Watch; ರಾಜ್ಯಸಭೆ ಕಲಾಪ; ಗುಲಾಂ ನಬಿ ನಿವೃತ್ತಿ- ಗದ್ಗದಿತರಾದ ಪ್ರಧಾನಿ ನರೇಂದ್ರ ಮೋದಿ
2014ರಿಂದ ರಾಜ್ಯಸಭೆಯಲ್ಲಿ ಗುಲಾಂ ನಬಿ ಆಜಾದ್ ಅವರು ವಿರೋಧ ಪಕ್ಷದ ನಾಯಕರಾಗಿದ್ದರು.
Team Udayavani, Feb 9, 2021, 12:34 PM IST
ನವದೆಹಲಿ:ಕಾಂಗ್ರೆಸ್ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಅವರು ರಾಜ್ಯಸಭೆಯಿಂದ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ವಿದಾಯದ ಮಾತುಗಳನ್ನಾಡುತ್ತಿರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾವುಕರಾಗಿದ್ದು, ರಾಷ್ಟ್ರರಾಜಕಾರಣದ ಪರಂಪರೆಯನ್ನು ಮುಂದುವರಿಸಲು ಗುಲಾಂ ನಬಿ ಅವರ ಸ್ಥಾನಕ್ಕೆ ಮತ್ತೊಬ್ಬರನ್ನು ಆರಿಸುವುದು ಕಷ್ಟಕರವಾದ ಕೆಲಸವಾಗಿದೆ ಎಂದರು.
ಇದನ್ನೂ ಓದಿ:ವಿಧಾನ ಪರಿಷತ್ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ
ಮಂಗಳವಾರ(ಫೆ.09, 2021) ಕಲಾಪದಲ್ಲಿ ನಿವೃತ್ತರಾಗುತ್ತಿರುವ ರಾಜ್ಯಸಭಾ ಸದಸ್ಯರಿಗೆ ಶುಭ ವಿದಾಯದ ನುಡಿಗಳನ್ನಾಡಿದ ಪ್ರಧಾನಿ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿ ಪಕ್ಷದ ರಾಜಕೀಯವನ್ನು ತುಂಬಾ ಸುಲಭವಾಗಿ ನಡೆಸಿಕೊಂಡು ಹೋಗಲು ಸಾಧ್ಯವಿಲ್ಲ, ಆದರೆ ಗುಲಾಂ ನಬಿ ಆಜಾದ್ ಜೀ ಅವರು ಪಕ್ಷವನ್ನು ಮೀರಿ ಬೆಳೆದವರು, ಅವರ ಮೊದಲ ಆದ್ಯತೆ ದೇಶವಾಗಿತ್ತು ಎಂದು ಶ್ಲಾಘಿಸಿದರು.
ಕೋವಿಡ್ ಸಾಂಕ್ರಾಮಿಕ ಸೋಂಕು ಹಬ್ಬಿದ ಸಂದರ್ಭದಲ್ಲಿ ಸೋಂಕಿನ ವಿರುದ್ಧ ಹೋರಾಡುವ ನಿಟ್ಟಿನಲ್ಲಿ ಸರ್ವ ಪಕ್ಷದ ಸಭೆಯನ್ನು ಕರೆಯುವಂತೆ ಪ್ರಸ್ತಾಪ ಇಟ್ಟವರು ಗುಲಾಂ ನಬಿ ಆಜಾದ್ ಎಂಬುದಾಗಿ ಪ್ರಧಾನಿ ನೆನಪಿಸಿಕೊಂಡರು.
#WATCH: PM Modi gets emotional while reminiscing an incident involving Congress leader Ghulam Nabi Azad, during farewell to retiring members in Rajya Sabha. pic.twitter.com/vXqzqAVXFT
— ANI (@ANI) February 9, 2021
ಗುಲಾಂ ನಬಿ ಆಜಾದ್ ರೀತಿಯ ವಿರೋಧ ಪಕ್ಷದ ನಾಯಕರನ್ನು ಆರಿಸುವುದು ತುಂಬಾ ಕಷ್ಟದ ಕೆಲಸ. ಅವರು ಪಕ್ಷಕ್ಕಿಂತ ಹೆಚ್ಚಾಗಿ ದೇಶಕ್ಕಾಗಿ ದುಡಿದಿದ್ದಾರೆ. ನಾನು ಅವರನ್ನು ನನ್ನ ಗೆಳೆಯ ಎಂದು ಪರಿಗಣಿಸಿ ಭವಿಷ್ಯದಲ್ಲಿ ಒಳ್ಳೆಯದಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಹೇಳಿ ಗದ್ಗದಿತರಾದರು. ನೀರು ಕುಡಿದು ಮಾತನ್ನು ಮುಂದುವರಿಸಿದ ಅವರ ಕಣ್ಣಂಚಿನಲ್ಲಿ ನೀರು ಹರಿದಿದ್ದು, ಕೈ ಬೆರಳಿನಿಂದ ಒರೆಸಿಕೊಂಡು ಅಭಿನಂದಿಸಿದರು. ಗುಲಾಂ ನಬಿ ಅವರಿಗೆ ಸದಾ ರಾಜಕೀಯದ ಬಾಗಿಲು ತೆರೆದಿರುತ್ತದೆ. ಅವರು ರಾಜಕೀಯ ವಿಚಾರದಲ್ಲಿ ಯಾವಾಗಲೂ ತಮ್ಮ ಉತ್ತಮವಾದ ಸಲಹೆಗಳನ್ನು ಕೊಡಬಹುದಾಗಿದೆ ಎಂದು ತಿಳಿಸಿದರು.
2014ರಿಂದ ರಾಜ್ಯಸಭೆಯಲ್ಲಿ ಗುಲಾಂ ನಬಿ ಆಜಾದ್ ಅವರು ವಿರೋಧ ಪಕ್ಷದ ನಾಯಕರಾಗಿದ್ದರು. ಫೆ.15ರಂದು ಗುಲಾಂ ನಬಿ ಆಜಾದ್ ಅವರ ರಾಜ್ಯಸಭೆ ಅವಧಿ ಮುಕ್ತಾಯಗೊಳ್ಳಲಿದೆ. ಕಾಂಗ್ರೆಸ್ ಪಕ್ಷದಲ್ಲಿ ರಾಜಕೀಯ ಪಲ್ಲಟದ ಬೆಳವಣಿಗೆ ಸಂದರ್ಭದಲ್ಲಿಯೇ ಗುಲಾಂ ನಬಿ ರಾಜ್ಯಸಭೆಯಿಂದ ನಿವೃತ್ತಿಯಾಗುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ