ನಾಳೆ ‘ಪರೀಕ್ಷಾ ಪೆ ಚರ್ಚಾ’ : ಪರೀಕ್ಷೆಗಳು ಜೀವನದ ಕನಸುಗಳ ಅಂತ್ಯವಲ್ಲ : ಪ್ರಧಾನಿ ಮೋದಿ
Team Udayavani, Apr 6, 2021, 11:51 AM IST
ನವ ದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ವಿದ್ಯಾರ್ಥಿಗಳೊಂದಿಗಿನ ವಾರ್ಷಿಕ ಸಂವಾದ ಕಾರ್ಯಕ್ರಮ “ಪರಿಕ್ಷಾ ಪೆ ಚರ್ಚಾ” ಏಪ್ರಿಲ್ 7 ರಂದು ನಡೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.
“ಹೊಸ ಸ್ವರೂಪ, ವ್ಯಾಪಕವಾದ ವಿಷಯಗಳ ಕುರಿತು ಹಲವಾರು ಆಸಕ್ತಿದಾಯಕ ಪ್ರಶ್ನೆಗಳು ಮತ್ತು ನಮ್ಮ ಕೆಚ್ಚೆದೆಯ # ಎಕ್ಸಮ್ ವಾರಿಯರ್ಸ್, ಪೋಷಕರು ಮತ್ತು ಶಿಕ್ಷಕರೊಂದಿಗೆ ಸ್ಮರಣೀಯ ಚರ್ಚೆ. ಏಪ್ರಿಲ್ 7 ರಂದು ಸಂಜೆ 7 ಗಂಟೆಗೆ ‘ಪರಿಕ್ಷಾ ಪೆ ಚರ್ಚಾ’ ವೀಕ್ಷಿಸಿ” ಎಂದು ಪ್ರಧಾನಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಓದಿ : ಈ ಮದುವೆ ಗರ್ಭಧಾರಣೆಯ ಫಲಿತಾಂಶವಲ್ಲ : ನಟಿ ದಿಯಾ ಮಿರ್ಜಾ
ತಮ್ಮ ಟ್ವೀಟ್ ಜೊತೆಗೆ, ಈ ವರ್ಷದ ‘ಪರಿಕ್ಷಾ ಪೆ ಚರ್ಚಾ’ದ ಮುಖ್ಯಾಂಶಗಳನ್ನು ವಿವರಿಸುವ ವೀಡಿಯೊವನ್ನು ಸಹ ಅವರು ಟ್ಯಾಗ್ ಮಾಡಿದ್ದಾರೆ.
ಕೋವಿಡ್ 19 ಮಹಾಮಾರಿಯ ಕರಿ ನೆರಳಿನಲ್ಲಿ ನಾವಿದ್ದೇವೆ. ಆ ಕಾರಣದಿಂದಾಗಿ ನೇರವಾಗಿ ನಿಮ್ಮೊಂದಿಗೆ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿಲ್ಲ. ಈ ಬಾರಿ ಹೊಸ ಸ್ವರೂಪದ ವರ್ಷುವಲ್ ಆವೃತ್ತಿಯ ಮೂಲಕ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಪರೀಕ್ಷೆಗಳನ್ನು ಒಂದು ಅವಕಾಶವಾಗಿ ನೋಡಬೇಕು ಮತ್ತು ಪರೀಕ್ಷೆಗಳು ಜೀವನದ ಕನಸುಗಳ ಅಂತ್ಯವಲ್ಲ ಎಂದು ಮೋದಿ ವೀಡಿಯೋ ಸಂದೇಶದ ಮೂಲಕ ತಿಳಿಸಿದ್ದಾರೆ.
ಇನ್ನು, ವರ್ಚುವಲ್ ಈವೆಂಟ್ ನಲ್ಲಿ ಪ್ರಧಾನ ಮಂತ್ರಿ ಮಕ್ಕಳೊಂದಿಗೆ ಸ್ನೇಹಿತರಂತೆ ಮಾತನಾಡುತ್ತಾರೆ ಮತ್ತು ಶಿಕ್ಷಕರು ಮತ್ತು ಪೋಷಕರೊಂದಿಗೆ ಸಂವಹನ ನಡೆಸುತ್ತಾರೆ ಎಂದು ವೀಡಿಯೊದಲ್ಲಿ ಧ್ವನಿಮುದ್ರಿಕೆ ತಿಳಿಸಿದೆ.
ಇದು ಕೇವಲ ಪರೀಕ್ಷೆ ಹಾಗೂ ಪರೀಕ್ಷೆಗಳ ವಿಚಾರಗಳಿಗೆ ಮಾತ್ರ ಸೀಮಿತವಾಗಿರುವುದಿಲ್ಲ. ವಿದ್ಯಾರ್ಥಿಗಳ ಹಾಗೂ ಪೋಷಕರಲ್ಲಿನ ಒತ್ತಡಗಳ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಓದಿ : ಮೇ 4 ರ ನಂತರವಷ್ಟೇ ಸಾರಿಗೆ ನೌಕರರ ಬೇಡಿಕೆ ಈಡೇರಿಕೆ ಸಾಧ್ಯ: ಲಕ್ಷ್ಮಣ ಸವದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ