ಪಾಕಿಸ್ತಾನದ ರಾಷ್ಟ್ರಕವಿ ಮೊಹಮ್ಮದ್​ ಇಕ್ಬಾಲ್ ಅಧ್ಯಾಯವನ್ನು ಪಠ್ಯದಿಂದ ಕೈಬಿಡಲು ನಿರ್ಣಯ


Team Udayavani, May 27, 2023, 4:15 PM IST

ಪಾಕಿಸ್ತಾನದ ರಾಷ್ಟ್ರಕವಿ ಮೊಹಮ್ಮದ್​ ಇಕ್ಬಾಲ್ ಅಧ್ಯಾಯವನ್ನು ಪಠ್ಯದಿಂದ ಕೈಬಿಡಲು ನಿರ್ಣಯ

ನವದೆಹಲಿ: ದೇಶಭಕ್ತಿ ಗೀತೆ, ಸಾರೇ ಜಹಾಂಸೇ ಅಚ್ಚಾ, ಹಿಂದುಸ್ತಾನ್‌ ಹಮಾರಾ ಎನ್ನುವ ಗೀತೆಯನ್ನು ಬರೆದ ಕವಿ ಅಲ್ಲಾಮ ಮೊಹಮದ್‌ ಇಕ್ಬಾಲ್‌ ಅವರ ಅಧ್ಯಾಯಯವನ್ನು ದೆಹಲಿ ವಿಶ್ವ ವಿದ್ಯಾಲಯದ ಪಠ್ಯಕ್ರಮದಿಂದ ತೆಗೆದು ಹಾಕುವ ನಿರ್ಧಾರ ಮಾಡಲಾಗಿದೆ. ದೆಹಲಿ ವಿವಿಯ ಅಕಾಡೆಮಿಕ್‌ ಕೌನ್ಸಿಲ್‌ ಶುಕ್ರವಾರ ಈ ಬಗ್ಗೆ ನಿರ್ಣಯವನ್ನು ಅಂಗೀಕಾರ ಮಾಡಿದೆ.

1877ರಲ್ಲಿ ಪಾಕಿಸ್ತಾನದ ಸಿಯಾಲ್ಕೋಟ್‌ನಲ್ಲಿ ಜನಿಸಿದ್ದ ಕವಿ ಅಲ್ಲಾಮ ಮೊಹಮದ್‌ ಇಕ್ಬಾಲ್‌, ಪಾಕಿಸ್ತಾನದ ರಾಷ್ಟ್ರಕವಿ ಮಾತ್ರವಲ್ಲ ಪಾಕಿಸ್ತಾನ ಎನ್ನುವ ಹೊಸ ದೇಶದ ಕಲ್ಪನೆಯನ್ನು ಮೊದಲಿಗೆ ಹುಟ್ಟುಹಾಕುವ ಮೂಲಕ ಹೆಸರುವಾಸಿಯಾಗಿದ್ದಾರೆ.

ಇವರ ‘ಮಾಡರ್ನ್ ಇಂಡಿಯನ್ ಪೊಲಿಟಿಕಲ್ ಥಾಟ್’ ಶೀರ್ಷಿಕೆಯ ಅಧ್ಯಾಯವು ಬ್ಯಾಚುಲರ್ ಆಫ್ ಆರ್ಟ್ಸ್ (ಬಿಎ) ಆರನೇ ಸೆಮಿಸ್ಟರ್ ನ ಪಠ್ಯದ ಭಾಗವಾಗಿದೆ ಎಂದು ಅಧಿಕಾರಿಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ದೆಹಲಿ ವಿಶ್ವವಿದ್ಯಾನಿಲಯದ 1014ನೇ ಅಕಾಡೆಮಿಕ್ ಕೌನ್ಸಿಲ್ ಸಭೆಯಲ್ಲಿ ಪದವಿಪೂರ್ವ ಕೋರ್ಸ್ ಗಳ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಭಾರತವನ್ನು ಒಡೆಯಲು ಅಡಿಪಾಯ ಹಾಕಿದವರು ಪಠ್ಯಕ್ರಮದಲ್ಲಿ ಇರಬಾರದು ಎಂದು ಉಪಕುಲಪತಿ ಪ್ರೊಫೆಸರ್ ಯೋಗೇಶ್ ಸಿಂಗ್ ಹೇಳಿದ್ದಾರೆ.

ಉಪಕುಲಪತಿಗಳ ಪ್ರಸ್ತಾವನೆಯನ್ನು ಸದನವು ಸರ್ವಾನುಮತದಿಂದ ಅಂಗೀಕರಿಸಿತು. ಸಭೆಯಲ್ಲಿ, ಪದವಿಪೂರ್ವ ಪಠ್ಯಕ್ರಮ ಚೌಕಟ್ಟು (ಯುಜಿಸಿಎಫ್) 2022 ರ ಅಡಿಯಲ್ಲಿ ವಿವಿಧ ಕೋರ್ಸ್‌ಗಳ ನಾಲ್ಕು, ಐದನೇ ಮತ್ತು ಆರನೇ ಸೆಮಿಸ್ಟರ್‌ಗಳ ಪಠ್ಯಕ್ರಮದ ನಿರ್ಣಯವನ್ನು ಅಂಗೀಕರಿಸಲಾಯಿತು.

ರಾಜ್ಯಶಾಸ್ತ್ರದ ಪಠ್ಯಕ್ರಮದಲ್ಲಿ ಬದಲಾವಣೆಗೆ ಸಂಬಂಧಿಸಿದಂತೆ ಪ್ರಸ್ತಾವನೆಯನ್ನು ತರಲಾಯಿತು. ಅದರ ಪ್ರಕಾರ, ಇಕ್ಬಾಲ್‌ ಅವರ ಅಧ್ಯಾಯವನ್ನು ಪಠ್ಯಕ್ರಮದಿಂದ ತೆಗೆದುಹಾಕುವ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ ಎಂದು ಅಕಾಡೆಮಿಕ್ ಕೌನ್ಸಿಲ್ ಸದಸ್ಯರೊಬ್ಬರು ಹೇಳಿದರು.

ಇದನ್ನೂ ಓದಿ: ದುರ್ಘ‌ಟನೆ; 24 ಗಂಟೆಯೊಳಗೆ ವರದಿ, 48 ಗಂಟೆಯೊಳಗೆ ಪರಿಹಾರ: ಎಸಿ

 

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.