ಸೋನಿಯಾ ಕೋಟೆ ರಾಯ್ ಬರೇಲಿಯಲ್ಲಿ ಗುಡುಗಿದ ಪ್ರಧಾನಿ ಮೋದಿ
Team Udayavani, Dec 16, 2018, 3:28 PM IST
ರಾಯಬರೇಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಕ್ಷೇತ್ರ ರಾಯ್ಬರೇಲಿಯಲ್ಲಿ 1,100 ಕೋಟಿ ರೂಪಾಯಿಯ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ. ಇದೇ ವೇಳೆ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು.
ರಾಯ್ ಬರೇಲಿಯಲ್ಲಿ ಸಾರ್ವಜನಿಕ ಸಭೆ ನಡೆಸುವುದರ ಜೊತೆಗೆ,900 ನೇ ಕೋಚ್ ಪ್ಯಾಕ್ಟರಿ ಮತ್ತು ಹಮ್ ಸಫರ್ ಎಕ್ಸ್ಪ್ರೆಸ್ಗೆ ಚಾಲನೆ ನೀಡಿದರು.
ಕೋಚ್ ಫ್ಯಾಕ್ಟರಿ ಇಲ್ಲಿನ ಇಂಜಿನಿಯರ್ ಮತ್ತು ಯುವಕರಿಗೆ ಉದ್ಯೋಗ ಕಲ್ಪಿಸಿಕೊಡಲಿದೆ ಎಂದರು.
ಕಾಂಗ್ರೆಸ್ ವಿರುದ್ಧ ವಾಗ್ಧಾಳಿ
ಹಿಂದಿನ ಸರ್ಕಾರ ಫ್ಯಾಕ್ಟರಿಯಲ್ಲಿ 5 ಸಾವಿರ ಮಂದಿಗೆ ಉದ್ಯೋಗ ಕಲ್ಪಿಸಲು ಮುಂದಾಗಿತ್ತು, ಆದರೆ ಅರ್ಧದಷ್ಟು ಮಂದಿಗೆ ಮಾತ್ರ ಉದ್ಯೋಗ ಕಲ್ಪಿಸಿತ್ತು.2014 ರಲ್ಲಿ ಹೊಸ ನೇಮಕಾತಿ ಮಾಡದೆ ಇರುವುದು ನಮ್ಮ ಗಮನಕ್ಕೆ ಬಂದಿತ್ತು ಎಂದು ಪ್ರಧಾನಿ ವಾಗ್ಧಾಳಿ ನಡೆಸಿದರು.
ಹೆಲಿಕ್ಯಾಪ್ಟರ್ ಹಗರಣದ ಆರೋಪಿ ಕ್ರಿಸ್ಟಿಯನ್ ಮೈಕಲ್ನನ್ನು ಭಾರತಕ್ಕೆ ಎಳೆದು ತಂದಾಗ ಕಾಂಗ್ರೆಸ್ ಹೇಗೆ ತನ್ನ ವಕೀಲರನ್ನು ರಕ್ಷಣೆಗೆ ಕಳುಹಿಸಿತು ಎನ್ನುವುದು ಗೊತ್ತಿದೆಯಲ್ಲ ಎಂದು ಪ್ರಧಾನಿ ಪ್ರಶ್ನಿಸಿದರು.
ಯಾವ ಪಕ್ಷದವರು ಸರ್ಜಿಕಲ್ ದಾಳಿಯ ಬಗ್ಗೆ ಪ್ರಶ್ನೆ ಮಾಡುತ್ತಾರೆಯೋ , ಅವರು ನಮ್ಮ ಸೈನಿಕರಿಂತ ಹೆಚ್ಚಾಗಿ ವೈರಿಗಳು ಮಾಡಿದ ಆರೋಪವನ್ನು ನಂಬುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು