ರೈತರಿಗೆ ಹೆಚ್ಚಿನ ಅನುಕೂಲ: ಪ್ರತಿಭಟನೆ ನಡುವೆ ನೂತನ ಕೃಷಿ ಕಾಯ್ದೆಗೆ ಪ್ರಧಾನಿ ಮೋದಿ ಸಮರ್ಥನೆ
ಈ ಹಿಂದೆ ರೈತರಿಗೆ ಹೆಚ್ಚಿನ ಲಾಭವಾಗುವುದನ್ನು ತಪ್ಪಿಸಿ, ಮಧ್ಯವರ್ತಿಗಳಿಗೆ ಲಾಭ ಮಾಡಿಕೊಡಲಾಗುತ್ತಿತ್ತು.
Team Udayavani, Nov 30, 2020, 4:36 PM IST
ಲಕ್ನೋ/ವಾರಾಣಸಿ: ಕೇಂದ್ರ ಸರ್ಕಾರ ಜಾರಿಗೊಳಿಸಿದ ನೂತನ ಕೃಷಿ ಸಂಬಂಧಿ ಕಾಯ್ದೆ ವಿರೋಧಿ ಪಂಜಾಬ್, ಹರ್ಯಾಣ ರೈತರು ನಡೆಸುತ್ತಿರುವ ದೆಹಲಿ ಚಲೋ ಪ್ರತಿಭಟನೆ ಐದನೇ ದಿನಕ್ಕೆ ಕಾಲಿಟ್ಟಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ(ನವೆಂಬರ್ 30, 2020), ನೂತನ ಕಾಯ್ದೆ ರೈತರಿಗೆ ಹೆಚ್ಚಿನ ಬಲ ನೀಡಲಿದೆ. ಅಲ್ಲದೇ ಹೆಚ್ಚಿನ ಆಯ್ಕೆ ಮತ್ತು ಕಾನೂನು ರಕ್ಷಣೆ ಕೂಡ ಸಿಗಲಿದೆ ಎಂದು ಹೇಳುವ ಮೂಲಕ ಕೇಂದ್ರದ ನೂತನ ಕೃಷಿ ಕಾಯ್ದೆಯನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.
ವಿರೋಧ ಪಕ್ಷಗಳು ರೈತರ ಕಾಯ್ದೆಯ ಬಗ್ಗೆ ದಾರಿ ತಪ್ಪಿಸುವ ಹೇಳಿಕೆ ನೀಡುತ್ತಿದ್ದು, ರೈತರು ಬೀದಿಗಿಳಿಯುವಂತೆ ಮಾಡಿವೆ. ಈ ಮೊದಲು ರೈತರ ಸಾಲಮನ್ನಾದ ಪ್ಯಾಕೇಜ್ ಘೋಷಿಸಲಾಗುತ್ತಿತ್ತು. ಆದರೆ ಇಂತಹ ಲಾಭದ ಯೋಜನೆ ಯಾವತ್ತೂ ರೈತರಿಗೆ ತಲುಪುವಂತೆ ಮಾಡಿಲ್ಲ ಎಂದು ಪ್ರಧಾನಿ ವಾಗ್ದಾಳಿ ನಡೆಸಿದರು.
ರೈತರ ಅಭಿವೃದ್ಧಿಗಾಗಿ ಕೈಗೊಂಡ ನಮ್ಮ ನಿರ್ಧಾರ ಸರಿಯಾಗಿದೆ. ಇದು ರೈತರಿಗೆ ಎಲ್ಲಾ ರೀತಿಯಿಂದಲೂ ಅನುಕೂಲ ಕಲ್ಪಿಸಲಿದೆ. ಇಂತಹ ಅನುಕೂಲ ಇನ್ಮುಂದೆ ಸಾಕಾರಗೊಳ್ಳಲು ಸಾಧ್ಯವಿಲ್ಲ ಎಂದು ಪ್ರಧಾನಿ ಹೇಳಿದರು.
ಈ ಹಿಂದೆ ರೈತರಿಗೆ ಹೆಚ್ಚಿನ ಲಾಭವಾಗುವುದನ್ನು ತಪ್ಪಿಸಿ, ಮಧ್ಯವರ್ತಿಗಳಿಗೆ ಲಾಭ ಮಾಡಿಕೊಡಲಾಗುತ್ತಿತ್ತು. ಆದರೆ ನೂತನ ಕೃಷಿ ಕಾಯ್ದೆ ರೈತರಿಗೆ ಹೆಚ್ಚಿನ ಲಾಭ ತಂದುಕೊಡಲಿದೆ. ಮುಂದಿನ ದಿನಗಳಲ್ಲಿ ಹೊಸ ಕಾಯ್ದೆ ರೈತರಿಗೆ ತಂದುಕೊಡಲಿರುವ ಲಾಭವನ್ನು ನಾವು ಕಾಣಬಹುದಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಹೊಸ ಕಾಯ್ದೆಯಿಂದ ರೈತರಿಗೆ ಮಾರುಕಟ್ಟೆಗೆ ನೇರವಾಗಿ ಮಾರಾಟ ಮಾಡುವ ಅವಕಾಶ ಕಲ್ಪಿಸಲಾಗಿದೆ. ಇದರಲ್ಲಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆ ಕೂಡಾ ಸೇರಿದೆ. ಒಂದು ವೇಳೆ ಯಾರಾದರೂ ಹಳೆಯ ವ್ಯವಸ್ಥೆಯೇ ಉತ್ತಮವಾಗಿತ್ತು ಎಂದು ಭಾವಿಸಿದರೆ, ಈ ಹೊಸ ಕಾಯ್ದೆಯನ್ನು ಯಾರಾದರೂ ಹೇಗೆ ತಡೆಯಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಈ ಮೊದಲು ಮಂಡಿ(ಮಾರುಕಟ್ಟೆ)ಯ ಹೊರಭಾಗದಲ್ಲಿ ಯಾವುದೇ ವ್ಯವಹಾರ ನಡೆಸಿದರು ಅದನ್ನು ಅಕ್ರಮ ಎಂದು ಪರಿಗಣಿಸಲಾಗುತ್ತಿತ್ತು. ಇದು ಸಣ್ಣ ಹಿಡುವಳಿದಾರ ರೈತರಿಗೆ ವಿರುದ್ಧವಾಗಿತ್ತು. ಅವರಿಗೆ ಮಂಡಿ ತಲುಪಲು ಸಾಧ್ಯವಿಲ್ಲವಾಗಿತ್ತು. ಆದರೆ ಹೊಸ ಕಾಯ್ದೆಯಿಂದ ಸಣ್ಣ ರೈತರು ಕೂಡಾ ಮಂಡಿಯ ಹೊರಭಾಗದಲ್ಲಿ ಕಾನೂನು ಬದ್ಧವಾಗಿ ಬೆಳೆ ಮಾರಾಟ ಮಾಡುವ ಅವಕಾಶ ಇದೆ. ಹೊಸ ಕಾಯ್ದೆ ರೈತರಿಗೆ ಹಲವು ಆಯ್ಕೆಗಳನ್ನು ನೀಡಿರುವುದನ್ನು ಮನಗಾಣಬೇಕು ಎಂದು ಪ್ರಧಾನಿ ಮೋದಿ ಅವರು ವಾರಾಣಸಿಯಲ್ಲಿ ನೂತನವಾಗಿ ನಿರ್ಮಿಸಿದ ಆರು ಲೇನ್ ಗಳ ರಾಷ್ಟ್ರೀಯ ಹೆದ್ದಾರಿಯನ್ನು ಉದ್ಘಾಟಿಸಿ ಮಾತನಾಡಿದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರೀಕ್ಷೆ ಪಾಸಾಯ್ತು ಹಾಕ್-ಐ ಯುದ್ಧ ವಿಮಾನ : ಒಡಿಶಾದ ಕರಾವಳಿಯಲ್ಲಿ ಯಶಸ್ವಿ ಪರೀಕ್ಷೆ
ಹಕ್ಕಿ ಜ್ವರದ ಹಿನ್ನೆಲೆ: ಅರ್ಧ ಬೇಯಿಸಿದ ಮೊಟ್ಟೆ ತಿನ್ನಬೇಡಿ ಎಂದ ಆಹಾರ ಪ್ರಾಧಿಕಾರ
ಮನಕಲಕುವ ಘಟನೆ: ಕಬಡ್ಡಿ … ಕಬಡ್ಡಿ… ಎನ್ನುತ್ತಲೇ ಪ್ರಾಣಬಿಟ್ಟ ಯುವಕ !
ಸೆರಮ್ ಇನ್ಸ್ ಟಿಟ್ಯೂಟ್ ಅಗ್ನಿ ಅವಘಡದಲ್ಲಿ ಐವರು ದುರ್ಮರಣ, ಘಟನೆ ಬಗ್ಗೆ ತನಿಖೆಗೆ ಆದೇಶ
ಸೀಶೆಲ್ಸ್, ಮಯಾನ್ಮಾರ್ ದೇಶಗಳಿಗೆ ಭಾರತದ ಕೋವಿಡ್ ಲಸಿಕೆ ರವಾನೆ
MUST WATCH
ಬಸ್ ನೊಳಗೆ ಯುವತಿಗೆ ಕಿರುಕುಳ: ಘಟನೆ ಬಗ್ಗೆ ಯುವತಿ ಹೇಳಿದ್ದೇನು?
ಬಸ್ ನಲ್ಲಿ ಕಿರುಕುಳ ಪೋಸ್ಟ್: ಆರೋಪಿಯ ಬಂಧನ, ಪೊಲೀಸರೆದುರೇ ಕಪಾಳ ಮೋಕ್ಷ ಮಾಡಿದ ಯುವತಿ
PLASTIC ನಿಂದ ತಯಾರಾದ ECHO BRICKS ನ ಉಪಯೋಗಗಳು ಹಾಗೂ ಪ್ರಯೋಜನಗಳು
Manipalದ Auto Rickshaw ಚಾಲಕನಿಂದ Battery ಚಾಲಿತ Yamaha R15 ನೂತನ ಆವಿಷ್ಕಾರ
ಸರ್ವಿಸ್ ಆನ್ ವೀಲ್ಸ್ : ಮನೆ ಬಾಗಿಲಿಗೆ ಸರಕಾರಿ ಸೇವೆ
ಹೊಸ ಸೇರ್ಪಡೆ
ಭಾರೀ ಸ್ಫೋಟದ ಸದ್ದಿಗೆ ಬೆಚ್ಚಿಬಿದ್ದ ಶಿವಮೊಗ್ಗ ಜನತೆ
ನಿಗದಿಯಂತೆ ಕಾಮನ್ವೆಲ್ತ್ ಗೇಮ್ಸ್: ಸಿಡಬ್ಲ್ಯುಜಿ ಫೆಡರೇಶನ್ ವಿಶ್ವಾಸ
ಸಿಸಿಬಿ ಪೊಲೀಸರ ಕಾರ್ಯಾಚರಣೆ : 38 ಕೆ.ಜಿ ಗಾಂಜಾ ಸಹಿತ ನಾಲ್ವರು ಆರೋಪಿಗಳ ಬಂಧನ
ತನ್ನನ್ನು ಧೋನಿ ಜೊತೆ ಹೋಲಿಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪಂತ್
ಪರೀಕ್ಷೆ ಪಾಸಾಯ್ತು ಹಾಕ್-ಐ ಯುದ್ಧ ವಿಮಾನ : ಒಡಿಶಾದ ಕರಾವಳಿಯಲ್ಲಿ ಯಶಸ್ವಿ ಪರೀಕ್ಷೆ