ಇಂದು ಜಂತರ್ಮಂತರ್ನಲ್ಲಿ ಪಿಎಂ ಮೋದಿ ಸಹೋದರ ಧರಣಿ
Team Udayavani, Aug 2, 2022, 6:50 AM IST
ನವದೆಹಲಿ: ಅಖಿಲ ಭಾರತ ಪಡಿತರ ಅಂಗಡಿ ಮಾಲೀಕರ ಒಕ್ಕೂಟದ ಉಪಾಧ್ಯಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಮಂಗಳವಾರ ಜಂತರ್ಮಂತರ್ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.
ಒಕ್ಕೂಟದ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅವರು ಪ್ರತಿಪಾದಿಸುತ್ತಿದ್ದಾರೆ. ಪಡಿತರ ಮಳಿಗೆಯ ಮೂಲಕ ಮಾರಾಟ ಮಾಡಲಾಗುವ ಅಕ್ಕಿ, ಗೋಧಿ, ಸಕ್ಕರೆ ಮತ್ತು ಅಡುಗೆ ಎಣ್ಣೆ ಮಾರಾಟದಲ್ಲಿ ಅಂಗಡಿ ಮಾಲೀಕರಿಗೆ ನಷ್ಟ ಉಂಟಾಗುತ್ತದೆ.
ಪಶ್ಚಿಮ ಬಂಗಾಳ ಮಾದರಿಯಲ್ಲಿ ಉಚಿತವಾಗಿ ವಸ್ತುಗಳನ್ನು ವಿತರಣೆ ಮಾಡಬೇಕು ಸೇರಿದಂತೆ 9 ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಲಿದ್ದಾರೆ.
ಧರಣಿಯ ಬಳಿಕ ಪ್ರಹ್ಲಾದ್ ಮೋದಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾರನ್ನು ಭೇಟಿಯಾಗುವ ಸಾಧ್ಯತೆಗಳಿವೆ.