ಮರ್ಯಾದಾ ಹತ್ಯೆ ಆರೋಪ ಎದುರಿಸುತ್ತಿದ್ದ ರಾಜಕಾರಣಿ ನಿಗೂಢ ಸಾವು


Team Udayavani, Mar 8, 2020, 5:17 PM IST

ಮರ್ಯಾದಾ ಹತ್ಯೆ ಆರೋಪ ಎದುರಿಸುತ್ತಿದ್ದ ರಾಜಕಾರಣಿ ನಿಗೂಢ ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೈದ್ರಾಬಾದ್: ತನ್ನ ಇಚ್ಛೆಗೆ ವಿರುದ್ಧವಾಗಿ ತನ್ನ ಮಗಳನ್ನು ವಿವಾಹವಾಗಿದ್ದ ಅಳಿಯನನ್ನು ಕೊಲೆ ಮಾಡಿದ ಆರೋಪವನ್ನು ಎದುರಿಸುತ್ತಿದ್ದ ವ್ಯಕ್ತಿ ಇಲ್ಲಿನ ಅತಿಥಿ ಗೃಹ ಒಂದರಲ್ಲಿ ಅನುಮಾನಸ್ಪದವಾಗಿ ಸಾವಿಗೀಡಾಗಿರುವ ಘಟನೆ ಇಂದು ವರದಿಯಾಗಿದೆ.

ಸಂಶಯಾಸ್ಪದವಾಗಿ ಸಾವಿಗೀಡಾಗಿರುವ ತಿರುನಾಗರಿ ಮಾರುತಿ ರಾವ್ ಮಿರಿಯಾಲಗುಡದಲ್ಲಿ ಪ್ರಮುಖ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ರಾಜಕಾರಣಿಯಾಗಿದ್ದರು.

ಮನೆಯವರ ಪ್ರಬಲ ವಿರೋಧವಿದ್ದರೂ 2018ರಲ್ಲಿ ತನ್ನ ಮಗಳನ್ನು ವಿವಾಹವಾಗಿದ್ದ ದಲಿತ ಯುವಕ ಪೆರುಮಳ್ಳ ಪ್ರಣಯ್ ಮೇಲೆ ಆಕ್ರೋಶ ಹೊಂದಿದ್ದ ತಿರುನಾಗರಿ ಮಾರುತಿ ರಾವ್ 24 ವರ್ಷದ ತನ್ನ ಅಳಿಯನನ್ನು ಕೊಲೆ ಮಾಡಿದ ಆರೋಪದಲ್ಲಿ ಬಂಧಿತನಾಗಿ 2019ರ ಎಪ್ರಿಲ್ ತಿಂಗಳಿನಲ್ಲಿ ಜಾಮೀನಿನ ಮೇಲೆ ರಾವ್ ಹೊರಬಂದಿದ್ದರು.

55 ವರ್ಷ ಪ್ರಾಯದ ತಿರುನಾಗರಿ ಮಾರುತಿ ರಾವ್ ಅವರ ಮೃತದೇಹ ನಗರದ ಖೈರಟಾಬಾದ್ ನಲ್ಲಿರುವ ಆರ್ಯ ವೈಶ್ಯ ಅತಿಥಿಗೃಹದ ಕೊಠಡಿಯಲ್ಲಿ ಪತ್ತೆಯಾಗಿರುವುದಾಗಿ ಸೈಫಾಬಾದ್ ನ ಸಹಾಯಕ ಪೊಲೀಸ್ ಕಮಿಷನರ್ ಸಿ. ವೇಣುಗೋಪಾಲ್ ರೆಡ್ಡಿ ಅವರು ತಿಳಿಸಿದ್ದಾರೆ.

ಶನಿವಾರ ರಾತ್ರಿ ರಾವ್ ಅವರು ಈ ಅತಿಥಿ ಗೃಹದಲ್ಲಿ ತಂಗಿದ್ದರು ಮತ್ತು ಅವರ ಕಾರು ಚಾಲಕ ಇದೇ ಅತಿಥಿ ಗೃಹದ ಆವರಣದಲ್ಲಿ ಕಾರಿನಲ್ಲೇ ಮಲಗಿದ್ದರು ಎಂಬ ಪ್ರಾಥಮಿಕ ಮಾಹಿತಿಗಳನ್ನು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ರಾವ್ ಅವರ ಮೃತದೇಹವನ್ನು ಒಸ್ಮಾನಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಒಯ್ಯಲಾಗಿದೆ.

ಇಂದು ಬೆಳಿಗ್ಗೆ ರಾವ್ ಅವರ ಪತ್ನಿ ತನ್ನ ಪತಿಗೆ ಕರೆ ಮಾಡಿದ್ದ ಸಂದರ್ಭದಲ್ಲಿ ಅವರು ಕರೆ ಸ್ವೀಕರಿಸಿರಲಿಲ್ಲ. ಇದರಿಂದ ಅನುಮಾನಗೊಂಡ ರಾವ್ ಅವರ ಪತ್ನಿ ಕಾರು ಚಾಲಕನಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ಕಾರು ಚಾಲಕ ರಾವ್ ಅವರು ತಂಗಿದ್ದ ಕೊಠಡಿಗೆ ಬಂದು ನೋಡಿದಾಗ ಅವರು ಮೃತಪಟ್ಟಿರುವ ವಿಚಾರ ಬೆಳಕಿಗೆ ಬಂದಿದೆ.

ರಾವ್ ಅವರ ಮಗಳ ಗಂಡ ಪೆರುಮಳ್ಳ ಪ್ರಣಯ್ ನನ್ನು 2018ರ ಸೆಪ್ಟಂಬರ್ 14ರಂದು ಹಾಡುಹಗಲೇ ಕೊಲೆ ಮಾಡಲಾಗಿತ್ತು. ಪ್ರಣಯ್ ತನ್ನ ಗರ್ಭಿಣಿ ಪತ್ನಿ ಅಮೃತಾ ಅವರನ್ನು ವೈದ್ಯರಲ್ಲಿ ಕರೆದುಕೊಂಡು ಹೋಗಿ ವಾಪಾಸು ಬರುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಆಸ್ಪತ್ರೆಯ ಎದುರೇ ಕೊಲೆ ಮಾಡಲಾಗಿತ್ತು. ಮತ್ತು ಈ ಘಟನೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು.

ಪ್ರಣಯ್ ಹತ್ಯೆಯ ನಾಲ್ಕು ದಿನಗಳ ಬಳಿಕ ನಲಗೊಂಡ ಪೊಲೀಸರು ತಿರುನಾಗರಿ ಮಾರುತಿ ರಾವ್, ಇವರ ಸಹೋದರ ಶ್ರವಣ್ ಮತ್ತು ಇತರೇ ಮೂವರನ್ನು ಈ ಕೊಲೆಗೆ ಸಂಬಂಧಿಸಿದಂತೆ ಬಂಧಿಸಿದ್ದರು. ಶಂಕಿತ ಭಯೋತ್ಪಾದಕನೊಬ್ಬನ ನೆರವಿನೊಂದಿಗೆ ರಾವ್ ಬಿಹಾರ ಮೂಲದ ಸುಪಾರಿ ಹಂತಕರ ನೆರವಿನಿಂದ ತನ್ನ ಅಳಿಯನನ್ನು ಕೊಲೆ ಮಾಡಿಸಿದ್ದಾರೆ ಎಂದು ಪೊಲೀಸರು ಹೇಳಿದ್ದರು. ಮತ್ತು ಸುಪಾರಿ ಹಂತಕ ಸುಭಾಷ್ ಶರ್ಮಾನಿಗೆ ರಾವ್ ಅವರು ಒಂದು ಕೋಟಿ ರೂಪಾಯಿಗಳನ್ನು ನೀಡಿರುವ ಕುರಿತಾಗಿಯೂ ಪೊಲೀಸರು ತಮ್ಮ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದರು.

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.