ವಿಷ ಜೀರ್ಣಿಸೋದು ಕಲಿತಿದ್ದಿಲ್ಲೇ: ಮೋದಿ
Team Udayavani, Oct 9, 2017, 6:00 AM IST
ವಡ್ನಾಗರ್: ಪ್ರಧಾನಿ ಹುದ್ದೆಗೇ ರಿದ ಬಳಿಕ ಇದೇ ಮೊದಲ ಬಾರಿಗೆ ಪಿಎಂ ನರೇಂದ್ರ ಮೋದಿ ಅವರು ಗುಜರಾತ್ನಲ್ಲಿರುವ ತಮ್ಮ ಹುಟ್ಟೂರು ವಡ್ನಾಗರ್ಗೆ ರವಿವಾರ ಭೇಟಿ ನೀಡಿದರು.
ಗುಜರಾತ್ ಪ್ರವಾಸದ 2ನೇ ದಿನವನ್ನು ತಮ್ಮ ಹುಟ್ಟೂರಲ್ಲಿ ಕಳೆದ ಮೋದಿ, ಇಲ್ಲಿ ರ್ಯಾಲಿ ನಡೆಸಿ ತಾವು ಹುಟ್ಟಿ ಬೆಳೆದ ಊರನ್ನು ನೆನಪಿಸಿಕೊಂಡು ಭಾವಪರ ವಶರಾಗಿ ಮಾತನಾಡಿದರು.
ಮಣ್ಣಿನ ಮಗನನ್ನು ಸ್ವಾಗತಿಸಲೆಂದು ಇಡೀ ಊರಿಗೆ ಊರೇ ಶೃಂಗಾರ ಗೊಂಡಿತ್ತಲ್ಲದೆ, ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಸಾವಿರಾರು ಜನರು “ಮೋದಿ ಮೋದಿ’ ಎಂದು ಘೋಷಣೆ ಕೂಗುತ್ತಾ ಪ್ರಧಾನಿಯನ್ನು ಬರಮಾಡಿಕೊಂಡರು. ಹೀಗಾಗಿ, ಕಾರಿನಿಂದ ಇಳಿದ ಮೋದಿ ಅವರು, ಸಾರ್ವಜನಿಕರೊಂದಿಗೆ ಸ್ವಲ್ಪ ಹೊತ್ತು ಬೆರೆತರು. ನಾನೀಗ ಈ ಮಟ್ಟ ಕ್ಕೇರಲು ಈ ಊರು ಮತ್ತು ಇಲ್ಲಿನ ಜನರೇ ಕಾರಣ. ಹುಟ್ಟೂರಿಗೆ ಆಗಮಿ ಸುವು ದರಲ್ಲಿನ ಖುಷಿ ಬೇರೊಂದಿರಲಿಕ್ಕಿಲ್ಲ ಎಂದರು.
ಬಳಿಕ, ನಗರದ ಹೊರವಲಯದಲ್ಲಿ ನಿರ್ಮಿಸಲಾದ ವೈದ್ಯಕೀಯ ಕಾಲೇಜಿನ ಉದ್ಘಾಟನೆಗೆಂದು ತೆರಳುವಾಗ, ದಾರಿ ಮಧ್ಯೆ ಕಾರು ನಿಲ್ಲಿಸಿ, ತಾವು ಕಲಿತ ಶಾಲೆಗೆ ಭೇಟಿ ನೀಡಿದರು. ಬಿ.ಎನ್. ಹೈಸ್ಕೂಲ್ನ ಮೈದಾನ ಪ್ರವೇಶಿಸಿದ ಪ್ರಧಾನಿ, ಅಲ್ಲಿನ ಮಣ್ಣನ್ನು ಹಣೆಗೊತ್ತಿಕೊಂಡಿದ್ದೂ ಕಂಡುಬಂತು. ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, “ನಾನು ಶಿವನ ಕೃಪೆಯಿಂದ ದೇಶದ ಸೇವೆ ಮಾಡುತ್ತಿದ್ದೇನೆ. 2001ರಿಂದಲೂ ವಿಷವನ್ನು ಜೀರ್ಣಿಸಿಕೊಳ್ಳುವ ಶಕ್ತಿಯನ್ನು ದಯಪಾಲಿಸಿದ್ದೂ ಶಿವನೇ’ ಎನ್ನುವ ಮೂಲಕ ಗುಜರಾತ್ ಗಲಭೆ ನಂತರ ಅವರ ವಿರುದ್ಧ ಬಂದ ಆರೋಪಗಳನ್ನು ಪರೋಕ್ಷವಾಗಿ ಸ್ಮರಿಸಿದರು.
ಆರೋಗ್ಯ ನೀತಿಗೆ ಟೀಕೆ: ಅಟಲ್ ಅವರ ಆಡಳಿತಾವಧಿಯಲ್ಲಿ ಅಂದರೆ 15 ವರ್ಷಗಳ ಹಿಂದೆ ದೇಶದಲ್ಲಿ ಆರೋಗ್ಯ ನೀತಿಯಿತ್ತು. ನಂತರ ಬಂದ ಸರಕಾರವು ಅಭಿವೃದ್ಧಿಯನ್ನು ದ್ವೇಷಿಸುವಂಥದ್ದು. ಹಾಗಾಗಿ, 15 ವರ್ಷಗಳ ನಂತರ ನಮ್ಮ ಸರಕಾರವು ಆರೋಗ್ಯ ನೀತಿಯನ್ನು ಜಾರಿ ಮಾಡಬೇಕಾಯಿತು ಎನ್ನುತ್ತಾ ಯುಪಿಎ ಸರಕಾರವನ್ನು ಟೀಕಿಸಿದರು.
ಕಹಿಬೇವು ಲೇಪಿತ ಯೂರಿಯಾದಿಂದ ರೈತರಿಗೆ ಅನುಕೂಲವಾಗಿದೆ: ಪ್ರಧಾನಿ
ರೈತರ ಕಷ್ಟಗಳು ನನ್ನನ್ನು ಬಿಟ್ಟು ಬೇರ್ಯಾರಿಗೂ ಅರ್ಥವಾಗುವುದಿಲ್ಲ. ಹಿಂದೆಲ್ಲ ರೈತರಿಗೆ ಯೂರಿಯಾವೇ ಸಿಗುತ್ತಿರಲಿಲ್ಲ. ಆದರೆ, ಈಗ ನನ್ನ ನೇತೃತ್ವದ ಸರಕಾರದಲ್ಲಿ ಯೂರಿಯಾ ಸುಲಭವಾಗಿ ಸಿಗುತ್ತಿದೆ ಎಂದು ಸಾರ್ವಜನಿಕ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ಯೂರಿಯಾಗೆ ಶೇ.100ರಷ್ಟು ಕಹಿಬೇವನ್ನು ಲೇಪಿಸಲು ನಿರ್ಧರಿಸಿದೆವು. ಆಗ ಅದನ್ನು ಕೃಷಿಗಷ್ಟೇ ಬಳಸುತ್ತಾರೆ, ರಾಸಾಯನಿಕ ಫ್ಯಾಕ್ಟರಿಗಳಲ್ಲಿ ಬಳಸಲು ಆಗುವುದಿಲ್ಲ. ಈಗ ಕಹಿಬೇವು ಮಿಶ್ರಿತ ಯೂರಿಯಾವು ರೈತರಿಗೆ ಬಹಳಷ್ಟು ಅನುಕೂಲ ಕಲ್ಪಿಸಿದೆ. ಇದರಿಂದ ಭ್ರಷ್ಟಾಚಾರ ಹಾಗೂ ಸಬ್ಸಿಡಿ ಸೋರಿಕೆ ನಿಂತಿದೆ ಎಂದಿದ್ದಾರೆ ಮೋದಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ