8 ಕೋಟಿ ಜನರನ್ನು ತಲುಪಲಿದೆ ಉಜ್ವಲ
Team Udayavani, Sep 7, 2019, 5:16 AM IST
ನವದೆಹಲಿ: ಬಡವರಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ಒದಗಿಸುವ ಯೋಜನೆ ನಿರೀಕ್ಷೆಗೂ ಮೀರಿ 8 ಕೋಟಿ ಫಲಾನುಭವಿಗಳನ್ನು ಹೊಂದಲಿದ್ದು, 8 ಕೋಟಿ ಗುರಿಯ ಪೈಕಿ ಕೊನೆಯ ಎಲ್ಪಿಜಿ ಸಿಲಿಂಡರ್ ಅನ್ನು ಪ್ರಧಾನಿ ನರೇಂದ್ರ ಮೋದಿ ಫಲಾನುಭವಿಗೆ ಹಸ್ತಾಂತರಿಸಲಿದ್ದಾರೆ.
2016 ಮೇ 1 ರಂದು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಪರಿಚಯಿಸಿದಾಗ 2019 ಮಾರ್ಚ್ ವೇಳೆಗೆ 5 ಕೋಟಿ ಸಂಪರ್ಕವನ್ನು ನೀಡುವ ಗುರಿ ಹಮ್ಮಿಕೊಳ್ಳಲಾಗಿತ್ತು. ಆದರೆ ಈ ಗುರಿಯನ್ನೂ ಮೀರಿ 8 ಕೋಟಿ ಸಂಪರ್ಕಗಳನ್ನು ನೀಡಲಾಗುತ್ತಿದೆ. ಈ ಸಂಬಂಧ ಮಹಾರಾಷ್ಟ್ರದ ಔರಂಗಾಬಾದ್ನ ಸೇಂದ್ರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇಲ್ಲಿ ಫಲಾನುಭವಿಗಳಿಗೆ ಮೋದಿ ಸಿಲಿಂಡರ್ ವಿತರಿಸಲಿದ್ದಾರೆ.
ಈ ಯೋಜನೆ ಅಡಿಯಲ್ಲಿ 1600 ರೂ. ಸಬ್ಸಿಡಿಯನ್ನು ಇಂಧನ ಕಂಪನಿಗಳಿಗೆ ಕೇಂದ್ರ ಸರ್ಕಾರ ತಲಾ ಸಂಪರ್ಕದ ಮೇಲೆ ಒದಗಿಸಲಿದೆ. ಇಂಧನ ಕಂಪನಿಗಳು ಬಡವರಿಗೆ ಉಚಿತವಾಗಿ ಸಂಪರ್ಕ ಒದಗಿಸಲಿವೆ. ಒಲೆ ಹಾಗೂ ಮೊದಲ ಮರುಪೂರಣದ ಹಣವನ್ನು ಮಾತ್ರ ಫಲಾನುಭವಿಗಳು ಭರಿಸಬೇಕಿರುತ್ತದೆ. ಬಡವರಿಗೆ ಹೊರೆ ಕಡಿಮೆ ಮಾಡಲು 5 ಕಿಲೋ ಸಿಲಿಂಡರ್ ಖರೀದಿಸುವ ಆಯ್ಕೆಯನ್ನೂ ಸರ್ಕಾರ ಒದಗಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ