೇಳಿದರು.
ಶುಕ್ರವಾರ(ಮಾ. 5), ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳಗಳನ್ನು ಘೋಷಿಸುವ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ “ಖೇಲಾ ಹೋಬ್, ದೇಖಾ ಹೋಬ್, ಜೆಟಾ ಹೋಬ್ … (ಗೇಮ್ ಆನ್, ನಾವು ನೋಡುತ್ತೇವೆ, ನಾವು ಗೆಲ್ಲುತ್ತೇವೆ) ಎಂದು ಮಮತಾ ಹೇಳಿದ್ದರು.
ಓದಿ : ವಿಚ್ಛೇದನದಿಂದ ಹಿಂದೆ ಸರಿದ ಪತ್ನಿ…ಮತ್ತೆ ಒಂದಾದ ನಟ ನವಾಜುದ್ದೀನ್ ದಂಪತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ