ಯೋಧರ ಶೌರ್ಯ, ತ್ಯಾಗ ಬೆಲೆಕಟ್ಟಲಾಗದ್ದು, ಗಾಲ್ವಾನ್ ಕಣಿವೆ ನಮ್ಮದು: ಲೇಹ್ ನಲ್ಲಿ ಮೋದಿ ಭಾಷಣ
Team Udayavani, Jul 3, 2020, 2:09 PM IST
ಲಡಾಖ್: ಯೋಧರ ಶೌರ್ಯ, ತ್ಯಾಗ ಬೆಲೆ ಕಟ್ಟಲಾಗದ್ದು. ನಿಮ್ಮ ಶೌರ್ಯದಿಂದ ಇಡೀ ವಿಶ್ವ ಭಾರತದ ಶಕ್ತಿ ನೋಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಇಂದು ಲೇಹ್ ಗೆ ಅಚ್ಚರಿಯ ಭೇಟಿ ನೀಡಿದ ಪ್ರಧಾನಿ ಮೋದಿ, ಗಡಿ ಪ್ರದೆಶದ ಸ್ಥಿತಿ ಗತಿಗಳ ಬಗ್ಗೆ ಮಾಹಿತಿ ಪಡೆದರು. ಸೇನಾಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದರು. ನಂತರ ಯೋಧರನ್ನು ಉದ್ದೇಶಿಸಿ ಮಾತನಾಡಿದರು.
ಸೈನಿಕರ ಶೌರ್ಯ ಈ ಪರ್ವತಗಳಿಗಿಂತಲೂ ದೊಡ್ಡದು. ನೀವು ತೋರಿದ ಶೌರ್ಯದಿಂದ ಭಾರತ ಹೆಮ್ಮೆ ಪಡುವಂತಾಗಿದೆ. ದೇಶದ ರಕ್ಷಣೆ ಯೋಧರ ಕೈಯಲ್ಲಿದೆ. ನಮಗೆ ನಿಮ್ಮ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದರು.
ಗಾಲ್ವಾನ್ ಕಣಿವೆ ನಮ್ಮದು. ಲಡಾಖ್ ನ ಪೂರ್ಣ ಭಾಗ ಭಾರತದ ಗೌರವದ ಪ್ರತೀಕ. ಲಡಾಖ್ ನ ಜನರು ಪ್ರತಿ ಹಂತದಲ್ಲಿ ಭಾರತದ ಜೊತೆಗೆ ನಿಂತಿದ್ದಾರೆ ಎಂದರು.
ನಿಮ್ಮ ತ್ಯಾಗ ಬಲಿದಾನಗಳ ಕಾರಣದಿಂದ ಆತ್ಮ ನಿರ್ಭರ ಭಾರತ ಸಂಕಲ್ಪವನ್ನು ಮತ್ತಷ್ಟು ಗಟ್ಟಿಗೊಳಿಸಿದ್ದೀರಿ ಎಂದ ಅವರು ಗಾಲ್ವಾನ್ ಕಣಿವೆಯಲ್ಲಿ ನೀವು ತೋರಿದ ಪ್ರತಿರೋಧದ ಶೌರ್ಯದ ಕಥೆಗಳನ್ನು ಭಾರತದ ಮನೆಮನೆಗಳಲ್ಲೂ ಪ್ರತಿಧ್ವನಿಸುತ್ತಿದೆ ಎಂದರು.
#WATCH Prime Minister Narendra Modi addresses soldiers in Nimoo, Ladakh https://t.co/LCa8oWxL39
— ANI (@ANI) July 3, 2020
ವಿಸ್ತಾರವಾದದ ಯುಗ ಸಮಾಪ್ತಿಯಾಗಿದೆ. ಈಗ ವಿಕಾಸವಾದದ ಸಮಯ. ವಿಸ್ತಾರವಾದ ಮಾನವೀಯತೆಗೆ ಮಾರಕವಾಗಿದೆ. ವಿಕಾಸವಾದವು ಭವಿಷ್ಯದ ಆಧಾರವಾಗಿದೆ ಎಂದು ಚೀನಾದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.
ದೇಶದ ರಕ್ಷಣೆಯ ಬಗ್ಗೆ ಯೋಚಿಸುವಾಗ ನಾನು ಯಾವಾಗಲೂ ಇಬ್ಬರು ಮಾತೆಯರನ್ನು ನೆನೆಯುತ್ತೇನೆ. ಒಬ್ಬರು ಭಾರತ ಮಾತೆ, ಮತ್ತೊಬ್ಬರು ನಿಮ್ಮಂತಹ ವೀರ ಯೋಧರನ್ನು ಹೆತ್ತ ಮಾತೆಯರು ಎಂದು ಪ್ರಧಾನಿ ಮೋದಿ ಹೇಳಿದರು.
ದುರ್ಬಲರಿಂದ ಶಾಂತಿ ಸ್ಥಾಪನೆ ನಡೆಸಲು ಸಾಧ್ಯವಿಲ್ಲ. ಶಾಂತಿ ಸ್ಥಾಪನೆಗೆ ಧೈರ್ಯ ಶೌರ್ಯವೇ ಅಗತ್ಯ. ಭಾರತಕ್ಕೆ ಅತ್ಯಾಧುನಿಕ ತಂತ್ರಾಜ್ಞಾನಗಳನ್ನು ತರುತ್ತಿದ್ದೇವೆ. ಯಾವುದೇ ವಿಶ್ವಯುದ್ಧ ಆಗಲಿ, ಶಾಂತಿಯ ಸ್ಥಿತಿಯಾಗಲಿ ನಮ್ಮ ಹೆಮ್ಮೆಯ ಸೈನಿಕರ ಶಕ್ತಿಯನ್ನು ಇಡೀ ವಿಶ್ವ ನೋಡಿದೆ. ನಾವು ಮಾನವೀಯತೆಯ ಉದ್ಧಾರಕ್ಕಾಗಿ ಕೆಲಸ ಮಾಡಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ