ಪ್ರಧಾನಿ ಬಾಂಗ್ಲಾದೇಶ ಭೇಟಿ ನೀತಿ ಸಂಹಿತೆಯ ಉಲ್ಲಂಘನೆ:ಮೋದಿ ವಿರುದ್ಧ ಆಯೋಗಕ್ಕೆ ಟಿಎಂಸಿ ದೂರು
Team Udayavani, Mar 30, 2021, 5:56 PM IST
ನವ ದೆಹಲಿ : ಪ್ರಧಾನಿ ಮೋದಿಯವರ ಬಾಂಗ್ಲಾದೇಶ ಪ್ರವಾಸಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಭಾರತದ ಚುನಾವಣಾ ಆಯೋಗಕ್ಕೆ ತೃಣಮೂಲ ಕಾಂಗ್ರೆಸ್ ದೂರು ನೀಡಿದೆ.
ಪ್ರಧಾನಿಯವರ ಬಾಂಗ್ಲಾದೇಶದ ಭೇಟಿ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಮೇಲೆ ಪ್ರಭಾವ ಬೀರುವ ಉದ್ದೇಶವನ್ನು ಹೊಂದಿದೆ ಎಂದು ಪಕ್ಷ ದೂರಿನಲ್ಲಿ ಹೇಳಿಕೊಂಡಿದೆ.
ಓದಿ : ಮೈಸೂರಿನಲ್ಲೊಬ್ಬ ವೀರಬಾಹು: ಅನಾಥ ಶವಗಳಲ್ಲಿ ದೇವರನ್ನು ಕಾಣುವ ಬಾಡಿಮಿಯಾ
ಮೋದಿಯವರು ಅಧಿಕೃತ ಉದ್ದೇಶಕ್ಕಾಗಿ ಬಾಂಗ್ಲಾದೇಶಕ್ಕೆ ಭೇಟಿ ನೀಡುವುದಕ್ಕೆ ಯಾವುದೇ ಆಕ್ಷೇಪವಿಲ್ಲ. ಆದರೆ, ಈ ಭೇಟಿ ಮಾರ್ಚ್ 27 ರಂದು ಅವರ ಪ್ರಚಾರ ಸಭಾ ಕಾರ್ಯಕ್ರಮಗಳ ಮೇಲೆ ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಗಳಲ್ಲಿ ಕೆಲವು ಕ್ಷೇತ್ರಗಳಲ್ಲಿನ ಮತದಾನದ ಮೇಲೆ ಪ್ರಭಾವ ಬೀರುವ ಉದ್ದೇಶದ್ದಾಗಿದೆ. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಚುನಾವಣಾ ಆಯೋಗಕ್ಕೆ ಬರೆದ ಪತ್ರದಲ್ಲಿ ಟಿಎಂಸಿ ತಿಳಿಸಿದೆ.
ಇನ್ನು, ಮೋದಿಯವರ ಬಾಂಗ್ಲಾದೇಶದ ಒರಕಂಡಿ ಭೇಟಿಯ ಹಿಂದಿನ ರಾಜಕೀಯ ಉದ್ದೇಶವು ಸಾಬೀತಾಗಿದೆ, ಅವರು ಭಾರತ ಸರ್ಕಾರದಲ್ಲಿ ಯಾವುದೇ ಅಧಿಕೃತ ಸ್ಥಾನವನ್ನು ಹೊಂದಿರದ ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಶಾಂತನು ಠಾಕೂರ್ ಅವರನ್ನು ಭಾಂಗ್ಲಾದೇಶಕ್ಕೆ ಕರೆದೊಯ್ದಿದ್ದಾರೆ. ಭಾರತೀಯ ಚುನಾವಣಾ ಆಯೋಗ ಪ್ರಧಾನಿ ವಿರುದ್ಧ ದಂಡನಾತ್ಮಕ ಕ್ರಮ ತೆಗೆದುಕೊಳ್ಳಬೇಕು ಎಂದು ಟಿಎಂಸಿ ಒತ್ತಾಯಿಸಿದೆ.
Trinamool Congress (TMC) registers a complaint with Election Commission over, “Gross violation of democratic ethics and the Model Code of Conduct by Prime Minister during his visit to Bangladesh.” pic.twitter.com/S1dDiejAqt
— ANI (@ANI) March 30, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು