ಶ್ರೀನಗರದಲ್ಲಿ ಉದ್ವಿಗ್ನ ಪರಿಸ್ಥಿತಿ, ಕರ್ಫ್ಯೂ ಜಾರಿ; ಪ್ರತಿಭಟನೆ, ಓರ್ವ ಬಲಿ, 6ಮಂದಿಗೆ ಗಾಯ
Team Udayavani, Aug 7, 2019, 2:47 PM IST
ಜಮ್ಮು-ಕಾಶ್ಮೀರ:ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಆರ್ಟಿಕಲ್ 370 ಮತ್ತು 35ಎ ಕಲಂ ಅನ್ನು ರದ್ದುಗೊಳಿಸಿದ ಬಳಿಕ ತಣ್ಣಗಿದ್ದ ಜಮ್ಮುಕಾಶ್ಮೀರದಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ. ಶ್ರೀನಗರದಲ್ಲಿ ಕರ್ಫ್ಯೂ ವಿಧಿಸಲಾಗಿದ್ದು, ಈ ವೇಳೆ ವ್ಯಕ್ತಿಯೊಬ್ಬ ಬಲಿಯಾಗಿರುವ ಘಟನೆ ಬುಧವಾರ ನಡೆದಿದೆ.
ಮುಂಜಾಗ್ರತಾ ಕ್ರಮವಾಗಿ ಜಮ್ಮು-ಕಾಶ್ಮೀರದಲ್ಲಿ ಪ್ರಮುಖ ರಾಜಕೀಯ ಮುಖಂಡರನ್ನು ಬಂಧಿಸಲಾಗಿದೆ. ಕೆಲವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ. ಶ್ರೀನಗರದಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಪ್ರತಿಭಟಿಸುತ್ತಿದ್ದ ಯುವಕನೊಬ್ಬನ ಬೆನ್ನಟ್ಟಿ ಹೋದಾಗ ಆತ ಝೇಲಂ ನದಿಗೆ ಹಾರಿದ್ದು, ಬಳಿಕ ಆತ ಸಾವನ್ನಪ್ಪಿರುವುದಾಗಿ ಹೆಸರು ಹೇಳಲು ಇಚ್ಛಿಸದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ನಿರತರಾಗಿದ್ದವರ ಮೇಲೆ ಗುಂಡು ಹಾರಿಸಿದ ಪರಿಣಾಮ ಆರು ಮಂದಿಯನ್ನು ಶ್ರೀನಗರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಎಫ್ ಪಿ ನ್ಯೂಸ್ ವರದಿ ಮಾಡಿದೆ. ಕಾಶ್ಮೀರ ಕಣಿವೆಯಲ್ಲಿ ಇಂಟರ್ನೆಟ್ ಸೇರಿದಂತೆ ಬಹುತೇಕ ಸೇವೆಗಳನ್ನು ಬಂದ್ ಮಾಡಲಾಗಿದೆ.
ನೂತನವಾಗಿ ಅಸ್ತಿತ್ವಕ್ಕೆ ಬಂದ ಜಮ್ಮು-ಕಾಶ್ಮೀರ ಕೇಂದ್ರಾಡಳಿ ಪ್ರದೇಶಕ್ಕೆ ಮತ್ತು ಲಡಾಖ್ ಗೆ ಇಂದು ನೂತನ ಲೆಫ್ಟಿನೆಂಟ್ ರಾಜ್ಯಪಾಲರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?