ಕಣಿವೆಯಲ್ಲಿ ತಪ್ಪಿದ ಭೀಕರ ಉಗ್ರ ದಾಳಿ…ಅಪಾರ ಶಸ್ತ್ರಾಸ್ತ್ರ, ಸ್ಫೋಟಕ ತುಂಬಿದ ಲಾರಿ ವಶಕ್ಕೆ
Team Udayavani, Sep 12, 2019, 1:02 PM IST
ಜಮ್ಮು-ಕಾಶ್ಮೀರ: ಅಪಾರ ಪ್ರಮಾಣದಲ್ಲಿ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಕಾಶ್ಮೀರ ಮೂಲದ ಲಾರಿಯೊಂದನ್ನು ವಶಕ್ಕೆ ಪಡೆದಿದ್ದು, ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀನಗರದತ್ತ ತೆರಳುತ್ತಿದ್ದ ಲಾರಿಯನ್ನು ಪಂಜಾಬ್-ಜಮ್ಮು ಗಡಿಯ ಕಥುವಾ, ಲಖಾನ್ ಪುರ್ ನಡುವೆ ಪೊಲೀಸರು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ, ದಿನಸಿ ಸಾಮಾನುಗಳ ಕೆಳಗೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕ ಅಡಗಿಸಿ ಇಟ್ಟಿರುವುದಾಗಿ ಪತ್ತೆಯಾಗಿದೆ ಎಂದು ವರದಿ ವಿವರಿಸಿದೆ.
ಇದರಿಂದಾಗಿ ಸಂಭಾವ್ಯ ದಾಳಿಯನ್ನು ತಡೆದಂತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಾರಿ ಜಮ್ಮು-ಕಾಶ್ಮೀರ ನಂಬರ್ ಪ್ಲೇಟ್ ಹೊಂದಿದೆ. ಪುಲ್ವಾಮಾ ನಿವಾಸಿ ಜಾವಿದ್ ದಾರ್ ಟ್ರಕ್ ಚಾಲಕ ಎಂದು ಗುರುತಿಸಲಾಗಿದೆ ಎಂದು ವರದಿ ಹೇಳಿದೆ.
ವಾಹನದಲ್ಲಿ ಐದು ಎಕೆ 47, ಮದ್ದು, ಗುಂಡು ಹಾಗೂ 4.5 ಲಕ್ಷ ರೂಪಾಯಿ ನಗದನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸ್ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಕಣಿವೆ ರಾಜ್ಯದಲ್ಲಿನ ಶಾಂತಿ ಪರಿಸ್ಥಿತಿಯನ್ನು ಕದಡಲು ಭಾರೀ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳ ಸ್ಮಗ್ಲಿಂಗ್ ನಡೆಯುತ್ತಿರುವುದಾಗಿ ಕಳೆದ ವಾರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು