ಠಾಗೋರ್ ಹುಟ್ಟುಹಬ್ಬದಂದು ದೀದಿ ಕೋವಿಡ್ ಗೀತೆ ವಿವಾದ
Team Udayavani, May 8, 2020, 9:12 PM IST
ಕೋಲ್ಕತ: ದಿಗ್ಗಜ ಕವಿ ರವೀಂದ್ರನಾಥ್ ಠಾಗೋರ್ ಹುಟ್ಟು ಹಬ್ಬದ ದಿನದ ವಿಶೇಷ ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬರೆದಿರುವ ಕೋವಿಡ್-19 ವೈರಸ್ ಕುರಿತ ಜಾಗೃತಿ ಗೀತೆಯನ್ನು ರಾಜ್ಯವ್ಯಾಪಿ ಘಟಕಗಳಲ್ಲಿ ಹಾಡುವಂತೆ ಪಶ್ಚಿಮ ಬಂಗಾಳ ಪೊಲೀಸ್ ಇಲಾಖೆ ಹೇಳಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ಮಮತಾ ಬ್ಯಾನರ್ಜಿ ಕ್ರಮವನ್ನು ಬಿಜೆಪಿ ಕಟು ಪದಗಳಿಂದ ಟೀಕಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡ ಮುಕುಲ್ ರಾಯ್, “ಗುರುದೇವ ಜೀವನ ಪರಂಪರೆ ಆಚರಿಸುತ್ತಿರುವುದಕ್ಕೂ, ಮಮತಾ ಬ್ಯಾನರ್ಜಿಯ ಜಾಗೃತಿ ಗೀತೆಗೂ ಏನು ಸಂಬಂಧವಿದೆ? ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಹೂಗ್ಲಿಯ ಬಿಜೆಪಿ ಸಂಸದ ಚಟರ್ಜಿ, “ಪೊಲೀಸ್ ಆದೇಶಗಳು ಅವಮಾನಕರವಾಗಿದೆ, ಮಮತಾ ಜನಗಳ ಮೇಲೆ ಇದನ್ನು ಹೇರುವ ಪ್ರಯತ್ನ ನಡೆಸಿದ್ದಾರೆ’ ಎಂದು ಟೀಕಿಸಿದ್ದಾರೆ. ಇದಕ್ಕೆ ಉತ್ತರಿಸಿರುವ ತೃಣಮೂಲ ಕಾಂಗ್ರೆಸ್ ನಾಯಕ ಮದನ್ ಮಿತ್ರಾ. “ದೀದಿ ಇಂತಹ ಸಂದರ್ಭದಲ್ಲಿ ಕೋವಿಡ್-19 ವಿರುದ್ಧ ಜಾಗೃತಿ ಮಾಡುವ ಕೆಲಸ ಮಾಡಿದ್ದಾರೆ. ಆದರೆ ಬಿಜೆಪಿ ಇಂತಹ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ’ ಎಂದು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ