ಗುರುವಾಯೂರಿನಲ್ಲಿ ಪ್ರಧಾನಿ;ಕಮಲಲೋಚನನೆದುರು ಕಮಲ ನಾಯಕನಿಗೆ ತುಲಾಭಾರ
Team Udayavani, Jun 8, 2019, 10:49 AM IST
ತ್ರಿಶೂರ್: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಇತಿಹಾಸ ಪ್ರಸಿದ್ದ ಗುರುವಾಯೂರು ಶ್ರೀಕೃಷ್ಣಸನ್ನಿಧಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ , ತಾವರೆ ಹೂವುಗಳಿಂದ ತುಲಾಭಾರ ಸೇವೆ ಸಲ್ಲಿಸಿದರು.
ತಮಿಳುನಾಡಿನಿಂದ ತರಿಸಲಾಗಿದ್ದ ಕಮಲದ ಹೂವುಗಳಿಂದ ತುಲಾಭಾರ ಸೇವೆ ಸಲ್ಲಿಸಿದರು. ಬಳಿಕ ಕದಳಿ ಬಾಳೆ, ಹಾಲು ಪರಮಾನ್ನ , ತುಪ್ಪ ಮತ್ತು ಶೇಷ ವಸ್ತ್ರ ಸಮರ್ಪಿಸಿದರು.
ಮೋದಿ ಅವರೊಂದಿಗೆ ದೇವಸ್ವಂ ಮಂಡಳಿಯ ಸದಸ್ಯರು, ಕೇರಳದ ಪ್ರಮುಖ ಬಿಜೆಪಿ ಮುಖಂಡರು ದೇವಾಲಯಕ್ಕೆ ಆಗಮಿಸಿದ್ದರು.
ದೇವಾಲಯದಲ್ಲಿ ವ್ಯಾಪಕಭದ್ರತೆ ಕೈಗೊಳ್ಳಲಾಗಿದ್ದು, ಪ್ರಮುಖ ವ್ಯಕ್ತಿಗಳಿಗೆ ಮಾತ್ರ ದೇವಸ್ಥಾನ ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತು. ಸಾವಿರಾರು ಮಂದಿ ದೇವಾಲಯದ ಹೊರಗೆ ನಿಂತು ಪ್ರಧಾನಿ ಮೋದಿ ಅವರ ಆಗಮನವನ್ನು ಕಾಯುತ್ತಿದ್ದರು.
#WATCH Kerala: Prime Minister Narendra Modi offers prayers at Sri Krishna Temple in Guruvayur of Thrissur. pic.twitter.com/HB98hDQAFk
— ANI (@ANI) June 8, 2019
ದೇವಾಲಯದಲ್ಲಿ ವಿಶೇಷ ಭದ್ರತಾ ಪಡೆಗಳು ಕಟ್ಟೆಚ್ಚರವಹಿಸಿದರೆ, ದೇವಾಲಯದ ಹೊರಗೆ ಪೊಲೀಸ್ ಸರ್ಪಗಾವಲು ಹಾಕಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airbus; 30 ಏರ್ಬಸ್ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ
ಬಾಂದ್ರಾ- ವರ್ಲಿ ಸೀ ಲಿಂಕ್ಗೆ 25,000 ಟನ್ ಗರ್ಡರ್ ಅಳವಡಿಕೆ
Telangana: ಪಿಯು ಫಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ