ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಉ.ಪ್ರದೇಶದ ಕುಶಿನಗರದಲ್ಲಿ 260 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ

Team Udayavani, Oct 20, 2021, 6:20 AM IST

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಬುಧವಾರ ಉತ್ತರಪ್ರದೇಶದ ಕುಶಿನಗರದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ.

260 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಸುಂದರ ನಿಲ್ದಾಣದ ಮೂಲಕ ದೇಶೀಯ ವಿಮಾನಗಳೂ ಕಾರ್ಯಾಚರಿಸಲಿವೆ. ಬುಧವಾರ ಬೆಳಗ್ಗೆ 10ಕ್ಕೆ ಶ್ರೀಲಂಕಾದ ಕೊಲಂಬೊದಿಂದ ಕುಶಿನಗರಕ್ಕೆ ವಿಮಾನವೊಂದು ಬಂದಿಳಿಯಲಿದೆ. ಅನಂತರ ಉದ್ಘಾಟನೆ ನೆರವೇರಲಿದೆ.

ಕೊಲಂಬೊದಿಂದ ಬರಲಿರುವ ಈ ವಿಮಾನದಲ್ಲಿ ವಿವಿಧ ದೇಶಗಳ ಬೌದ್ಧ ಭಿಕ್ಷುಗಳು, ರಾಯಭಾರಿಗಳು, ಇತರೆ ಗಣ್ಯರೂ ಸೇರಿ ಒಟ್ಟು 100 ಮಂದಿ ಇರುತ್ತಾರೆ. ವಿಮಾನ ನಿಲ್ದಾಣದ ಉದ್ಘಾಟನೆಯ ನಂತರ ಬುದ್ಧನ ಪರಿನಿರ್ವಾಣ ಸ್ತೂಪದಲ್ಲಿ ನಡೆಯುವ ಅಭಿಧಮ್ಮ ದಿನಾಚರಣೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ.

ಬೌದ್ಧ ಭಿಕ್ಷುಗಳು ಮೂರು ತಿಂಗಳು ನಿರಂತರ ಧ್ಯಾನ, ಇತರೆ ಆಧ್ಯಾತ್ಮಿಕ ಚಟುವಟಿಕೆಗಳನ್ನು ಮುಗಿಸುವ ದಿನಕ್ಕೆ ಅಭಿಧಮ್ಮ ಎನ್ನುತ್ತಾರೆ. ಈ ಕಾರ್ಯಕ್ರಮದಲ್ಲಿ ಬೋಧಿ ವೃಕ್ಷ ನೆಟ್ಟು ನಂತರ ಬೌದ್ಧ ಸೂತ್ರಗಳ ತಾಳೆಗರಿ ಗ್ರಂಥಗಳು, ಅಜಂತಾ ಗುಹೆಗಳಲ್ಲಿ ರಚಿತವಾಗಿರುವ ಚಿತ್ರಗಳ ಪ್ರದರ್ಶನವನ್ನು ಮೋದಿ ವೀಕ್ಷಿಸಲಿದ್ದಾರೆ.

ಇದನ್ನೂ ಓದಿ:100ಕೋಟಿ ಸನಿಹಕ್ಕೆ ಲಸಿಕೆ ಅಭಿಯಾನ :ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ

ಇದಾದ ನಂತರ 280 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ರಾಜಕೀಯ ಮೆಡಿಕಲ್‌ ಕಾಲೇಜನ್ನು ಉದ್ಘಾಟಿಸಲಿದ್ದಾರೆ.

ಕುಶಿನಗರ ಬುದ್ಧನ ನಿರ್ವಾಣ ಸ್ಥಳ
ಉತ್ತರಪ್ರದೇಶದ ಕುಶಿನಗರ ಜಿಲ್ಲೆಯ ಮುಖ್ಯ ನಗರ ಕುಶಿನಗರ. ಇದು ಬೌದ್ಧ ಧರ್ಮದ ಸ್ಥಾಪಕ ಗೌತಮ ಬುದ್ಧನ ದೇಹಬಿಟ್ಟ ಸ್ಥಳ. ಇದನ್ನೇ ಬೌದ್ಧರು ಮಹಪರಿನಿರ್ವಾಣ ಸ್ಥಳ ಎಂದು ಕರೆಯುತ್ತಾರೆ. ಆದ್ದರಿಂದಲೇ ಇಲ್ಲಿ ಬುದ್ಧನ ಸುಂದರ ಸ್ತೂಪ ಅಥವಾ ದೇವಸ್ಥಾನವಿದೆ. ಇದು ಬೌದ್ಧರ ಪಾಲಿಗೆ ಪವಿತ್ರ ಯಾತ್ರಾಸ್ಥಳ.

ಟಾಪ್ ನ್ಯೂಸ್

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ

M B PATILL

BJPಯ ಎಲ್ಲ ಹಗರಣಗಳ ತನಿಖೆ: M.B. ಪಾಟೀಲ್‌

ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಜಾರಿ: ಜನಾರ್ದನ ಪೂಜಾರಿ ಶ್ಲಾಘನೆ

ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಜಾರಿ: ಜನಾರ್ದನ ಪೂಜಾರಿ ಶ್ಲಾಘನೆ

k j george

Congress Guarantee: 2.14 ಕೋಟಿ ಗ್ರಾಹಕರಿಗೂ 200 ಯೂ. ಉಚಿತ ವಿದ್ಯುತ್‌-ಕೆ.ಜೆ. ಜಾರ್ಜ್‌

ರೈಲುಗಳ ರದ್ದು: ಹಿಂಪಾವತಿಗೆ ನಿಲ್ದಾಣಗಳಲ್ಲಿ ನೂಕುನುಗ್ಗಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LOVE JIHAD

Love Jehad: ಪ್ರತ್ಯೇಕ ಪ್ರಕರಣಗಳಲ್ಲಿ 2 ಬಂಧನ

MODI US PARLIAMENT

2ನೇ ಬಾರಿ ಅಮೆರಿಕದ ಜಂಟಿ ಸಂಸತ್‌ ಉದ್ದೇಶಿಸಿ PM ಮೋದಿ ಭಾಷಣ

FISHERMAN

Indo-Pak: 200 ಭಾರತೀಯ ಮೀನುಗಾರರ ಹಸ್ತಾಂತರ

POPE

ಭ್ರಷ್ಟಾಚಾರ ಬೇಡ: ಪೋಪ್‌ ಎಚ್ಚರಿಕೆ

train-track

Express train ಬರುವ ವೇಳೆ ಟ್ರ್ಯಾಕ್ ಮೇಲೆ ಲಾರಿ ಟೈರ್‌ ಗಳು; ಆರೋಪಿಗಳಿಗೆ ಶೋಧ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ

M B PATILL

BJPಯ ಎಲ್ಲ ಹಗರಣಗಳ ತನಿಖೆ: M.B. ಪಾಟೀಲ್‌

ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಜಾರಿ: ಜನಾರ್ದನ ಪೂಜಾರಿ ಶ್ಲಾಘನೆ

ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಜಾರಿ: ಜನಾರ್ದನ ಪೂಜಾರಿ ಶ್ಲಾಘನೆ