ಆ.13-15ರವರೆಗೆ ನಿಮ್ಮ ಮನೆಗಳಲ್ಲೂ ಹಾರಲಿ ತ್ರಿವರ್ಣಧ್ವಜ: ದೇಶವಾಸಿಗಳಿಗೆ ಮೋದಿ ಮನವಿ
Team Udayavani, Jul 22, 2022, 8:42 PM IST
ನವದೆಹಲಿ: “ಆಗಸ್ಟ್ 13ರಿಂದ 15ರವರೆಗೆ ನಿಮ್ಮ ನಿಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿ. ಆ ಮೂಲಕ “ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಶಕ್ತಿ ತುಂಬಿ…’
ಇದು ದೇಶವಾಸಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿರುವ ಮನವಿ. ಶುಕ್ರವಾರ ಈ ಕುರಿತು ಸರಣಿ ಟ್ವೀಟ್ಗಳನ್ನು ಮಾಡಿರುವ ಅವರು, “ಪ್ರತಿ ಮನೆಯಲ್ಲೂ ತ್ರಿವರ್ಣಧ್ವಜ ಎಂಬ ಈ ಅಭಿಯಾನವು ತ್ರಿವರ್ಣ ಧ್ವಜದೊಂದಿಗಿನ ನಮ್ಮ ನಂಟನ್ನು ಮತ್ತಷ್ಟು ಆಳವಾಗಿಸುತ್ತದೆ’ ಎಂದಿದ್ದಾರೆ.
“1947ರ ಜುಲೈ 22ರಂದೇ ದೇಶವು ತ್ರಿವರ್ಣ ಧ್ವಜವನ್ನು ರಾಷ್ಟ್ರೀಯ ಧ್ವಜವನ್ನಾಗಿ ಅಳವಡಿಸಿಕೊಂಡಿತು. ವಸಾಹತುಶಾಹಿ ಆಡಳಿತದ ವಿರುದ್ಧ ಹೋರಾಡುತ್ತಿದ್ದ ಸಂದರ್ಭದಲ್ಲಿ ಸ್ವತಂತ್ರ ಭಾರತದ ರಾಷ್ಟ್ರಧ್ವಜದ ಕನಸು ಕಾಣುತ್ತಿದ್ದ ಹೋರಾಟಗಾರರೆಲ್ಲರ ಧೈರ್ಯ ಮತ್ತು ಶೌರ್ಯವನ್ನು ಸ್ಮರಿಸುವ ದಿನವಿದು. ಅವರ ಕನಸನ್ನು ಸಾಕಾರಗೊಳಿಸುವ ಮತ್ತು ಅವರ ಕನಸಿನ ಭಾರತ ನಿರ್ಮಿಸುವ ಕರ್ತವ್ಯ ನಮ್ಮೆಲ್ಲರದು.
ಹಾಗಾಗಿ, ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಈ ಹೊತ್ತಲ್ಲಿ ನಾವು ಹರ್ ಘರ್ ತಿರಂಗಾ ಅಭಿಯಾನವನ್ನೂ ಬಲಿಷ್ಠಗೊಳಿಸೋಣ. 13ರಿಂದ 15 ಆಗಸ್ಟ್ ನಡುವೆ ನಿಮ್ಮ ನಿಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿ ಅಥವಾ ಪ್ರದರ್ಶಿಸಿ’ ಎಂದು ಭಾರತೀಯರೆಲ್ಲರಿಗೂ ಮೋದಿ ಸಲಹೆ ನೀಡಿದ್ದಾರೆ.
ಈ ಟ್ವೀಟ್ನ ಜೊತೆಗೆ, ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಮೊದಲ ತ್ರಿವರ್ಣಧ್ವಜವನ್ನು ಹಾರಿಸಿದ ಚಿತ್ರವನ್ನೂ ಮೋದಿ ಟ್ವಿಟರ್ನಲ್ಲಿ ಅಪ್ಲೋಡ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ