ಗೋವಾ ಜಲಪ್ರಳಯ: ಸಿಎಂ ಪ್ರಮೋದ್ ಸಾವಂತ್ ರಿಂದ ಮಾಹಿತಿ ಪಡೆದ ಪ್ರಧಾನಿ ಮೋದಿ
Team Udayavani, Jul 24, 2021, 12:41 PM IST
ಪಣಜಿ: ಗೋವಾದಲ್ಲಿ ಮಳೆಯಿಂದ ಉಂಟಾದ ಜಲಪ್ರಳಯದಿಂದಾಗಿ ಆಗಿರುವ ತೊಂದರೆಗೆ ಸಂಬಂಧಿಸಿದಂತೆ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಪ್ರಧಾನಿ ನರೇಂದ್ರ ಮೋದಿಯವರ ಬಳಿ ದೂರವಾಣಿಯ ಮೂಲಕ ಮಾತನಾಡಿದ್ದು, ಗೋವಾದ ಪ್ರವಾಹ ಪರಿಸ್ಥಿತಿಯ ಎಲ್ಲ ವಿವರವನ್ನೂ ಪ್ರಧಾನಿಗಳು ಪಡೆದುಕೊಂಡಿದ್ದಾರೆ.
ಅಗತ್ಯ ನೆರವು ನೀಡುವ ಭರವಸೆಯನ್ನೂ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಾವಂತ್ ಮಾಹಿತಿ ನೀಡಿದ್ದು,ಕೇಂದ್ರ ಗೃಹಮಂತ್ರಿ ಅಮಿತ್ ಶಾ ರವರು ಕೂಡ ಗೋವಾದ ಸದ್ಯದ ಪ್ರವಾಹ ಪರಿಸ್ಥಿತಿಯ ಮಾಹಿತಿ ಪಡೆದುಕೊಂಡಿರುವುದಾಗಿ ಮುಖ್ಯಮಂತ್ರಿ ಸಾವಂತ್ ಹೇಳಿದ್ದಾರೆ.
ಇದನ್ನೂ ಓದಿ:ಬೆಳಗಾವಿಯಲ್ಲಿ ಮಳೆಯಬ್ಬರ ಕಡಿಮೆಯಾದರೂ ನದಿಗಳ ಅಪಾಯಮಟ್ಟ ಮತ್ತಷ್ಟು ಏರಿಕೆ
ಗೋವಾದಲ್ಲಿ ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ರಾಜ್ಯದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಜನರ ಸುರಕ್ಷತೆ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನಿಗಳೊಂದಿಗೆ ದೂರವಾಣಿಯ ಮೂಲಕ ಮಾತುಕತೆ ನಡೆಸಿದ್ದೇನೆ. ರಾಜ್ಯಕ್ಕೆ ಪೂರ್ಣ ಸಹಕಾರ ನೀಡುವ ಭರವಸೆಯನ್ನು ಪ್ರಧಾನಿಗಳು ನೀಡಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದರು.
ಗೋವಾದ ಬಿಚೋಲಿ, ಸಾಖಳಿ, ವಾಳಪೈ ಭಾಗದಲ್ಲಿ ಜಲಪ್ರಳಯವೇ ಉಂಟಾಗಿದ್ದು, ಈ ಭಾಗದಲ್ಲಿ ಸಾವಿರಾರು ಮನೆಗಳ ಜಲಾವೃತಗೊಂಡಿದೆ. ಈ ಭಾಗಕ್ಕೆ ತೆರಳಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ಪರಿಶೀಲನೆ ನಡೆಸಿ ಪ್ರವಾಹದಲ್ಲಿ ಸಿಲುಕಿಕೊಂಡವರ ರಕ್ಷಣೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ