ಬೆಂಗಳೂರಿನಲ್ಲಿ ‘ಕೈ’ ನಾಯಕರ ಹೈಡ್ರಾಮಾ: ದಿಗ್ವಿಜಯ್ ಸಿಂಗ್ ಪೊಲೀಸ್ ವಶಕ್ಕೆ
Team Udayavani, Mar 18, 2020, 8:54 AM IST
ಬೆಂಗಳೂರು: ಇಲ್ಲಿನ ರೆಸಾರ್ಟ್ ನಲ್ಲಿ ವಾಸ್ತವ್ಯವಿರುವ ಮಧ್ಯಪ್ರದೇಶ ಕೈ ನಾಯಕರ ಮನವೊಲಿಕೆಗೆ ಬಂದ ದಿಗ್ವಿಜಯ್ ಸಿಂಗ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮೂಲಕ ಹಲವು ಪ್ರಹಸನಗಳಿಗೆ ಬುಧವಾರ ಬೆಳಿಗ್ಗೆ ಬೆಂಗಳೂರು ಸಾಕ್ಷಿಯಾಯಿತು.
ಇಲ್ಲಿನ ಯಲಹಂಕ ಬಳಿಯ ರೆಸಾರ್ಟ್ ನಲ್ಲಿರುವ ಕಾಂಗ್ರೆಸ್ ಶಾಸಕರ ಮನವೊಲಿಕೆಗೆ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿದಂತೆ ಆಗಮಿಸಿದ್ದರು. ಆದರೆ ರೆಸಾರ್ಟ್ ಗೆ ಪೊಲೀಸ್ ಬಿಗು ಭದ್ರತೆ ಒದಗಿಸಲಾಗಿದ್ದು, ಕೈ ನಾಯಕರಿಗೆ ರೆಸಾರ್ಟ್ ಗೆ ಒಳ ಹೋಗಲು ಅವಕಾಶ ನೀಡಲಿಲ್ಲ.
ಇದರಿಂದಾಗಿ ದಿಗ್ವಿಜಯ್ ಸಿಂಗ್ ರೆಸಾರ್ಟ್ ಎದುರುಗಡೆ ಧರಣಿ ಆರಂಭಿಸಿದರು. ಪೊಲೀಸರ ಮನವಿಗೂ ಜಗ್ಗದೇ ಧರಣಿ ಮುಂದುವರಿಸಿದ್ದರಿಂದ ಸ್ಥಳದಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದಾಗಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ಧಾರೆ. ಕಾಂಗ್ರೆಸ್ ನಾಯಕರನ್ನು ಅಮೃತಹಳ್ಳಿ ಠಾಣೆಗೆ ಪೊಲೀಸರು ಕರೆದೊಯ್ದಿದ್ದಾರೆ.
ಯಲಹಂಕದ ರಮಡ ರೆಸಾರ್ಟ್ ನಲ್ಲಿ ಮಧ್ಯಪ್ರದೇಶದ 21 ಜನ ಬಂಡಾಯ ಕಾಂಗ್ರೆಸ್ ಶಾಸಕರು ವಾಸ್ತವ್ಯ ಹೂಡಿದ್ದಾರೆ. ಮಧ್ಯಪ್ರದೇಶ ವಿಧಾನಸಭೆಯಲ್ಲಿ ಕಮಲ್ ನಾಥ್ ಸರಕಾರಕ್ಕೆ ವಿಶ್ವಾಸಮತ ಯಾಚಿಸಲು ಹತ್ತು ದಿನಗಳ ರಿಲೀಫ್ ಸಿಕ್ಕ ಕಾರಣ ಶಾಸಕರ ಮನವೊಲಿಕೆಗೆ ದಿಗ್ವಿಜಯ್ ಸಿಂಗ್ ಇಂದು ಮುಂಜಾನೆ ಬೆಂಗಳೂರಿಗೆ ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ