ಹಲವು ಯೋಜನೆಗಳ ಉದ್ಘಾಟನೆಗಾಗಿ ಕೇದಾರನಾಥಕ್ಕೆ ಪ್ರಧಾನ ಮಂತ್ರಿಗಳ ಭೇಟಿ
Team Udayavani, Oct 17, 2021, 2:22 PM IST
ಡೆಹ್ರಾಡೂನ್:- ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 5 ರಂದು ಕೇದಾರನಾಥಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಬಳಿಕ 250 ಕೋಟಿ ರೂ. ಮೌಲ್ಯದ ಕೇದಾರಪುರಿ ಪುನರ್ ನಿರ್ಮಾಣ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. 30 ದಿನಗಳೊಳಗೆ ಇದು ಕೇದಾರಕ್ಕೆ ಅವರ ಎರಡನೇ ಭೇಟಿಯಾಗಿದೆ.
ಪ್ರಧಾನಮಂತ್ರಿ ಅವರು ಅಕ್ಟೋಬರ್ 7 ರಂದು ಋಷಿಕೇಶದಲ್ಲಿರುವ ಆಲ್ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಗೆ ಭೇಟಿ ನೀಡಿ ಅಲ್ಲಿ ಆಮ್ಲಜನಕ ಘಟಕವನ್ನು ಉದ್ಘಾಟಿಸಿದ್ದಾರೆ.
ಮುಂದಿನ ತಿಂಗಳು ಕೇದಾರನಾಥಕ್ಕೆ ಮೋದಿಯವರ ಭೇಟಿಯನ್ನು ಖಚಿತ ಪಡಿಸಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುವುದರ ಜೊತೆಗೆ, ಆದಿ ಗುರು ಶಂಕರಾಚಾರ್ಯರ ಪುನರ್ನಿರ್ಮಿತ ಸಮಾಧಿ ಸೇರಿದಂತೆ 250 ಕೋಟಿ ಮೌಲ್ಯದ ಕೇದಾರಪುರಿ ಪುನರ್ನಿರ್ಮಾಣ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ;- ಜಯದೇವ ಜಂಗೀ ಕುಸ್ತಿ ಪಂದ್ಯಾವಳಿಗೆ ಚಾಲನೆ
150 ಕೋಟಿ ಮೌಲ್ಯದ ಎರಡನೇ ಹಂತದ ಕೇದಾರಪುರಿ ಪುನರ್ನಿರ್ಮಾಣ ಯೋಜನೆಗಳಿಗೆ ಅಂದೇ ಪ್ರಧಾನ ಮಂತ್ರಿಗಳು ಶಂಕುಸ್ಥಾಪನೆ ಮಾಡುವ ಸಾಧ್ಯತೆಯಿದೆ ಎಂದು ಧಾಮಿ ಹೇಳಿದರು.
2014ರ ನಂತರ ಕೇದಾರನಾಥ್ಗೆ ಪ್ರಧಾನ ಮಂತ್ರಿ ಹಲವು ಬಾರಿ ಬೇಟಿ ನೀಡಿದ್ದು, ಕೇದಾರಪುರಿ ಪುನರ್ ನಿರ್ಮಾಣ ಯೋಜನೆಗಳನ್ನು ಖುದ್ದಾಗಿ ಅವರೇ ಗಮನಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
MUST WATCH
ಹೊಸ ಸೇರ್ಪಡೆ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…