PM Modi’ಭಾರತದಾದ್ಯಂತ 10 ದಿನಗಳ ಎಡೆಬಿಡದ ಪ್ರವಾಸ: 29 ಕಾರ್ಯಕ್ರಮಗಳು
ಶ್ರೀನಗರದಲ್ಲಿ ವ್ಯಾಪಕ ಕಟ್ಟೆಚ್ಚರ...
Team Udayavani, Mar 3, 2024, 5:18 PM IST
ಹೊಸದಿಲ್ಲಿ: ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಮುಂದಿನ ಹತ್ತು ದಿನಗಳಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಉದ್ದಗಲದ ಹನ್ನೆರಡು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 29 ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಹನ್ನೆರಡು ರಾಜ್ಯಗಳಲ್ಲಿ ತೆಲಂಗಾಣ, ತಮಿಳುನಾಡು, ಒಡಿಶಾ, ಪಶ್ಚಿಮ ಬಂಗಾಳ, ಬಿಹಾರ, ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ, ಅರುಣಾಚಲ ಪ್ರದೇಶ, ಉತ್ತರ ಪ್ರದೇಶ, ಗುಜರಾತ್, ರಾಜಸ್ಥಾನ ಮತ್ತು ದೆಹಲಿ ಸೇರಿವೆ.
ಮಾರ್ಚ್ 4 ರಂದು, ಪ್ರಧಾನ ಮಂತ್ರಿಗಳು ತೆಲಂಗಾಣದ ಆದಿಲಾಬಾದ್ನಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಮಾಡಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವ ಮೂಲಕ ಸರಣಿಯನ್ನು ಪ್ರಾರಂಭಿಸಲಿದ್ದಾರೆ.
ಪ್ರಧಾನಮಂತ್ರಿಯವರು ತಮಿಳುನಾಡಿನ ಕಲ್ಪಾಕ್ಕಂನಲ್ಲಿರುವ ಅಣುಶಕ್ತಿ ಇಲಾಖೆ (ಡಿಎಇ) ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಭಾರತೀಯ ನಾಭಿಕಿಯಾ ವಿದ್ಯುತ್ ನಿಗಮ್ ಲಿಮಿಟೆಡ್ (ಭಾವಿನಿ) ಗೆ ಭೇಟಿ ನೀಡಲಿದ್ದಾರೆ. ಚೆನ್ನೈನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಭೆಯ ನಂತರ ಅವರು ಹೈದರಾಬಾದ್ಗೆ ಪ್ರಯಾಣಿಸಲಿದ್ದಾರೆ. ಮಾರ್ಚ್ 5 ರಂದು, ಪ್ರಧಾನಿ ಮೋದಿ ಅವರು ತೆಲಂಗಾಣದ ಸಂಗಾರೆಡ್ಡಿಯಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.
ಮಾರ್ಚ್ 7 ರಂದು ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲು ಪ್ರಧಾನಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರಕ್ಕೆ ಪ್ರಯಾಣಿಸಲಿದ್ದಾರೆ.ಈಗಾಗಲೇ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ. ಅದೇ ದಿನ ಸಂಜೆ ಹೊಸದಿಲ್ಲಿಯಲ್ಲಿ ಮಾಧ್ಯಮ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಾರ್ಚ್ 12 ರಂದು, ಪ್ರಧಾನಿ ಮೋದಿ ಅವರು ಗುಜರಾತ್ನ ಸಬರಮತಿಗೆ ಭೇಟಿ ನೀಡಲಿದ್ದಾರೆ. ಬಳಿಕ ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯ ಪೋಖ್ರಾನ್ ಪ್ರವಾಸಕ್ಕೆ ತೆರಳಲಿದ್ದಾರೆ. ಮಾರ್ಚ್ 13 ರಂದು ಗುಜರಾತ್ ಮತ್ತು ಅಸ್ಸಾಂನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮೂರು ಸೆಮಿಕಂಡಕ್ಟರ್ ಯೋಜನೆಗಳಿಗೆ ಅಡಿಗಲ್ಲು ಹಾಕುವುದರೊಂದಿಗೆ ಎಡೆಬಿಡದ ವೇಳಾಪಟ್ಟಿಯನ್ನು ಮುಕ್ತಾಯಗೊಳಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ