ಜನರಿಗೂ ಮುನ್ನೆಚ್ಚರಿಕೆ ನೀಡಿ: ಪಿಎಂಒ
Team Udayavani, May 22, 2018, 6:00 AM IST
ನವದೆಹಲಿ: ಪ್ರತಿಕೂಲ ಹವಾಮಾನದ ಸಂದರ್ಭದಲ್ಲಿ ಜನರು ಯಾವ ರೀತಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂಬ ಬಗ್ಗೆಯೂ ಹವಾಮಾನ ಇಲಾಖೆ ಮಾಹಿತಿ ನೀಡಬೇಕು ಎಂದು ಪ್ರಧಾನ ಮಂತ್ರಿಗಳ ಕಾರ್ಯಾಲಯ ಹೇಳಿದೆ. ಇತ್ತೀಚೆಗೆ ಉತ್ತರ ಭಾರತದಾದ್ಯಂತ ಬೀಸಿದ ಧೂಳಿನ ಬಿರುಗಾಳಿಗೆ 200ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು. ಇದು ಪ್ರಧಾನಿ ನರೇಂದ್ರ ಮೋದಿಯವರಿಗೆ ದುಃಖ ತಂದಿದೆ. ಹೀಗಾಗಿ, ಹವಾಮಾನ ಇಲಾಖೆ ಪ್ರತಿಕೂಲ ವಾತಾವರಣದ ಜತೆಗೆ ಜನರು ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಬೇಕು ಎಂದು ಪ್ರಧಾನಿ ಸೂಚಿಸಿದ್ದಾರೆ ಎಂದು ಭೂವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಂ.ರಾಜೀವನ್ ಹೇಳಿದ್ದಾರೆ.