ಪಿಎನ್ಬಿಯಲ್ಲಿ ಮತ್ತೆ 9 ಕೋಟಿ ಹಗರಣ
Team Udayavani, Mar 16, 2018, 6:00 AM IST
ನವದೆಹಲಿ/ಮುಂಬೈ: ಪಂಜಾಬ್ ನ್ಯಾಷನಲ್ ಬ್ಯಾಂಕ್ನಲ್ಲಿ 3 ಸಾವಿರ ಕೋಟಿ ರೂ. ಹಗರಣ ಬೆಳಕಿಗೆ ಬಂದು ದಿನಗಳು ಕಳೆದಿಲ್ಲ. ಗುರುವಾರ ಅದೇ ಬ್ಯಾಂಕ್ನಲ್ಲಿ ನಕಲಿ ಲೆಟರ್ ಆಫ್ ಅಂಡರ್ಟೇಕಿಂಗ್ (ಎಲ್ಓಯು) ಮೂಲಕ 9 ಕೋಟಿ ರೂ. ವಂಚಿಸಲಾಗಿದೆ. ಸ್ವರ್ಣೋದ್ಯಮಿ ನೀರವ್ ಮೋದಿ ಮತ್ತು ಮೆಹುಲ್ ಚೋಸ್ಕಿ ವಂಚಿಸಿದ ಮಾದರಿಯಲ್ಲಿಯೇ ಚಂದ್ರಿ ಪೇಪರ್ಸ್ ಆ್ಯಂಡ್ ಅಲೈಡ್ ಪ್ರಾಡಕ್ಟ್ ಎಂಬ ಕಂಪನಿ ಮುಂಬೈ ಬ್ರಾಡಿ ಹೌಸ್ ಶಾಖೆಯಲ್ಲಿ ವಂಚಿಸಿದೆ. ಎರಡು ನಕಲಿ ಎಲ್ಓಯು ಮೂಲಕ ಶಾಖೆಗೆ 9 ಕೋಟಿ ರೂ. ಮೊತ್ತವನ್ನು ಬೆಲ್ಜಿಯಂನಲ್ಲಿರುವ ಆ್ಯಂಟ್ರೂಪ್ ನಗರದಲ್ಲಿರುವ ಎಸ್ಬಿಐ ಶಾಖೆಗೆ ಪಾವತಿಯಾಗುವಂತೆ ಮಾಡಿದ್ದಾರೆ. ಈ ಬಗ್ಗೆ ಸಿಬಿಐ ಹೊಸತಾಗಿ ಕೇಸು ದಾಖಲಿಸಿಕೊಂಡಿದೆ. ಅದರಲ್ಲಿ ಪಿಎನ್ಬಿಯ ನಿವೃತ್ತ ಅಧಿಕಾರಿ ಗೋಕುಲ್ನಾಥ್ ಶೆಟ್ಟಿ ಮತ್ತು ಏಕ ಗವಾಕ್ಷ ಅಧಿಕಾರಿ ಮನೋಜ್ ಖಾರಟ್ ವಿರುದ್ಧವೂ ಆರೋಪ ಹೊರಿಸಲಾಗಿದೆ.
ಪರಾರಿಯಾಗದಂತೆ ಕ್ರಮ: ಮತ್ತೂಂದು ಮಹತ್ವದ ಬೆಳವಣಿಗೆಯಲ್ಲಿ ಉದ್ದೇಶಪೂರ್ವಕ ಸುಸ್ತಿದಾರರಾಗಿರುವ 91 ಮಂದಿಯ ವಿವರಗಳನ್ನು ಕೇಂದ್ರ ಸರ್ಕಾರ ಕಲೆಹಾಕಿದ್ದು, ಅವರು ದೇಶ ಬಿಟ್ಟು ಪರಾರಿಯಾಗದಂತೆ ಕ್ರಮ ಕೈಗೊಂಡಿದೆ. ಇದರ ಜತೆಗೆ ಸುಮಾರು 400 ಕಂಪನಿಗಳು ಮತ್ತು ಅದರ ನಿರ್ದೇಶಕರು ಮತ್ತು ಆಡಳಿತ ಮಂಡಳಿ ಸದಸ್ಯರನ್ನು ಉದ್ದೇಶಪೂರ್ವಕ ಸುಸ್ತಿದಾರರು ಎಂದು ಹೆಸರಿಸಿದೆ. ಜತೆಗೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಬ್ಯಾಂಕ್ಗಳಿಗೆ ಸೂಚಿಸಲಾಗಿದೆ ಎಂದು ಹೆಸರು ಬಹಿರಂಗಪಡಿಸಲಿಚ್ಛಿಸದ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು