ನಮ್ಮ ಸಂವಿಧಾನ ಯಾವಾಗಲೂ ಪವಿತ್ರ ಪುಸ್ತಕ ಅಂತ ಪರಿಗಣಿಸ್ತೇವೆ; ಪ್ರಧಾನಿ ಮೋದಿ
Team Udayavani, Nov 26, 2019, 3:54 PM IST
ನವದೆಹಲಿ:ಭಾರತದ ಸಂವಿಧಾನ ಗೌರವ ಮತ್ತು ಭಾರತ, ಭಾರತೀಯರ ಒಗ್ಗಟ್ಟಿನ ನಿಲುವನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ (ನ.26) ಸಂವಿಧಾನ ದಿನಾಚರಣೆ ಹಿನ್ನೆಲೆಯ ಲೋಕಸಭೆಯಲ್ಲಿ ವಿಶೇಷ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಭಾರತದಲ್ಲಿ ಸಂವಿಧಾನ ಅಳವಡಿಸಿಕೊಂಡ 70ನೇ ವರ್ಷಾಚರಣೆ ಸಂಭ್ರಮದಲ್ಲಿದೆ. ಸಂವಿಧಾನದ ಆಶಯದಂತೆ ನಡೆದುಕೊಳ್ಳುವುದು ನಮ್ಮ ಕರ್ತವ್ಯವಾಗಿದೆ. ಅದರಂತೆ ನಾವೀಗ ಜನರ ಹೊಣೆಗಾರಿಕೆ ಬಗ್ಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ ಎಂದರು.
ಭಾರತದ ಸಂವಿಧಾನ ಜನರ ಕರ್ತವ್ಯ ಮತ್ತು ಹಕ್ಕುಗಳನ್ನು ಪ್ರತಿಪಾದಿಸಿದೆ. ಇದೀಗ ನಾವು ನಮ್ಮ ಸಂವಿಧಾನದ ಕರ್ತವ್ಯವನ್ನು ಹೇಗೆ ಈಡೇರಿಸಬಹುದು ಎಂಬ ಬಗ್ಗೆ ಆಲೋಚಿಸಬೇಕಾಗಿದೆ ಎಂದು ಮೋದಿ ಹೇಳಿದರು. ಅಲ್ಲದೇ ಭಾರತದ ಸಂವಿಧಾನದ ಮೇಲಿನ ವಿಶ್ವಾಸವನ್ನು ನಮ್ಮ ಜನರು ಯಾವತ್ತೂ ಬಿಟ್ಟುಕೊಟ್ಟಿಲ್ಲ ಇದಕ್ಕಾಗಿ ನಾನು 130 ಕೋಟಿ ಭಾರತೀಯರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಭಾರತದ ಸಂವಿಧಾನ ಒಂದು ಪವಿತ್ರ ಪುಸ್ತಕ ಎಂಬುದಾಗಿ ಜನರು ಪರಿಗಣಿಸಿದ್ದಾರೆ. ಜನರಿಗೆ ಬೆಳಕು ತೋರುವ ಮಾರ್ಗದರ್ಶಿಯಾಗಿದೆ. ಯಾರೇ ಆಗಲಿ ಸಂವಿಧಾನದ ಅಡಿಗಲ್ಲನ್ನು ಅಲುಗಾಡಿಸಲು ಯತ್ನಿಸಿದರೂ ಕೂಡಾ ದೇಶದ ಜನತೆ ಸಫಲರಾಗದಂತೆ ಮಾಡಿದ್ದಾರೆ ಎಂದು ಮೋದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ