ಪಿಎಂ ಮೋದಿ ವಿರುದ್ಧ ರಾಹುಲ್ ಅವಹೇಳನ
Team Udayavani, Jan 11, 2019, 12:30 AM IST
ಹೊಸದಿಲ್ಲಿ: ಸಂಸತ್ನಲ್ಲಿ ರಫೇಲ್ ಚರ್ಚೆಗೆ ಉತ್ತರ ಕುರಿತಂತೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರನ್ನು ಬಳಸಿ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜೈಪುರದ ರ್ಯಾಲಿಯಲ್ಲಿ ಮಾತಾಡಿದ್ದರು. ಅದಕ್ಕೆ ಟ್ವಿಟರ್ನಲ್ಲಿ ಸ್ಪಷ್ಟನೆ ಕೊಡುವ ಆತುರದಲ್ಲಿ ಮತ್ತೂಂದು ತಪ್ಪೆಸಗಿದ್ದಾರೆ. “ಮೋದಿ ಯವರೆ, ಮಹಿಳೆಯರಿಗೆ ಗೌರವ ಕೊಡುವ ಸದ್ವಿಚಾರ ಮನೆಗಳಿಂದಲೇ ಶುರುವಾಗುತ್ತದೆ. ಭಯ ಪಡಬೇಡಿ. ಯುಪಿಎ ಅವಧಿಯಲ್ಲಾದ ರಾಫೆಲ್ ಡೀಲ್ ಅನ್ನು ಬದಲಾಯಿಸಬೇಕೆಂದು ವಾಯು ಪಡೆ ನಿಮ್ಮನ್ನು ಕೇಳಿತ್ತೇ, ಇಲ್ಲವೇ ಎಂದಷ್ಟೇ ಹೇಳಿ’ ಎಂದು ಕೇಳಿರುವುದರ ಜತೆಗೆ ಅವಹೇಳನಕಾರಿ ಪದ ಪ್ರಯೋಗ ಮಾಡಿದ್ದು, ಮತ್ತೂಂದು ವಿವಾದಕ್ಕೆ ಕಾರಣವಾಗಿದೆ.
ರಾಹುಲ್ ಅವರಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವೆ ಸ್ಮತಿ ಇರಾನಿ, “ಮಹಿಳೆಯೊಬ್ಬರು ಲೋಕಸಭೆ ಯಲ್ಲಿ ಉತ್ತರಿಸಿದ್ದು ರಾಹುಲ್ ಅವರ ಅಹಂ ಅನ್ನು ಈ ಮಟ್ಟಕ್ಕೆ ಕೆಣಕಿದೆಯೆಂದು ನಾವು ಭಾವಿಸಿರಲಿಲ್ಲ” ಎಂದು ಚುಚ್ಚಿದರೆ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು, “”ನಿರ್ಮಲಾ ಸೀತಾರಾಮನ್ ಅವರನ್ನು ರಾಹುಲ್ ಗಾಂಧಿ ಮಾಡಿರುವ ಟೀಕೆ ಭಾರತೀಯ ರಾಜಕೀಯ ಇತಿಹಾಸದಲ್ಲೇ ತೀರಾ ಕೆಳಮಟ್ಟದ್ದು” ಎಂದಿದ್ದಾರೆ.
ವಿರೋಧ: ರಾಹುಲ್ ಗಾಂಧಿಯವರ ಹೇಳಿಕೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲೂ ಭಾರೀ ಟೀಕೆಗಳು ವ್ಯಕ್ತವಾಗಿವೆ. ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ “”ಮೋದಿಯವರು ಒಬ್ಬ ಮಹಿಳೆಯ ಬಳಿ ತಮ್ಮನ್ನು ರಕ್ಷಿಸಿ ಎಂದು ಮೊರೆಯಿಟ್ಟರು ಎಂದು ರಾಹುಲ್ ಟೀಕೆ ಮಾಡಿದ್ದಾರೆ. ಅಂದರೆ, ಇಲ್ಲಿ ಮಹಿಳೆಯು ದುರ್ಬಲಳು ಎಂದು ರಾಹುಲ್ ಹೇಳಲು ಯತ್ನಿಸುತ್ತಿದ್ದಾರೆಯೇ” ಎಂದು ಕೇಳಿದ್ದಾರೆ. ಅಮೃತಾ ಭಿಂದರ್ ಎಂಬುವರು, “”ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಬಂದ ಟೀಕೆಗಳ ಬಗ್ಗೆ ಸದನದಲ್ಲಿ ನಿರ್ಮಲಾ ಸೀತಾರಾಮನ್ ಉತ್ತರಿಸಬಾರದಿತ್ತೇ” ಎಂದು ಖಾರವಾಗಿ ಕೇಳಿದ್ದಾರೆ. ಹೀಗೆ, ಹಲವಾರು ಮಂದಿ ರಾಹುಲ್ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್