Supreme Court ತೀರ್ಪಿನಿಂದ ರಾಜಕಾರಣ ಸ್ವಚ್ಛ : ಪ್ರಧಾನಿ ಮೋದಿ

ಭ್ರಷ್ಟ ಜನಪ್ರತಿನಿಧಿಗಳಿಂದ ಪ್ರಜಾಪ್ರಭುತ್ವಕ್ಕೆ ಹಾನಿ: ಸುಪ್ರೀಂ ಅಭಿಪ್ರಾಯ

Team Udayavani, Mar 5, 2024, 6:00 AM IST

supreem

ಹೊಸದಿಲ್ಲಿ: ಶಾಸನಸಭೆಗಳ ಸದಸ್ಯರ ಭ್ರಷ್ಟಾಚಾರ ಮತ್ತು ಲಂಚಗುಳಿತನವು ಸಂಸದೀಯ ಪ್ರಜಾಪ್ರಭುತ್ವದ ಅಡಿಪಾಯವನ್ನು ಬುಡಮೇಲು ಮಾಡುತ್ತದೆ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ. ಮತ ಚಲಾಯಿಸಲು ಮತ್ತು ಮಾತನಾಡಲು ಲಂಚ ಪಡೆಯುವ ಸಂಸದರು ಹಾಗೂ ಶಾಸಕರಿಗೆ ವಿಚಾರಣೆ ಯಿಂದ ವಿನಾಯಿತಿ ಒದಗಿಸಿದ್ದ 1998ರ ತೀರ್ಪು ರದ್ದುಪಡಿಸಿದ ಸುಪ್ರೀಂ ಕೋರ್ಟ್‌, ಶಾಸನ ಸಭೆಗಳ ಸಮಿತಿಗಳಲ್ಲಿ ಕೆಲಸ ಮಾಡುವ ಸದಸ್ಯರು ಸ್ವ ಪ್ರೇರಣೆಯಿಂದ ಮತ್ತು ಸದನದ ಕಾರ್ಯ ಕಲಾಪದ ಅಂತಃಸತ್ವವನ್ನು ಹೆಚ್ಚಿಸುವಂತಿರಬೇಕು ಎಂದು ಹೇಳಿದೆ.

ಶಾಸನಸಭೆಗಳ ಸದಸ್ಯರ ಭ್ರಷ್ಟಾಚಾರವು ಸಂವಿಧಾನದ ಆಕಾಂಕ್ಷೆಗಳು ಮತ್ತು ಪರ್ಯಾ ಲೋಚನೆಯ ತತ್ತÌಗಳನ್ನು ಹಾಳು ಮಾಡುತ್ತದೆ. ಇದು ಜವಾಬ್ದಾರಿಯುತ, ಸ್ಪಂದಿಸುವ ಮತ್ತು ಪ್ರಾತಿನಿಧಿಕ ಪ್ರಜಾಪ್ರಭುತ್ವ ದಿಂದ ನಾಗರಿಕರನ್ನು ವಂಚಿತಗೊಳಿಸುವ ರಾಜಕೀಯ ವಾತಾವರಣಕ್ಕೆ ಕಾರಣವಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

1993ರಲ್ಲಿ ಪಿ.ವಿ. ನರಸಿಂಹ ರಾವ್‌ ಸರಕಾರವು ಅಲ್ಪ ಮತಕ್ಕೆ ಕುಸಿದಿತ್ತು. ಆಗ ಮಂಡಿಸಲಾದ ಅವಿಶ್ವಾಸ ನಿರ್ಣಯವನ್ನು, ಜೆಎಂಎಂನ ಐದು ಸಂಸದರ ನೆರವಿನಿಂದ ನರಸಿಂಹ ರಾವ್‌ ಸರಕಾರವು ಸೋಲಿಸಿತ್ತು. ಮರು ವರ್ಷವೇ ವಿಶ್ವಾಸ ಗೆಲ್ಲಲು ಸಂಸದರ ಲಂಚ ಪಡೆದಿದ್ದಾರೆಂಬ ಮಾಹಿತಿ ಹೊರ ಬಿತ್ತು. ಇದು, “ಮತಕ್ಕಾಗಿ ಲಂಚ’ ಪ್ರಕರಣ ಎಂದು ಕುಖ್ಯಾತಿ ಪಡೆಯಿತು.

ಈ ಪ್ರಕರಣದ ಕುರಿತು 1998ರಲ್ಲಿ ಸುಪ್ರೀಂ ಕೋರ್ಟ್‌ ಐವರು ನ್ಯಾಯಮೂರ್ತಿಗಳ ಸಂವಿಧಾನವು ಪೀಠವು ನೀಡಿ, ಸಂವಿಧಾನ ಒದಗಿ ಸುವ ವಿಶೇಷ ರಕ್ಷಣೆ ಯಡಿ ಆರೋಪಿತ ಸಂಸದರ ವಿಚಾರಣೆಯಿಂದ ವಿನಾಯಿತಿ ನೀಡಿತ್ತು.

ಆರ್ಟಿಕಲ್‌ 105, 194 ಏನು ಹೇಳುತ್ತವೆ?: ತಮ್ಮ ವಿರುದ್ಧ ಯಾವುದೇ ಕಾನೂನಿನ ಕ್ರಮದ ಭಯ ಇಲ್ಲದೇ ಕಾರ್ಯ ನಿರ್ವಹಿಸಲು ಸಂಸದರು ಮತ್ತು ಶಾಸಕರಿಗೆ ಸಂವಿಧಾನದ ಆರ್ಟಿಕಲ್‌ 105 ಮತ್ತು 194 ರಕ್ಷಣೆಯನ್ನು ಒದಗಿಸುತ್ತದೆ.

ಸದನದೊಳಗೆ ಸದಸ್ಯರಿಗೆ ವಾಕ್‌ ಸ್ವಾತಂತ್ರ್ಯ ಮತ್ತು ಅವರು ಮಾಡುವ ಟೀಕೆ, ಟಿಪ್ಪಣೆಗಳಿಗೆ ಅಥವಾ ಸಂಸತ್‌ ಅಥವಾ ಸದನ ಸಮಿತಿಯಲ್ಲಿ ಮತ ಚಲಾವಣೆ ಸಂಬಂಧ ಶಕ್ತಿಯನ್ನು ನೀಡು ತ್ತದೆ. ಉದಾಹರಣೆಗೆ, ಸಂಸದ ಅಥವಾ ಶಾಸಕರು, ಸದನದಲ್ಲಿ ಮಾಡಿದ ಟೀಕೆಗಳಿಗೆ ಮಾನನಷ್ಟ ಮೊಕದ್ದಮೆಯನ್ನು ಎದುರಿಸಲು ಸಾಧ್ಯವಿಲ್ಲ. ಒಂದು ವೇಳೆ, ಜನಪ್ರತಿನಿಧಿಗಳು ಆಕ್ಷೇಪಾರ್ಹ ಟೀಕೆಯನ್ನು ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲು ಸ್ಪೀಕರ್‌ಗೆ ಅಧಿಕಾರ ವಿರುತ್ತದೆಯೇ ಹೊರತು ಕೋರ್ಟ್‌ಗಲ್ಲ.

ಲಂಚ ಪ್ರಕರಣಗಳು
2005ರ ಪ್ರಶ್ನೆಗಾಗಿ ಲಂಚ
ಸಂಸತ್‌ ಸದಸ್ಯರು ಪ್ರಶ್ನೆ ಕೇಳಲು ಲಂಚ ಪಡೆಯುತ್ತಿ ದ್ದಾರೆಂಬ ಮಾಹಿತಿಯು 2005ರಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿತ್ತು. ಆನ್‌ಲೈನ್‌ ಸುದ್ದಿ ತಾಣ ಕೋಬ್ರಾಪೋಸ್ಟ್‌ ನಡೆಸಿದ ಸ್ಟಿಂಗ್‌ ಆಪರೇಶನ್‌ನಲ್ಲಿ ಈ ಲಂಚ ಪ್ರಕರಣ ಬಯಲಾಗಿತ್ತು. ಲೋಕಸಭೆಯ 10 ಮತ್ತು ರಾಜ್ಯಸಭೆ ಒಬ್ಬ ಸಂಸದರ ವಿರುದ್ಧ ಆರೋಪ ಕೇಳಿ ಬಂದಿತ್ತು. ಈ ಪೈಕಿ ಬಿಜೆಪಿಯ 6 ಸಂಸದರಿದ್ದರೆ, ಬಿಎಸ್ಪಿಯಿಂದ ಮೂವರು ಮತ್ತು ಆರ್‌ಜೆಡಿ, ಕಾಂಗ್ರೆಸ್‌ನಿಂದ ತಲಾ ಒಬ್ಬ ಸದಸ್ಯರಿದ್ದರು. 2005 ಡಿಸೆಂಬರ್‌ 24ರಂದು ಸಂಸತ್ತಿನಿಂದ ಈ 11 ಸಂಸದರನ್ನು ಉಚ್ಚಾಟಿಸಲಾಗಿತ್ತು.

2008ರ ಮತಕ್ಕಾಗಿ ಲಂಚ
ಅಮೆರಿಕ-ಭಾರತ ಅಣು ಒಪ್ಪಂದ ಸಂಬಂಧ ಯುಪಿಎ-1 ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಎಡ ಪಕ್ಷಗಳು ವಾಪಸ್‌ ಪಡೆದುಕೊಂಡಿದ್ದವು. ಸರಕಾರ ಅಲ್ಪಮತಕ್ಕೆ ಕುಸಿದಿದ್ದರಿಂದ, ಅಂದಿನ ಪ್ರಧಾನಿ ಡಾ| ಮನಮೋಹನ್‌ ಸಿಂಗ್‌ ಅವರು, 2008 ಜುಲೈ 22ರಂದು ವಿಶ್ವಾಸಮತ ಗೆದ್ದಿದ್ದರು. ಆದರೆ “ಮತಕ್ಕಾಗಿ ಲಂಚ’ ನೀಡಲಾಗಿದೆ ಎಂದು ಬಿಜೆಪಿ ಆರೋಪಿಸಿತ್ತು. ಎಸ್‌ಪಿ ನಾಯಕ ದಿ| ಅಮರ್‌ ಸಿಂಗ್‌, ಬಿಜೆಪಿಯ ಸುಧೀಂದ್ರ ಕುಲಕರ್ಣಿ ಸಹಿತ 7 ಸದಸ್ಯರು ಹಣದ ಕಂತೆಗಳನ್ನು ಸದನದಲ್ಲಿ ಪ್ರದರ್ಶಿಸಿದ್ದರು.

2023ರ ಮಹುವಾ ಕೇಸ್‌
ಟಿಎಂಸಿ ಸಂಸದೆಯಾಗಿದ್ದ ಮಹುವಾ ಮೊಯಿತ್ರಾ ಅವರು ಪ್ರಧಾನಿ ಮೋದಿ ಮತ್ತು ಅದಾನಿ ಗ್ರೂಪ್‌ ವಿರುದ್ಧ ಸದನದಲ್ಲಿ ಪ್ರಶ್ನೆಗಳನ್ನು ಕೇಳಲು, ಉದ್ಯಮಿಯೊಬ್ಬರಿಂದ ಲಂಚ ಸ್ವೀಕರಿಸಿದ್ದಾರೆಂದು ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಅವರು ಸ್ಪೀಕರ್‌ಗೆ ದೂರು ನೀಡಿದ ಬಳಿಕ, ಇಡೀ ಪ್ರಕರಣ ಬಯಲಾಗಿತ್ತು. ಈ ಪ್ರಕರಣವನ್ನು ವಿಚಾರಣೆ ನಡೆಸಿದ ಸಂಸತ್ತಿನ ನೈತಿಕ ಸಮಿತಿಯ, ಮಹುವಾ ಮೋಯಿತ್ರಾ ದೋಷಿ ಎಂದು ಹೇಳಿತ್ತು. ಬಳಿಕ, ಲೋಕಸಭೆಯಿಂದ ಅವರನ್ನು ಉಚ್ಚಾಟಿಸಲಾಯಿತು.

ಸುಪ್ರೀಂ ತೀರ್ಪಿನಿಂದ ರಾಜಕಾರಣ ಸ್ವಚ್ಛ: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪಿಗೆ ಪ್ರಧಾನಿ ನರೇಂದ್ರ ಮೋದಿ “ಸ್ವಾಗತಂ’ ಎಂದು ಟ್ವೀಟ್‌ ಮಾಡಿದ್ದಾರೆ. ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದ್ದು, ಇದು ಸ್ವಚ್ಛ ರಾಜಕಾರಣವನ್ನು ಖಚಿಪಡಿಸುತ್ತದೆ ಮತ್ತು ವ್ಯವಸ್ಥೆಯ ಮೇಲಿನ ಜನರ ನಂಬಿಕೆಯನ್ನು ಹೆಚ್ಚಿಸುತ್ತದೆ ಎಂದು ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.