ಕಾರು ಬಿಡುಗಡೆಗೆ 50 ಸಾವಿರ ರೂ.ಗೆ ಒತ್ತಾಯಿಸಿದ ಅಪರಾಧ ವಿಭಾಗದ ಪೇದೆ ನವೀನ್ ಅಮಾನತು
Team Udayavani, Oct 24, 2022, 7:30 PM IST
ಕುಣಿಗಲ್: ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಶಪಡಿಸಿಕೊಂಡಿದ್ದ ಕಾರನ್ನು ಬಿಡುಗಡೆ ಮಾಡುವಂತೆ ನ್ಯಾಯಾಲಯ ಆದೇಶ ನೀಡಿತ್ತು, ಕಾರು ಬಿಡಲು ಹಣ ಕೇಳಿದ ಅಪರಾಧ ವಿಭಾಗದ ಪೇದೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್ ರನ್ನು ಸೇವೆಯಿಂದ ಅಮಾನತು ಪಡಿಸಿದ್ದಾರೆ.
ಕುಣಿಗಲ್ ಪೊಲೀಸ್ ಠಾಣೆಯ ಅಪರಾಧ ವಿಭಾಗದ ನವೀನ್ ಅಮಾನತುಗೊಂಡ ಪೇದೆ.
ಏನಿದು ಪ್ರಕರಣ: ವಕೀಲರೊಬ್ಬರ ಕಣ್ಣಿಗೆ ಖಾರದ ಪುಡಿ ಎರಚಿ ಹಲ್ಲೆ ನಡೆಸಿ, ನಗದು ಸೇರಿದಂತೆ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದ್ದ ತೃತೀಯ ಲಿಂಗಿಗಳು ಸೇರಿದಂತೆ ಐವರನ್ನು ಕುಣಿಗಲ್ ಪೊಲೀಸರು ಬಂಧಿಸಿ ಅವರಿಂದ ಕಾರು ಹಾಗೂ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದರು. ಕಾರಿನ ಮಾಲೀಕರು ವಕೀಲರ ಮೂಲಕ ಕಾರು ಬಿಡುಗಡೆಗೆ ನ್ಯಾಯಾಧೀಶರಲ್ಲಿ ಮನವಿ ಮಾಡಿದರು ಎನ್ನಲಾಗಿದೆ.
ಈ ನಿಟ್ಟಿನಲ್ಲಿ ನ್ಯಾಯಾಲಯವು ಕಾರು ಬಿಡುಗಡೆಗೆ ಆದೇಶ ನೀಡಿತ್ತು ಎನ್ನಲಾಗಿದೆ. ಆದರೆ ಕಾರು ಬಿಡುಗಡೆಗೆ ಪೇದೆ ನವೀನ್ 50 ಸಾವಿರ ರೂ.ಗಳು ಕೊಡುವಂತೆ ಕಾರು ಮಾಲೀಕರಿಗೆ ಒತ್ತಾಯಿಸಿದರು. ಈ ಸಂಬಂಧ ಕಾರು ಮಾಲೀಕರು ವಕೀಲರು ಮೂಲಕ ನ್ಯಾಯಾಧೀಶರ ಗಮನಕ್ಕೆ ತಂದಿದ್ದರು. ಈ ದಿಸೆಯಲ್ಲಿ ನ್ಯಾಯಾಧೀಶರು ಪೊಲೀಸ್ ಅಧಿಕಾರಿಗಳಿಗೆ ವರದಿ ನೀಡಿದ ಹಿನ್ನಲೆಯಲ್ಲಿ ನವೀನ್ ಅವರನ್ನು ಸೇವೆಯಿಂದ ಜಿಲ್ಲಾ ಎಸ್ಪಿ ಅವರು ಅಮಾನತು ಪಡಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು