ಸೇನಾ ವಿಚಾರ ಪಾಲಿಟಿಕ್ಸ್ : ರಾಷ್ಟ್ರಪತಿಗಳಿಗೆ ಪತ್ರ ಬರೆದವರು ಯಾರು?


Team Udayavani, Apr 12, 2019, 2:28 PM IST

Indian-Army-726

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ : Representative Image Used

ನವದೆಹಲಿ: ಸೇನಾ ವಿಷಯಗಳನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವುದನ್ನು ವಿರೋಧಿಸಿ ಭಾರತೀಯ ಸೇನೆಯ ಕೆಲವು ನಿವೃತ್ತ ಅಧಿಕಾರಿಗಳು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್‌ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ ಎಂಬ ಸುದ್ದಿಯೊಂದು ಗುರುವಾರದಂದು ಭಾರೀ ಸದ್ದು ಮಾಡಿತ್ತು. ಆದರೆ ಈ ರೀತಿಯಾಗಿ ಯಾರೂ ರಾಷ್ಟ್ರಪತಿಯವರಿಗೆ ಪತ್ರವನ್ನೇ ಬರೆದಿಲ್ಲ ಎಂಬ ಅಂಶ ಇದೀಗ ಬಯಲಾಗಿದೆ. ರಾಷ್ಟ್ರಪತಿ ಭವನದ ಕೆಲ ಮೂಲಗಳು ಈ ರೀತಿಯ ಯಾವುದೇ ಪತ್ರ ರಾಷ್ಟ್ರಪತಿ ಭವನ ಸ್ವೀಕರಿಸಿರುವುದನ್ನು ನಿರಾಕರಿಸಿದೆ ಎಂದು ಎ.ಎನ್‌.ಐ. ಸುದ್ದಿಸಂಸ್ಥೆ ವರದಿ ಮಾಡಿದೆ.

ನಿವೃತ್ತ ಸೇನಾ ಪ್ರಮುಖರೂ ಸೇರಿದಂತೆ ಸುಮಾರು 150 ಮಾಜೀ ಸೈನಿಕರು ಈ ಲೋಕಸಭಾ ಚುನಾವಣೆಯಲ್ಲಿ ಸಶಸ್ತ್ರ ದಳಗಳ ರಾಜಕೀಯಕರಣವಾಗುತ್ತಿದೆ ಎಂದು ಆರೋಪಿಸಿ ರಾಷ್ಟ್ರಪತಿಯವರಿಗೆ ಪತ್ರವೊಂದನ್ನು ಬರೆದಿದ್ದಾರೆ ಎಂದು ದೇಶದ ವಿವಿಧ ಮಾಧ್ಯಮಗಳು ಗುರುವಾರದಂದು ವರದಿ ಮಾಡಿದ್ದವು.

ಈ ಪತ್ರಕ್ಕೆ ಪ್ರಮುಖ ಸಹಿದಾರರೆಂದು ಹೇಳಲಾಗಿದ್ದ ನಿವೃತ್ತ ಜನರಲ್‌ ಸುನಿತ್‌ ಫ್ರಾನ್ಸಿಸ್‌ ರೋಡ್ರಿಗಸ್‌ ಅವರು ಈ ರೀತಿಯ ಆಕ್ಷೇಪಣಾ ಪತ್ರವೊಂದಕ್ಕೆ ತಾನು ಸಹಿ ಮಾಡಿರುವ ವಿಚಾರವನ್ನೇ ನಿರಾಕರಿಸಿದ್ದಾರೆ ಮತ್ತು ಈ ರೀತಿಯ ಸುದ್ದಿಯೇ ಸುಳ್ಳು ಎಂದು ಅವರು ಹೇಳಿದ್ದಾರೆ. ‘ಈ ರೀತಿಯ ಪತ್ರದ ಕುರಿತಾಗಿ ನನಗೇನೂ ಗೊತ್ತಿಲ್ಲ . ನನ್ನ ಜೀವಿತಾವಧಿಯುದ್ದಕ್ಕೂ ನಾನು ರಾಜಕೀಯದಿಂದ ದೂರವೇ ಇದ್ದೇನೆ. ನನ್ನ 42 ವರ್ಷಗಳ ಸೇವಾವಧಿಯ ಬಳಿಕ ಇದೀಗ ನನಗೆ ರಾಜಕೀಯ ಒಗ್ಗುವುದಿಲ್ಲ ಎಂದು ನನಗೆ ಗೊತ್ತಿದೆ. ಮತ್ತೆ ಇಂತಹ ಸುಳ್ಳು ಸುದ್ದಿಗಳನ್ನು ಸೃಷ್ಟಿಸುತ್ತಿರುವ ವ್ಯಕ್ತಿಗಳು ಯಾರೆಂದೂ ನನಗೆ ಗೊತ್ತಿಲ್ಲ ಎಂದವರು ಹೆಳಿದ್ದಾರೆ.

ಇನ್ನು ಏರ್‌ ಚೀಫ್ ಮಾರ್ಷಲ್‌ ನಿರ್ಮಲ ಚಂದ್ರ ಸೂರಿ ಅವರು ತಮ್ಮ ಹೇಳಿಕೆಯನ್ನೇ ತಪ್ಪಾಗಿ ಬಿಂಬಿಸಲಾಗಿದೆ ಎಂದು ಹೇಳಿದ್ದಾರೆ. ‘ನಮ್ಮ ಸಶಸ್ತ್ರ ಪಡೆಗಳು ರಾಜಕೀಯ ಮುಕ್ತವಾಗಿವೆ ಮತ್ತು ಚುನಾವಣೆಯಲ್ಲಿ ಆರಿಸಿ ಬರುವ ಸರಕಾರವನ್ನು ಬೆಂಬಲಿಸುತ್ತವೆ. ಮತ್ತು ಇಂತಹ ಯಾವುದೇ ಪತ್ರಕ್ಕೆ ನನ್ನ ಸಮ್ಮತಿಯನ್ನು ಪಡೆದುಕೊಂಡಿಲ್ಲ’ ಎಂದು ಸೂರಿ ಅವರು ಸ್ಪಷ್ಟಪಡಿಸಿದ್ದಾರೆ.

150 ಮಾಜೀ ಸೇನಾಧಿಕಾರಿಗಳ ಸಹಿಯೊಂದಿಗೆ ರಾಷ್ಟ್ರಪತಿಯವರಿಗೆ ಸಲ್ಲಿಸಲಾಗಿದೆ ಎಂದು ಹೇಳಲಾಗುತ್ತಿರುವ ಈ ಪತ್ರ ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.