ಯೋಗಿ ಕಾಲಿಗೆರಗಿ ಆಶೀರ್ವಾದ ಪಡೆದ ಪೊಲೀಸ್‌ ಅಧಿಕಾರಿ; Photo viral


Team Udayavani, Jul 28, 2018, 3:49 PM IST

police-officer-yogi-600.jpg

ಗೋರಖ್‌ಪುರ, ಉತ್ತರ ಪ್ರದೇಶ : ಇಲ್ಲಿನ ಗೋರಖನಾಥ ದೇವಸ್ಥಾನದಲ್ಲಿ ಗುರು ಪೂರ್ಣಿಮೆಯ ದಿನದಂದು ಸಮವಸ್ತ್ರದಲ್ಲಿದ್ದ  ಪೊಲೀಸ್‌ ಅಧಿಕಾರಿಯೋರ್ವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಕಾಲಿಗೆ ಬಿದ್ದು ನಮಸ್ಕರಿಸಿ ಆಶೀರ್ವಾದ ಪಡೆಯುತ್ತಿರುವ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ.

ಅಂದ ಹಾಗೆ ಯೋಗಿ ಆದಿತ್ಯನಾಥ್‌ ಅವರು ಗೋರಖನಾಥ ಮಠದ ಪೀಠಾಧೀಶ್ವರರೂ  ಮಹಾಂತರೂ (ಮುಖ್ಯ ಅರ್ಚಕ) ಆಗಿದ್ದಾರೆ.

ವೈರಲ್‌ ಆಗಿರುವ ಫೋಟೋದಲ್ಲಿ ಪೊಲೀಸ್‌ ಅಧಿಕಾರಿ ಪ್ರವೀಣ್‌ ಸಿಂಗ್‌ ಅವರು ಆದಿತ್ಯನಾಥ್‌ ಅವರ ಕಾಲಿಗೆರಗಿ ಕೈಮುಗಿದು ಆಶೀರ್ವಾದ ಪಡೆಯುತ್ತಿರುವುದು ಕಂಡು ಬರುತ್ತದೆ. ಈ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿದ್ದಂತೆಯೇ ಪೊಲೀಸ್‌ ಇಲಾಖೆ ಪ್ರವೀಣ್‌ ಸಿಂಗ್‌ ಅವರ ನಿಲುವನ್ನು ಪ್ರಶ್ನಿಸಿ ಸ್ಪಷ್ಟೀಕರಣವನ್ನು ಕೇಳಿದೆ. 

ಇದಕ್ಕೆ ಉತ್ತರವಾಗಿ ಪೊಲೀಸ್‌ ಅಧಿಕಾರಿ ಪ್ರವೀಣ್‌ ಸಿಂಗ್‌, “ನನ್ನನ್ನು ಭದ್ರತಾ ಕರ್ತವ್ಯದ ಮೇಲೆ ಗೋರಖನಾಥ ದೇವಾಲಯಕ್ಕೆ ನಿಯೋಜಿಸಲಾಗಿತ್ತು. ನನ್ನ ಕರ್ತವ್ಯ ಮುಗಿಸಿದ ಬಳಿಕ ನಾನು ಪೊಲೀಸ್‌ ಬೆಲ್ಟ್, ಕ್ಯಾಪ್‌ ಮತ್ತು ಇತರ ಚಿಹ್ನೆಗಳನ್ನು ತೆಗೆದಿರಿಸಿ ತಲೆಗೆ ಟವಲ್‌ ಸುತ್ತಿ ಶ್ರದ್ಧಾಭಕ್ತಿಯಿಂದ ಪೀಠಾಧೀಶ್ವರ, ಮಹಾಂತ, ಯೋಗಿ ಆದಿತ್ಯನಾಥರ ಆಶೀರ್ವಾದ ಪಡೆದಿದ್ದೇನೆ’ ಎಂದು ಹೇಳಿದ್ದಾರೆ.

“ನನ್ನ ಶರ್ಟ್‌ ಬೆವರಿನಿಂದ ಒದ್ದೆಯಾಗಿತ್ತು; ನಾನು ನನ್ನ ಕರ್ತವ್ಯವನ್ನು ನಿರ್ಲಕ್ಷಿಸಿಲ್ಲ; ಮಹಾಂತ ಯೋಗಿ ಅವರು ಎರಡು ಸಂದರ್ಭಗಳಲ್ಲಿ ದೇವಸ್ಥಾನದಲ್ಲಿ ಗುರು ಪೀಠದಲ್ಲಿ ಕುಳಿತುಕೊಳ್ಳುವುದು ರೂಢಿ – ಒಮ್ಮೆ ನವರಾತ್ರಿ ಸಂದರ್ಭದಲ್ಲಿ, ಇನ್ನೊಮ್ಮೆ ಗುರು ಪೂರ್ಣಿಮೆಯ ಸಂದರ್ಭದಲ್ಲಿ ; ನಾನು ಯಾವತ್ತೂ ದೇಶಕ್ಕೆ ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ಸೇವೆ ಸಲ್ಲಿಸಲು ಈ ದೇವಸ್ಥಾನದಲ್ಲಿ ಪ್ರಾರ್ಥಿಸುತ್ತೇನೆ. ಬಾಬಾ ಗೋರಖನಾಥ್‌ ಮೇಲಿನ ಶ್ರದ್ಧಾಭಕ್ತಿ ಭಾವದಿಂದ ನಾನು ದೇವಸ್ಥಾನಕ್ಕೆ ಹೋಗಿ ಗುರುಗಳ ಆಶೀರ್ವಾದ ಪಡೆದಿದ್ದೇನೆ ಹೊರತು ಬೇರೇನೂ ಅಲ್ಲ’ ಎಂದು ಸಿಂಗ್‌ ವಿವರಿಸಿದ್ದಾರೆ. 

ಸಿಂಗ್‌ ಅವರು ಗೋರಖ್‌ಪುರದಲ್ಲಿ ಗೋರಖನಾಥಕ್ಕೆ ಸರ್ಕಲ್‌ ಆಫೀಸರ್‌ ಆಗಿ ನಿಯೋಜಿಸಲಾಗಿದೆ. ಪೌರ ರಕ್ಷಣೆಯ ಐಜಿ ಆಗಿರುವ ಅಮಿತಾಭ್‌ ಠಾಕೂರ್‌ (ಐಪಿಎಸ್‌) ಅವರು “ಈ ವಿಷಯದಲ್ಲಿ ಪೊಲೀಸ್‌ ಸೇವಾ  ನಿಯಮ ಏನನ್ನೂ ಸ್ಪಷ್ಟವಾಗಿ ಹೇಳುವುದಿಲ್ಲ. ಈ ಸನ್ನಿವೇಶವನ್ನು ಹೇಗೆ ಬೇಕಾದರೂ ಅರ್ಥೈಸಬಹುದಾಗಿದೆ. ಆದರೆ ಪೊಲೀಸ್‌ ಅಧಿಕಾರಿ ತನ್ನ ಸಮವಸ್ತ್ರದ ಘನತೆಯನ್ನು ಎತ್ತಿ ಹಿಡಿಯುವುದು ಅಗತ್ಯ’ ಎಂದು ಹೇಳಿದ್ದಾರೆ. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.