ರಾಜಕೀಯ ಹಿಂಸೆ, ವೈದ್ಯರ ಮುಷ್ಕರ : ಮಮತಾ ಸರಕಾರದಿಂದ ವರದಿ ಕೇಳಿದ ಕೇಂದ್ರ
Team Udayavani, Jun 15, 2019, 7:32 PM IST
ಹೊಸದಿಲ್ಲಿ: ಪಶ್ಚಿಮ ಬಂಗಾಲದಲ್ಲಿ ಈಚೆಗೆ ನಡೆದಿರುವ ರಾಜಕೀಯ ಹಿಂಸೆ ಮತ್ತು ಪ್ರಕೃತ ಸಾಗುತ್ತಿರುವ ವೈದ್ಯರ ಮುಷ್ಕರದ ಬಗ್ಗೆ ಕೇಂದ್ರ ಸರಕಾರ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಂದ ಪ್ರತ್ಯೇಕ ವರದಿಗಳನ್ನು ಕೇಳಿದೆ.
‘ಪಶ್ಚಿಮ ಬಂಗಾಲದಲ್ಲಿ ನಡೆಯುತ್ತಿರುವ ವೈದ್ಯ ಮುಷ್ಕರದ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳ ವೈದ್ಯರಿಂದ, ಆರೋಗ್ಯ ರಕ್ಷಣೆಯಲ್ಲಿ ತೊಡಗಿರುವ ವೃತ್ತಿಪರರಿಂದ ಮತ್ತು ವೈದ್ಯಕೀಯ ಸಂಘಗಳಿಂದ ನಮ್ಮ ಸಚಿವಾಲಯಕ್ಕೆ ಅಸಂಖ್ಯ ಮನವಿಗಳು, ದೂರುಗಳು ಬಂದಿವೆ. ಆದುದರಿಂದ ವೈದ್ಯರ ಮುಷ್ಕರಕ್ಕೆ ಸಂಬಂಧಿಸಿದಂತೆ ವಿಸ್ತೃತ ವರದಿಯನ್ನು ರಾಜ್ಯ ಸರಕಾರ ಕೊಡಬೇಕು’ ಎಂದು ಗೃಹ ಸಚಿವಾಲಯ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ತಿಳಿಸಿದೆ.
ಅದೇ ರೀತಿ ಪಶ್ಚಿಮ ಬಂಗಾಲದಲ್ಲಿ ಈಚೆಗೆ ಘಟಿಸಿರುವ ರಾಜಕೀಯ ಹಿಂಸಾ ಪ್ರಕರಣಗಳು ಮತ್ತು ಅಪರಾಧಿಗಳನ್ನು ಕಾನೂನು ಪ್ರಕಾರ ಶಿಕ್ಷಿಸಲು ತೆಗೆದುಕೊಂಡ ಕ್ರಮಗಳ ಕುರಿತಾಗಿಯೂ ಪಶ್ಚಿಮ ಬಂಗಾಲ ಸರಕಾರ ವಿವರವಾದ ವರದಿ ನೀಡಬೇಕು ಎಂದು ಗೃಹ ಸಚಿವಾಲಯ ಹೇಳಿದೆ.
2016ರಿಂದ 2019ರ ವರೆಗಿನ ಅವಧಿಯಲ್ಲಿ ಪಶ್ಚಿಮ ಬಂಗಾಲದಲ್ಲಿ ಸ್ಫೋಟಿಸಿರುವ ಚುನಾವಣೆ ಸಂಬಂಧಿತ ರಾಜಕೀಯ ಹಿಂಸೆಗಳು ತೀವ್ರ ಕಳವಳಕ್ಕೆ ಕಾರಣವಾಗಿವೆ ಎಂದು ಗೃಹ ಸಚಿವಾಲಯ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ