ಇಸ್ಕಾನ್ಗೆ ಮೋದಿ ಅಭಿನಂದನೆ
Team Udayavani, Sep 2, 2021, 6:55 AM IST
ನವದೆಹಲಿ: “”ಜಗತ್ತಿನಾದ್ಯಂತ ಇರುವ ಇಸ್ಕಾನ್ ದೇಗುಲಗಳು, ತಮ್ಮ ಮೂಲಕ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಹರಡುತ್ತಿವೆ. ಉತ್ಸಾಹ ಹಾಗೂ ಮಾನವೀಯತೆಯ ಪರಮೋತ್ಛ ಸ್ಥಿತಿಯೇ ನಂಬಿಕೆ ಎಂಬುದನ್ನು ಇಡೀ ವಿಶ್ವಕ್ಕೆ ಇಸ್ಕಾನ್ ಸಂಸ್ಥೆ ಮನವರಿಕೆ ಮಾಡಿಕೊಟ್ಟಿವೆ” ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಸ್ಥೆಯ (ಇಸ್ಕಾನ್) ಸಂಸ್ಥಾಪಕರಾದ ಶ್ರೀ ಶ್ರೀಮದ್ ಭಕ್ತಿವೇದಾಂತ ಪ್ರಭುಪಾದರ 125ನೇ ಜನ್ಮದಿನೋತ್ಸವದ ಸ್ಮರಣೆಗಾಗಿ ಕೇಂದ್ರ ಸರ್ಕಾರ ತಯಾರಿಸಿರುವ 125 ರೂ. ಮೌಲ್ಯದ ಬೆಳ್ಳಿ ನಾಣ್ಯಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, “”ಇಂದು ನಾವು ಶ್ರೀಮದ್ ಪ್ರಭುಪಾದರ 125ನೇ ಜನ್ಮ ದಿನೋತ್ಸವವನ್ನು ಆಚರಿಸುತ್ತಿದ್ದೇವೆ. ಇದು ಧ್ಯಾನ, ಭಕ್ತಿ ಮತ್ತು ನೆಮ್ಮದಿಯ ಸಮ್ಮಿಲನದಿಂದ ಆಗು ವಂಥ ಸಂತೋಷವನ್ನು ನೀಡುವಂಥ ಸುದಿನ ವಾಗಿದೆ. ವಿಶ್ವದೆಲ್ಲೆಡೆ ಹರಡಿರುವ ಶ್ರೀ ಪ್ರಭುಪಾದರ ಕೋಟ್ಯಂತರ ಅನುಯಾಯಿಗಳು ಈ ಸಂತೋಷವನ್ನು ಇಂದು ಅನುಭವಿಸುತ್ತಿದ್ದಾರೆ” ಎಂದು ತಿಳಿಸಿದರು.
ಇದೇ ವೇಳೆ, ಭಾರತೀಯ ಸಮಾಜಕ್ಕಾಗಿ ಇಸ್ಕಾನ್ ಸಂಸ್ಥೆ ನೀಡಿದ ಸೇವೆಯನ್ನು ಸ್ಮರಿಸಿದ ಅವರು, “”2001ರಲ್ಲಿ ಕಛ್ ನಲ್ಲಿ ಭೂಕಂಪವಾದಾಗ, ಉತ್ತರಾಖಾಂಡ, ಒಡಿಶಾ, ಪಶ್ಚಿಮ ಬಂಗಾಳಗಳಲ್ಲಿ ನೈಸರ್ಗಿಕ ವಿಕೋಪಗಳಾದಾಗ ಅಲ್ಲೆಲ್ಲಾ ಇಸ್ಕಾನ್ ನೀಡಿದ ಸೇವೆಯನ್ನು ಎಂದಿಗೂ ಮರೆಯುವಂತಿಲ್ಲ” ಎಂದರು. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಕಿಶನ್ ರೆಡ್ಡಿ ಕೂಡ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ